Homeಚಳವಳಿಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಮೈಸೂರು ವಿಶ್ವವಿದ್ಯಾನಿಲಯ ಭಾರತದ ಸಂವಿಧಾನವನ್ನು ಪಾಲಿಸುತ್ತಿದೆಯೋ ಅಥವಾ ಮನುಸ್ಮೃತಿಯನ್ನು ಪಾಲಿಸುತ್ತಿದೆಯೋ ಎಂದು ಕಿಡಿಕಾರಲಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಘಟಿಸಿದ ಅಮಾನವೀಯ ಅತ್ಯಾಚಾರದ ಹಿನ್ನೆಲೆಯಲ್ಲಿ ‘ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ’ ಎಂಬ ವಿವಿಯ ವಿವಾದಾತ್ಮಕ ಸುತ್ತೋಲೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬಂದಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗುರುತರ ಜವಾಬ್ದಾರಿ ನಿರ್ವಹಿಸುವಲ್ಲಿ ಸರ್ಕಾರ, ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ತಮ್ಮ ಅದಕ್ಷತನವನ್ನು ಮುಚ್ಚಿಕೊಳ್ಳಲು ಹೆಣ್ಣು ಮಕ್ಕಳನ್ನು ಹೊಣೆ ಮಾಡಲಾಗುತ್ತಿದೆ. ಅವರ ಹೊರಬರಬಾರದು, ಇಂಥದ್ದೆ ಬಟ್ಟೆ ಧರಿಸಬೇಕು ಎಂಬ ನಿಯಮಗಳನ್ನು ಹೇರುವ ಮೂಲಕ ಸಂತ್ರಸ್ತರನ್ನೆ ಬಲಿಪಶು ಮಾಡಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಲಾಗಿದೆ.

ಸರ್ಕಾರ ಮತ್ತು ವಿವಿಗಳು ಮಹಿಳೆಯರ ಓಡಾಡವನ್ನು ನಿರ್ಬಂಧಿಸುತ್ತಿವೆ. ಮುಂದೆ ಅವರು ಮನೆಯಿಂದಲೇ ಹೊರಬರಬಾರದು ಎಂದು ದಿಗ್ಬಂಧನ ವಿಧಿಸುತ್ತವೆ. ಈ ಮೂಲಕ ಪುರುಷಾಧಿಪತ್ಯ ಆಡಳಿತ ಎಗ್ಗಿಲ್ಲದೆ ನಡೆಯುತ್ತದೆ ಎಂದು ಪ್ರಗತಿಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಅತ್ಯಾಚಾರವೆಸಗಿದ ಗಂಡಸು ಜಾತಿಯ ಮೇಲೆ ಯಾವುದೇ ನಿರ್ಬಂಧ ವಿಧಿಸದೇ ಅತ್ಯಾಚಾರಕ್ಕೆ ಒಳಗಾದ ಮಹಿಳಾ ಸಮುದಾಯದ ಮೇಲೆ ನಿರ್ಬಂಧ ವಿಧಿಸುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದ್ದಿದೆ.

7.30ಗೆ ಆಕೆ ಹೊರಗೆ ಹೋಗಿದ್ದಕ್ಕೆ ರೇಪ್ ಆಯ್ತು, ಹಾಗಾಗಿ 6.30 ರ ಮೇಲೆ ಯಾವ ಹೆಣ್ಮಕ್ಳೂ ಹೊರಗೇ ಬರಕೂಡದು!
ವಾವ್! ಎಷ್ಟು ಸುಲಭವಾಗಿ ಅದ್ಭುತ ಪರಿಹಾರ ಕಂಡುಕೊಳ್ಳಲಾಯ್ತು! ಆಮೇಲೆ 5.30ಕ್ಕೆ 2.30ಕ್ಕೆ, 10.30ಕ್ಕೆ ರೇಪ್ ಆದಾಗ ಹಾಗೇ ಸಮಯ ಕುಗ್ಗಿಸುತ್ತಾ ಬನ್ನಿ.
ಯಾಕೆ ಅವರು ಕಾಲೇಜಿಗೆ, ಯೂನಿವರ್ಸಿಟಿಗೆ ಬರಬೇಕು? ಬೇಡ ಅಂದು ಬಿಡಿ. ಆಮೇಲೆ ಬೀದಿಗೆ ಬರೋದೂ ಬೇಡ ಅನ್ನಿ.
ಆಮೇಲೆ ಮನೆಗಳಲ್ಲೇ ರೇಪ್ ಆಗುತ್ತಲ್ಲ, ಆಗ ಭೂಮಿ ಮೇಲೆ ಎಲ್ಲ ಹೆಣ್ಣುಗಳೂ ಸತ್ತುಬಿಡಿ ಅಂತನ್ನಿ!
ಒಟ್ಟಲ್ಲಿ ರೇಪ್ ಮಾಡೋರು ಆರಾಮಾಗಿ ಸುತ್ತಾಡ್ತಾ ಇರ್ಲಿ, ಅವರಿಗೆ ತೊಂದರೆ ಆಗಬಾರದಷ್ಟೇ.
ಅಂದಹಾಗೆ #ತಾಲಿಬಾನ್ ಅಂದ್ರೆ ಏನು? ಎಲ್ಲಿದೆ ಅದು? ಎಂದು ಚಿಂತಕಿ ವಿ.ಕೆ ಸಂಜ್ಯೋತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನವು ಭಾರತದ ಪ್ರಜೆಗಳಿಗೆಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿರುವಾಗ ಮಹಿಳೆಯರಿಗೆ ಮಾತ್ರವೇ ಮಿತಿಗಳನ್ನು ಹೇರುತ್ತಿರುವವರು ಯಾರು ಮತ್ತು ಯಾಕೆ? ಮಹಿಳೆಯರು ಇಲ್ಲಿ ಎರಡನೆಯ ದರ್ಜೆಯ ಪ್ರಜೆಗಳೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಹೆಣ್ಣುಮಕ್ಕಳನ್ನ ಗರ್ಭದಲ್ಲೇ ಕೊಂದುಬಿಡೋಣ; ಆಗ ಅತ್ಯಾಚಾರ ಮಾಡೋಕೆ ಆಗಲ್ಲ. ಏನಂತೀರಿ ಮಾನ್ಯ ಕುಲಪತಿಗಳೇ ಹಾಗು ಖಾಕಿ ಪುಂಡರೇ?
ಇದೂ ವಿಶ್ವವಿದ್ಯಾನಿಲಯ, ಇವರು ಮಕ್ಕಳಿಗೆ ಪಾಠ ಮಾಡ್ತಾರಂತೆ. ಥೂ!
ಒಂದು ವೇಳೆ ಅತ್ಯಾಚಾರ ಮಧ್ಯಾಹ್ನ 1 ಘಂಟೆಗೆ ಆಯ್ತು ಅಂತ ಇಟ್ಕೊಳಿ ಆಗ ಹೆಣ್ಣುಮಕ್ಕಳು 1 ಘಂಟೆ ಮೇಲೆ ಒಬ್ಬರೇ ಓಡಾಡುವ ಹಾಗಿಲ್ವಾ? ಎಂದು ವಿವೇಕ್‌ರವರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮಾಡುವ ಅತ್ಯಾಚಾರಿಗಳಿಗೆ ನಿಭಂದನೆಯನ್ನು ಹಾಕುವುದನ್ನು ಬಿಟ್ಟು ಇನ್ನೂ ಹೆಣ್ಣು ಮಕ್ಕಳನ್ನೆ ಬಂಧಿಸುವ ಈ ವ್ಯವಸ್ಥೆಯ ಬಗ್ಗೆ ಎನು ಹೇಳ ಬೇಕೊ? ನಾಚಿಕೆಗೇಡು… ಹೆಣ್ಣು ಮಕ್ಕಳ ಮೇಲೆ ನಿರ್ಬಂಧ ಹಾಕುವುದನ್ನು ಬಿಟ್ಟು ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡುವ ವಾತವರಣ ನಿರ್ಮಾಣ ಮಾಡಿ ತೋರಿಸಿ ನಿಮ್ಮ ಯೋಗ್ಯತೆಗೆ… ಎಂದು ಪೂರ್ಣಿಮಾರವರು ಸವಾಲು ಹಾಕಿದ್ದಾರೆ.

ಸಂಜೆ ಆರೂವರೆ ನಂತರ ಹೆಣ್ಣುಮಕ್ಕಳು ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಓಡಾಡುವುದನ್ನು ನಿಷೇಧಿಸುವ ಬದಲು ಪೂರ್ತಿಯಾಗಿ ಶಿಕ್ಷಣದಿಂದಲೇ ಹೆಣ್ಣುಮಕ್ಕಳನ್ನೇ ನಿಷೇಧಿಸಿಬಿಡಿ. ನಮ್ಮಲ್ಲೂ ತಾಲಿಬಾನ್ ಮಾದರಿ ಆಡಳಿತವಿದೆ ಎಂದು ಎದೆ ತಟ್ಟಿಕೊಂಡು ಹೇಳುತ್ತೇವೆ. ಥೂ, ನಿಮ್ಮ ಯೋಗ್ಯತೆಗಿಷ್ಟು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಯಾಗಿದ್ದಾಗಲೂ, ಯುವತಿಯಾಗಿದ್ದಾಗಲೂ, ವೃದ್ದೆಯಾಗಿದ್ದಾಗಲೂ ಮನೆಗಳಲ್ಲಿದ್ದಾಗಲೂ ತಾನೇ ಸ್ವತಂತ್ರವಾಗಿ ಸ್ತ್ರೀಯು ಯಾವ ಕಾರ್ಯವನ್ನೂ ಮಾಡಬಾರದು. ಮಹಿಳೆ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮೃತಿ ಹೇಳುತ್ತದೆ.

ಭಾರತದ ಯಾವುದೇ ನಾಗರೀಕರಿಗೆ ಜಾತಿ, ವರ್ಗ, ಧರ್ಮ, ಲಿಂಗ, ಜನಾಂಗದ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ಭಾರತದ ಸಂವಿಧಾನದ ವಿಧಿ 15 ಹೇಳುತ್ತದೆ.

ಯುವತಿಯರು ಸಂಜೆ 6:30 ರ ನಂತರ ವಿಶ್ವವಿದ್ಯಾಲಯದ ಅವರಣದಲ್ಲಿ ಏಕಾಂಗಿಯಾಗಿ ಸಂಚರಿಸಬಾರದು ಎಂದು ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಈಗ ಹೇಳಿ.. ಮೈಸೂರು ವಿವಿ ಯಾವುದನ್ನು ಪಾಲಿಸುತ್ತಿದೆ ಎಂದು ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಶಿವಪ್ಪ ರಾಮಕೃಷ್ಣರವರನ್ನು ನಾನುಗೌರಿ.ಕಾಂ ಸಂಪರ್ಕಿಸಿತು. ಅವರು, “ನಾವು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಬರೆದಿದ್ದೇವೆ. ಆ ರೀತಿಯ ಯಾವ ನಿಬಂಧನೆಗಳು ಹಾಕುವ ಉದ್ದೇಶ ನಮಗಿಲ್ಲ” ಎಂದರು. ಆದರೆ ನಿಮ್ಮ ಸುತ್ತೋಲೆ ನೇರವಾಗಿ ಹೆಣ್ಣು ಮಕ್ಕಳ ವಿರುದ್ಧವಿದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದೆಯಲ್ಲ ಎಂದು ಪ್ರಶ್ನಿಸಿದಾದ ಅದನ್ನು ತಿದ್ದುಕೊಳ್ಳುತ್ತೇವೆ. ಅದನ್ನು ವಾಪಸ್ ಪಡೆದು ಮತ್ತೊಂದು ಸುತ್ತೋಲೆ ಹೊರಡಿಸುತ್ತೇವೆ ಎಂದರು.

ಒಟ್ಟಿನಲ್ಲಿ ಅತ್ಯಾಚಾರದಂತಹ ಅಪರಾಧಗಳ ಹಿಂದಿನ ಕಾರಣಗಳನ್ನು ಅರಿಯುವಲ್ಲಿ ಸರ್ಕಾರಗಳು ಮತ್ತು ನಮ್ಮ ವಿಶ್ವವಿದ್ಯಾನಿಲಯಗಳು ಸಂಪೂರ್ಣ ವಿಫಲವಾಗಿವೆ ಎಂಬುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ. ಪ್ರಜ್ಞಾಂವಂತ ವಲಯದಿಂದ ಬಂದ ತೀವ್ರ ಆಕ್ರೋಶಕ್ಕೆ ಸರ್ಕಾರ ಮತ್ತು ವಿವಿಗಳು ಪಾಠ ಕಲಿಯಬೇಕಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...