Homeಮುಖಪುಟಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

'ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು ಎಂಬ ಮಾತುಗಳಿಗೆ ಕೊನೆಹಾಡಿ'

- Advertisement -
- Advertisement -

ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ ಎಂದು ನಟೆ, ಮಾಜಿ ಸಂಸದೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದ ಬೆನ್ನಲ್ಲೇ “ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದರು.

ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಟಿ ರಮ್ಯಾ ಕೂಡ ಮಹಿಳೆಯರದ್ದೇ ತಪ್ಪು ಎನ್ನುವವರ ವಿರುದ್ಧ, ಮಹಿಳೆಯರ ಮೇಲೆ ನಡೆಯುವ ಅಪರಾಧಗಳ ಬಗ್ಗೆ ಕುರುಡಾಗದಿರಿ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ರಮ್ಯಾ ಅವರ ಇನ್​ಸ್ಟಾಗ್ರಾಮ್ ಪೋಸ್ಟ್ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

 

 

View this post on Instagram

 

A post shared by Ramya/Divya Spandana (@divyaspandana)

” ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ” ಎಂದಿದ್ದಾರೆ.

“ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು  ತುಂಬ ಬಿಗಿ ಆದಂತಹ, ತುಂಬ ಸಡಿಲ ಆಗಿರುವಂತಹ ಬಟ್ಟೆ ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್‌ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್‌, ನೀವು ಕಣ್ಣು ಮಿಟುಕಿಸಬಾರದಿತ್ತು..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು… ಏಕೆ..? ಏಕೆಂದರೆ ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು- ಇಲ್ಲ. ಇಲ್ಲ… ಇಂಥ ಅಸಂಬದ್ಧವೆಲ್ಲ ಕೊನೆಯಾಗಬೇಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ಒಪ್ಪಿಕೊಳ್ಳುವ ತಪ್ಪನ್ನು ನಾನೂ ಮಾಡಿದ್ದೇನೆ. ಸ್ನೇಹಿತರಿಗೂ ಹೇಳಿದ್ದೇನೆ. ಆದರೆ ಇನ್ಮುಂದೆ ಸಾಧ್ಯವಿಲ್ಲ. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ನೋಡಿಕೊಂಡು ಸುಮ್ಮನಿರಬೇಡಿ, ಕುರುಡಾಗದಿರಿ. ಧ್ವನಿ ಎತ್ತಿ’ ಇದು ಇಂದಿಗೆ ಕೊನೆಯಾಗಲಿ” ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...