Homeಮುಖಪುಟದೆಹಲಿ ಗಲಭೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ಆಯ್ಕೆ ಮಾಡಲಿರುವ ಪೊಲೀಸರು, ಪ್ರಶ್ನಿಸಿದ ಆಪ್ ಸರ್ಕಾರ

ದೆಹಲಿ ಗಲಭೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ಆಯ್ಕೆ ಮಾಡಲಿರುವ ಪೊಲೀಸರು, ಪ್ರಶ್ನಿಸಿದ ಆಪ್ ಸರ್ಕಾರ

- Advertisement -
- Advertisement -

ಈ ವರ್ಷದ ಗಣರಾಜ್ಯೋತ್ಸವದ ಸಮಯದಲ್ಲಿ ದೆಹಲಿಯ ಕೆಂಪುಕೋಟೆಯ ಬಳಿ ನಡೆದ ಗದ್ದಲಗಳು ಮತ್ತು ಮತ್ತು ಕಳೆದ ವರ್ಷದ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾಗಿ (ಎಸ್‌ಪಿಪಿ) ಪೊಲೀಸರು ಆಯ್ಕೆ ಮಾಡುವ ವಕೀಲರನ್ನು ನೇಮಿಸಲು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ನಿರ್ಧರಿಸಿದ್ದಾರೆ.

ಈ ನಿರ್ಧಾರವನ್ನು ಪ್ರಶ್ನಿಸಿ ಕೇಜ್ರಿವಾಲ್‌‌ ನೇತೃತ್ವದ ಎಎಪಿ ಸರ್ಕಾರವು ದೆಹಲಿ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ. ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್‌ ಶುಕ್ರವಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರ ಉತ್ತರವನ್ನು ಕೋರಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠವು ದೆಹಲಿ ಲೆಫ್ಟಿನೆಂಟ್‌ ಅವರಿಗೆ ನೋಟಿಸ್ ನೀಡಿದೆ. ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಹಾಗೂ ನಿರ್ಧಾರವನ್ನು ತಡೆಹಿಡಿಯಲು ಅರ್ಜಿಯನ್ನು ಸಲ್ಲಿಸುವಂತೆ ಎಲ್‌ಜಿಯನ್ನು ಕೇಳಿದೆ.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 21 ರಂದು ಮುಂದಿನ ನಡೆಸುವುದಾಗಿ ನ್ಯಾಯಾಲಯವು ಪಟ್ಟಿ ಮಾಡಿದೆ.

ಹೈಕೋರ್ಟ್‌ನಲ್ಲಿ ದೆಹಲಿ ಸರ್ಕಾರವನ್ನು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ರಾಹುಲ್ ಮೆಹ್ರಾ ಪ್ರತಿನಿಧಿಸಿದ್ದಾರೆ. ಅವರು ವಕೀಲರನ್ನು ಎಸ್‌ಪಿಪಿಗಳಾಗಿ ಆಯ್ಕೆ ಮಾಡಲು ದೆಹಲಿ ಪೊಲೀಸರಿಗೆ ಅವಕಾಶ ನೀಡುವ ಲೆಫ್ಟಿನೆಂಟ್‌ಗಳ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಇದರ ಜೊತೆಗೆ ರೈತರ ಆಂದೋಲನ ಮತ್ತು ಜನವರಿ 26, 2021 ರ ಗದ್ದಲಕ್ಕೆ ಸಂಬಂಧಿಸಿದ ಪ್ರಕರಣಗಳು ಹಾಗೂ 2020 ರ ಫೆಬ್ರವರಿಯಲ್ಲಿ ನಡೆದ ದೆಹಲಿ ಗಲಭೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ.

ಈ ಪ್ರಕರಣಗಳಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌(ಎಸ್‌ಪಿಪಿ)ಗಳನ್ನು ದೆಹಲಿ ಪೊಲೀಸರು ಆಯ್ಕೆ ಮಾಡಿದ್ದಾರೆ. ಆದ್ದರಿಂದ ಇದರಲ್ಲಿ ಅವರ ಹಿತಾಸಕ್ತಿ ಕಾಯುವ ಗಂಭೀರ ಸಂಶಯವಿದೆ ಎಂದು ಅವರು ಹೇಳಿದ್ದಾರೆ.

“ನಾವು ನೇಮಿಸಿದ ಎಸ್‌ಪಿಪಿಗಳು ಸ್ವತಂತ್ರ ವ್ಯಕ್ತಿಗಳು. ನೀವು ಎಸ್‌ಪಿಪಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ದೆಹಲಿ ಪೊಲೀಸರೇ ತನಿಖೆಯ ಭಾಗವಾಗಿದ್ದಾರೆ” ಎಂದು ಸಿಂಘ್ವಿ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಇದನ್ನೂ ಓದಿ: ತಿಲಕ್‌ ಮತ್ತು ಗಾಂಧಿ ಮೇಲೆ ದೇಶದ್ರೋಹದ ಪ್ರಕರಣಗಳು – ಮೃದುಲಾ ಮುಖರ್ಜಿ ಭಾಷಣ ಭಾಗ-2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...