Homeಮುಖಪುಟಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

'ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು ಎಂಬ ಮಾತುಗಳಿಗೆ ಕೊನೆಹಾಡಿ'

- Advertisement -
- Advertisement -

ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ ಎಂದು ನಟೆ, ಮಾಜಿ ಸಂಸದೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದ ಬೆನ್ನಲ್ಲೇ “ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದರು.

ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಟಿ ರಮ್ಯಾ ಕೂಡ ಮಹಿಳೆಯರದ್ದೇ ತಪ್ಪು ಎನ್ನುವವರ ವಿರುದ್ಧ, ಮಹಿಳೆಯರ ಮೇಲೆ ನಡೆಯುವ ಅಪರಾಧಗಳ ಬಗ್ಗೆ ಕುರುಡಾಗದಿರಿ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ರಮ್ಯಾ ಅವರ ಇನ್​ಸ್ಟಾಗ್ರಾಮ್ ಪೋಸ್ಟ್ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

 

 

View this post on Instagram

 

A post shared by Ramya/Divya Spandana (@divyaspandana)

” ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ” ಎಂದಿದ್ದಾರೆ.

“ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು  ತುಂಬ ಬಿಗಿ ಆದಂತಹ, ತುಂಬ ಸಡಿಲ ಆಗಿರುವಂತಹ ಬಟ್ಟೆ ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್‌ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್‌, ನೀವು ಕಣ್ಣು ಮಿಟುಕಿಸಬಾರದಿತ್ತು..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು… ಏಕೆ..? ಏಕೆಂದರೆ ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು- ಇಲ್ಲ. ಇಲ್ಲ… ಇಂಥ ಅಸಂಬದ್ಧವೆಲ್ಲ ಕೊನೆಯಾಗಬೇಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ಒಪ್ಪಿಕೊಳ್ಳುವ ತಪ್ಪನ್ನು ನಾನೂ ಮಾಡಿದ್ದೇನೆ. ಸ್ನೇಹಿತರಿಗೂ ಹೇಳಿದ್ದೇನೆ. ಆದರೆ ಇನ್ಮುಂದೆ ಸಾಧ್ಯವಿಲ್ಲ. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ನೋಡಿಕೊಂಡು ಸುಮ್ಮನಿರಬೇಡಿ, ಕುರುಡಾಗದಿರಿ. ಧ್ವನಿ ಎತ್ತಿ’ ಇದು ಇಂದಿಗೆ ಕೊನೆಯಾಗಲಿ” ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...