Homeಅಂತರಾಷ್ಟ್ರೀಯಕಾಬೂಲ್ ಆತ್ಮಾಹುತಿ ದಾಳಿ: 13 ಅಮೆರಿಕಾ ಸೈನಿಕರು, 60 ನಾಗರಿಕರು ಸಾವು

ಕಾಬೂಲ್ ಆತ್ಮಾಹುತಿ ದಾಳಿ: 13 ಅಮೆರಿಕಾ ಸೈನಿಕರು, 60 ನಾಗರಿಕರು ಸಾವು

- Advertisement -
- Advertisement -

ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಗುರುವಾರ ನಡೆದ ಅವಳಿ ಆತ್ಮಹತ್ಯಾ ಬಾಂಬ್‌ ದಾಳಿ ಮತ್ತು ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 13 ಅಮೆರಿಕಾ ಸೈನಿಕರು ಸೇರಿದಂತೆ ಹಲವಾರು ಜನರು ಸಾವನ್ನಪ್ಪಿದರು. ತಾಲಿಬಾನ್ ನಿಯಂತ್ರಿತ ಅಘ್ಘಾನ್‌ನಿಂದ ಜನರನ್ನು ಸ್ಥಳಾಂತರ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಈ ದುರಂತದಲ್ಲಿ 60 ಅಘ್ಘಾನ್‌ ನಾಗರಿಕರು, 13 ಅಮೆರಿಕಾದ ಸೈನಿಕರು ಸಾವನ್ನಪ್ಪಿದ್ದು ಮೃತಪಟ್ಟವರ ಸಂಖ್ಯೆ 73 ದಾಟಿದೆ. ಘಟನೆಯಲ್ಲಿ 18 ಯೋಧರು, 143ಕ್ಕೂ ಹೆಚ್ಚು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಘ್ಘಾನ್ ಮತ್ತು ಅಮೆರಿಕಾ ಸೆಂಟ್ರಲ್ ಕಮಾಂಡ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ಸ್ಥಲೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೊತ್ತುಕೊಂಡಿದೆ. ಟೆಲಿಗ್ರಾಂ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

ಅಧ್ಯಕ್ಷ ಜೋ ಬಿಡೆನ್ ಐಸಿಸ್ ಉಗ್ರರ ಕೆಲಸಕ್ಕೆ ಪ್ರತಿಕಾರದ ಮಾತುಗಳನ್ನಾಡಿದ್ದಾರೆ. “ಬಾಂಬ್ ದಾಳಿಯ ಹೊರತಾಗಿಯೂ ಅಮೆರಿಕಾದ ನಾಗರಿಕರು ಮತ್ತು ಇತರರನ್ನು ಸ್ಥಳಾಂತರಿಸುವ ಕೆಲಸ ಮುಂದುವರೆಯುತ್ತದೆ. ಈ ಘಟನೆಗೆ ಕಾರಣರಾದವರನ್ನು ಶಿಕ್ಷಿಸದೆ ಬಿಡುವುದಿಲ್ಲ. ನಾವು ಇವರನ್ನು ಕ್ಷಮಿಸುವುದಿಲ್ಲ. ಈ ಘಟನೆ ಮರೆಯುವುದಿಲ್ಲ. ನಾವು ನಿಮ್ಮನ್ನು ಬೇಟೆಯಾಡುತ್ತೇವೆ ” ಎಂದು ಪ್ರತಿಜ್ಞೆ ಮಾಡಿದ್ದಾರೆ.

ಈ ಹಿಂದೆ ಜೋ ಬಿಡೆನ್, ಐಸಿಸ್ ದಾಳಿಯ ಬೆದರಿಕೆಯಿಂದಾಗಿ ಅಮೆರಿಕನ್ ಪಡೆಗಳು ಅಫ್ಘಾನಿಸ್ತಾನವನ್ನು ತೊರೆಯಬೇಕು. ಮಂಗಳವಾರದ ವೇಳೆಗೆ ಏರ್ ಲಿಫ್ಟ್ ಕೊನೆಗೊಳ್ಳುತ್ತದೆ ಎಂದು ಹೇಳಿದ್ದರು.

ಆಗಸ್ಟ್ 15 ರಂದು ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ 1,00,000 ಕ್ಕೂ ಹೆಚ್ಚು ಜನರನ್ನು ಅಫ್ಘಾನಿಸ್ತಾನದಿಂದ  ಸ್ಥಳಾಂತರಿಸಲಾಗಿದೆ. ಅಂದಿನಿಂದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಸಾವಿರಾರು ಮಂದಿ ಬೇರೆಡೆ ಹೋಗಲು ಕಾಯುತ್ತಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....