Homeಮುಖಪುಟಛತ್ತೀಸ್‌ಗಡ: ಅಧಿಕಾರ ಹಸ್ತಾಂತರಕ್ಕೆ ನಿರ್ದೇಶಿಸಿದ ಕಾಂಗ್ರೆಸ್; ಕೊನೆಯ ಪ್ರಯತ್ನದತ್ತ ಭೂಪೇಶ್‌!

ಛತ್ತೀಸ್‌ಗಡ: ಅಧಿಕಾರ ಹಸ್ತಾಂತರಕ್ಕೆ ನಿರ್ದೇಶಿಸಿದ ಕಾಂಗ್ರೆಸ್; ಕೊನೆಯ ಪ್ರಯತ್ನದತ್ತ ಭೂಪೇಶ್‌!

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟು ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಒಪ್ಪಿದಂತೆ ಅಧಿಕಾರದ ಹಸ್ತಾಂತರವನ್ನು ಸರಾಗವಾಗಿ ಮಾಡುವಂತೆ ಮುಖ್ಯಮಂತ್ರಿ ಭೂಪೇಶ್‌ ಬಘೇಲ್ ಅವರಲ್ಲಿ ಪಕ್ಷದ ಕೇಂದ್ರ ನಾಯಕತ್ವವೂ ಹೇಳಿಕೊಂಡಿದೆ ಎಂದು TNIE ವರದಿ ಮಾಡಿದೆ. ಎರಡು ವರ್ಷಗಳ ಹಿಂದೆ ಮಾತುಕತೆಯಾಗಿರುವಂತೆ ತಮ್ಮ ಸಂಪುಟದ ಸಹೋದ್ಯೋಗಿ ಟಿಎಸ್‌ ಸಿಂಗ್ ದಿಯೋಗೆ ಅಧಿಕಾರ ವರ್ಗಾಯಿಸುವಂತೆ ಕಾಂಗ್ರೆಸ್ ಕೇಂದ್ರ ನಾಯಕತ್ವವು ಮುಖ್ಯಮಂತ್ರಿಗೆ ನಿರ್ದೇಶನ ನೀಡಿದೆ.

ಅದಾಗಿಯು, ಭೂಪೇಶ್‌ ಅವರ ಬೆಂಬಲಿಗ ಶಾಸಕರು ಇದನ್ನು ಇನ್ನೂ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಈಗಾಗಲೆ ಒಂದೆರೆಡು ಮಂತ್ರಿಗಳು, ಹಿರಿಯ ಶಾಸಕರು ಸೇರಿದಂತೆ ಹಲವರು ಗುರುವಾರ ರಾತ್ರಿ ದೆಹಲಿಗೆ ಹಾರಿದ್ದು, ಪಕ್ಷದ ಹೈಕಮಾಂಡ್‌‌ ಮುಂದೆ ಭೂಪೇಶ್‌ ಅವರ ಪರವಾಗಿ ನಿಲ್ಲಲಿದೆ.

ಇದನ್ನೂ ಓದಿ: ಛತ್ತೀಸ್‌ಗಡ ಸರ್ಕಾರದಲ್ಲಿ ಬಂಡಾಯ: ಕಾಂಗ್ರೆಸ್‌ಗೆ ಹೊಸ ತಲೆ ನೋವು!

ಈ ವಾರದ ಆರಂಭದಲ್ಲಿ ಭೂಪೇಶ್‌ ಮತ್ತು ದಿಯೋ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದರು. ಆದರೆ ಶುಕ್ರವಾರ(ಇಂದು) ಕೂಡಾ ಭೂಪೇಶ್‌ ಅವರು ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

“ಸಭೆಯಲ್ಲಿ, 2018 ರ ವಿಧಾನಸಭಾ ಚುನಾವಣೆಯ ನಂತರ ಅವರೆ ಒಪ್ಪಿಕೊಂಡ ಅಧಿಕಾರ ಹಸ್ತಾಂತರದ ಸೂತ್ರವನ್ನು ಅನುಸರಿಸಲು ಭೂಪೇಶ್‌ ಅವರಿಗೆ ತಿಳಿಸಲಾಯಿತು. ಪಕ್ಷವು ಇದನ್ನು ಒಮ್ಮತದ ಮೂಲಕ ಮಾಡಲು ಬಯಸಿದೆ. ಆದರೆ ಈಗ ಅವರು ತಮ್ಮ ಪರವಾಗಿರುವ ಶಾಸಕರ ಮೂಲಕ ಅಧಿಕಾರದಲ್ಲಿ ಉಳಿಯಲು ಒತ್ತಡ ಹೇರುತ್ತಿದ್ದಾರೆ” ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ: ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ಈ ಮಧ್ಯೆ ಇಬ್ಬರೂ ನಾಯಕರು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿಕೊಂಡಿದ್ದಾರೆ.

ಆದರೆ, “ಸರ್ಕಾರ ರಚೆನೆಯಾಗುವ ವೇಳೆಗೆ ಎರಡುವರೆ ವರ್ಷಗಳ ನಂತರ ಅಧಿಕಾರವನ್ನು ಹಸ್ತಾಂತರ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಮುಖ್ಯಮಂತ್ರಿ ಭೂಪೇಶ್‌‌‌ ಅವರೇ ಅದಕ್ಕೆ ಒಪ್ಪಿಕೊಂಡಿದ್ದರು” ಎಂದು ಈ ಹಿಂದೆ ಟಿಎಸ್‌ ಸಿಂಗ್ ದಿಯೊ ಪ್ರತಿಪಾದಿಸುತ್ತಿದ್ದರು. ಅಷ್ಟೆ ಅಲ್ಲದೆ ಆಪ್ತರು ಕೂಡಾ ಅವರಿಗೆ ಅಧಿಕಾರ ಸಿಗದೆ ಇದ್ದರೆ ಸರ್ಕಾರದಿಂದ ಮಾತ್ರವಲ್ಲ, ಪಕ್ಷದಿಂದಲೆ ಹೊರಹೋಗಲಿದ್ದಾರೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

2018 ರಲ್ಲಿ ಛತ್ತೀಸ್‌ಗಡ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ, ಮುಖ್ಯಮಂತ್ರಿ ರೇಸ್‌ನಲ್ಲಿ ಟಿಎಸ್‌‌ ಸಿಂಗ್ ದಿಯೋ ದೇವ ಮತ್ತು ತಾಮ್ರಧ್ವಾಜ್ ಸಾಹು ಮತ್ತು ಭೂಪೇಶ್‌ ಬಘೇಲ್‌ ಇದ್ದರು. ಅಂತಿಮವಾಗಿ ಭೂಪೇಶ್ ಮುಖ್ಯಮಂತ್ರಿಯಾಗಿ, ಉಳಿದ ಇಬ್ಬರಿಗೆ ಮಂತ್ರಿ ಸ್ಥಾನಗಳನ್ನು ನೀಡಲಾಗಿತ್ತು.

ಇದನ್ನೂ ಓದಿ: ಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...