Homeಮುಖಪುಟಅಸ್ಸಾಂ: ಟ್ರಕ್‌ ಮೇಲೆ ಶಂಕಿತ ಉಗ್ರರಿಂದ ಗುಂಡಿನ ದಾಳಿ; ಐವರು ಮೃತ

ಅಸ್ಸಾಂ: ಟ್ರಕ್‌ ಮೇಲೆ ಶಂಕಿತ ಉಗ್ರರಿಂದ ಗುಂಡಿನ ದಾಳಿ; ಐವರು ಮೃತ

- Advertisement -
- Advertisement -

ಅಸ್ಸಾಂ ರಾಜ್ಯದ ದಿಮಾ ಹಸಾವೊ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಶಂಕಿತ ಉಗ್ರರು ಏಳು ಟ್ರಕ್‌ಗಳ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದರ ಪರಿಣಾಮವಾಗಿ ಐದು ಜನರು ಸಾವನ್ನಪ್ಪಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿಮೆಂಟ್ ಹೊತ್ತೊಯ್ಯುವ ಆರು ಲಾರಿಗಳು ಮತ್ತು ಕಲ್ಲಿದ್ದಲು ತುಂಬಿದ್ದ ಒಂದು ಲಾರಿಯನ್ನು ಡಿಎನ್‌ಎಲ್‌ಎನ ಉಗ್ರರು ತಡೆದ್ದಾರೆ. ನಂತರ ಅದರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಗುವಾಹಟಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯನ್ನು ತಪ್ಪಿಸಿ ಕನಿಷ್ಠ ಏಳು ಚಾಲಕರು ಮತ್ತು ಟ್ರಕ್‌ಗಳ ಸಹಾಯಕರು ಹತ್ತಿರದ ಕಾಡಿನೊಳಗೆ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ಮುಖ್ಯಸ್ಥ ಜಯಂತ್ ಸಿಂಗ್ ನೇತೃತ್ವದಲ್ಲಿ ಅಸ್ಸಾಂ ರೈಫಲ್ಸ್ ಪಡೆಗಳು ಮತ್ತು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಉಗ್ರರು ಸುಟ್ಟಿದ್ದ ಟ್ರಕ್‌ಗಳಿಂದ ಐದು ಚಾಲಕರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: ಸೆಂಟ್ರಲ್‌ ವಿಸ್ತಾ ಯೋಜನೆ ಮತ್ತು ದೆಹಲಿಯ ಮೂಲಕ ಭಾರತವನ್ನು ವಶಪಡಿಸಿಕೊಳ್ಳುವ ಬಿಜೆಪಿ ಸರ್ಕಾರದ ಆಕ್ರಮಣಕಾರಿ ತಂತ್ರ

ಘಟನೆ ಹಿನ್ನಲೆಯಲ್ಲಿ ಗುವಾಹಟಿಯಿಂದ ಸುಮಾರು 300 ಕಿಮೀ ಆಗ್ನೇಯದಲ್ಲಿರುವ ಗುಡ್ಡಗಾಡು ಜಿಲ್ಲೆಯಲ್ಲಿ ಉಗ್ರರನ್ನು ಹಿಡಿಯಲು ಭದ್ರತಾ ಪಡೆಗಳು ಭಾರೀ ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿವೆ.

ಲಾರಿಗಳು ಹತ್ತಿರದ ಸಿಮೆಂಟ್ ಉತ್ಪಾದನಾ ಘಟಕಕ್ಕೆ ಕಲ್ಲಿದ್ದಲು ಮತ್ತು ಇತರ ವಸ್ತುಗಳನ್ನು ಸಾಗಿಸುತ್ತಿದ್ದವು ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಹಿಂದೆ ಉತ್ತರ ಕ್ಯಾಚಾರ್ ಜಿಲ್ಲೆಯ ಭಾಗವಾಗಿದ್ದ ‘ದಿಮಾ ಹಸಾವೊ’ ಜಿಲ್ಲೆಯು ಬೆಟ್ಟಗಳಿಂದ ಆವೃತ್ತವಾಗಿರುವ ಅಸ್ಸಾಂನ ಮೂರು ಜಿಲ್ಲೆಗಳಲ್ಲಿ ಒಂದಾಗಿದೆ. ಈ ಜಿಲ್ಲೆಯು ಈ ಹಿಂದೆ ಉಗ್ರಗಾಮಿ ಚಟುವಟಿಕೆಗಳ ಕೇಂದ್ರವಾಗಿತ್ತು. ಇತ್ತೀಚಿನ ವರ್ಷಗಳಲ್ಲಿ, ಯಾವುದೇ ದೊಡ್ಡ ಹಿಂಸಾಚಾರ ವರದಿಯಾಗಿರಲಿಲ್ಲ.

ಮೇ ತಿಂಗಳಲ್ಲಿ, ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಧನ್ಸಿರಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ಸಮಯದಲ್ಲಿ ಭದ್ರತಾ ಪಡೆಗಳು ಆರು DNLA ಉಗ್ರರನ್ನು ಹೊಡೆದುರುಳಿಸಿದ್ದವು. ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಡಿಎನ್ಎಲ್ಎ ಉಗ್ರರು ಈ ಪ್ರದೇಶದಲ್ಲಿ ಗ್ರಾಮಸ್ಥನನ್ನು ಕೊಂದ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ದಿಮಾ ಹಸಾವೊ ಜಿಲ್ಲೆ ಮತ್ತು ಪಕ್ಕದ ಪ್ರದೇಶಗಳಲ್ಲಿ ಈ ಸಂಘಟನೆ ಸುಲಿಗೆ ಮತ್ತು ಅಪಹರಣವನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಉಗ್ರರ ಸಂಘಟನೆಯ ಹಲವು ಉನ್ನತ ನಾಯಕರನ್ನು ಭದ್ರತಾ ಪಡೆಗಳು ಈ ಹಿಂದೆ ಬಂಧಿಸಿತ್ತು.

2018 ರಲ್ಲಿ ರಚನೆಯಾದ ಡಿಎನ್ಎಲ್ಎ ಉಗ್ರರ ಗುಂಪು ದಿಮಾ ಹಸಾವೊ ಮತ್ತು ಕಾರ್ಬಿ ಆಂಗ್ಲಾಂಗ್ ಜಿಲ್ಲೆಗಳಲ್ಲಿ ಹಾಗೂ ನೆರೆಯ ನಾಗಾಲ್ಯಾಂಡ್ ರಾಜ್ಯದಲ್ಲಿ ಸಕ್ರಿಯವಾಗಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...