Homeಚಳವಳಿಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಮೈಸೂರು ವಿಶ್ವವಿದ್ಯಾನಿಲಯ ಭಾರತದ ಸಂವಿಧಾನವನ್ನು ಪಾಲಿಸುತ್ತಿದೆಯೋ ಅಥವಾ ಮನುಸ್ಮೃತಿಯನ್ನು ಪಾಲಿಸುತ್ತಿದೆಯೋ ಎಂದು ಕಿಡಿಕಾರಲಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಘಟಿಸಿದ ಅಮಾನವೀಯ ಅತ್ಯಾಚಾರದ ಹಿನ್ನೆಲೆಯಲ್ಲಿ ‘ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ’ ಎಂಬ ವಿವಿಯ ವಿವಾದಾತ್ಮಕ ಸುತ್ತೋಲೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬಂದಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗುರುತರ ಜವಾಬ್ದಾರಿ ನಿರ್ವಹಿಸುವಲ್ಲಿ ಸರ್ಕಾರ, ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ತಮ್ಮ ಅದಕ್ಷತನವನ್ನು ಮುಚ್ಚಿಕೊಳ್ಳಲು ಹೆಣ್ಣು ಮಕ್ಕಳನ್ನು ಹೊಣೆ ಮಾಡಲಾಗುತ್ತಿದೆ. ಅವರ ಹೊರಬರಬಾರದು, ಇಂಥದ್ದೆ ಬಟ್ಟೆ ಧರಿಸಬೇಕು ಎಂಬ ನಿಯಮಗಳನ್ನು ಹೇರುವ ಮೂಲಕ ಸಂತ್ರಸ್ತರನ್ನೆ ಬಲಿಪಶು ಮಾಡಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಲಾಗಿದೆ.

ಸರ್ಕಾರ ಮತ್ತು ವಿವಿಗಳು ಮಹಿಳೆಯರ ಓಡಾಡವನ್ನು ನಿರ್ಬಂಧಿಸುತ್ತಿವೆ. ಮುಂದೆ ಅವರು ಮನೆಯಿಂದಲೇ ಹೊರಬರಬಾರದು ಎಂದು ದಿಗ್ಬಂಧನ ವಿಧಿಸುತ್ತವೆ. ಈ ಮೂಲಕ ಪುರುಷಾಧಿಪತ್ಯ ಆಡಳಿತ ಎಗ್ಗಿಲ್ಲದೆ ನಡೆಯುತ್ತದೆ ಎಂದು ಪ್ರಗತಿಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಅತ್ಯಾಚಾರವೆಸಗಿದ ಗಂಡಸು ಜಾತಿಯ ಮೇಲೆ ಯಾವುದೇ ನಿರ್ಬಂಧ ವಿಧಿಸದೇ ಅತ್ಯಾಚಾರಕ್ಕೆ ಒಳಗಾದ ಮಹಿಳಾ ಸಮುದಾಯದ ಮೇಲೆ ನಿರ್ಬಂಧ ವಿಧಿಸುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದ್ದಿದೆ.

7.30ಗೆ ಆಕೆ ಹೊರಗೆ ಹೋಗಿದ್ದಕ್ಕೆ ರೇಪ್ ಆಯ್ತು, ಹಾಗಾಗಿ 6.30 ರ ಮೇಲೆ ಯಾವ ಹೆಣ್ಮಕ್ಳೂ ಹೊರಗೇ ಬರಕೂಡದು!
ವಾವ್! ಎಷ್ಟು ಸುಲಭವಾಗಿ ಅದ್ಭುತ ಪರಿಹಾರ ಕಂಡುಕೊಳ್ಳಲಾಯ್ತು! ಆಮೇಲೆ 5.30ಕ್ಕೆ 2.30ಕ್ಕೆ, 10.30ಕ್ಕೆ ರೇಪ್ ಆದಾಗ ಹಾಗೇ ಸಮಯ ಕುಗ್ಗಿಸುತ್ತಾ ಬನ್ನಿ.
ಯಾಕೆ ಅವರು ಕಾಲೇಜಿಗೆ, ಯೂನಿವರ್ಸಿಟಿಗೆ ಬರಬೇಕು? ಬೇಡ ಅಂದು ಬಿಡಿ. ಆಮೇಲೆ ಬೀದಿಗೆ ಬರೋದೂ ಬೇಡ ಅನ್ನಿ.
ಆಮೇಲೆ ಮನೆಗಳಲ್ಲೇ ರೇಪ್ ಆಗುತ್ತಲ್ಲ, ಆಗ ಭೂಮಿ ಮೇಲೆ ಎಲ್ಲ ಹೆಣ್ಣುಗಳೂ ಸತ್ತುಬಿಡಿ ಅಂತನ್ನಿ!
ಒಟ್ಟಲ್ಲಿ ರೇಪ್ ಮಾಡೋರು ಆರಾಮಾಗಿ ಸುತ್ತಾಡ್ತಾ ಇರ್ಲಿ, ಅವರಿಗೆ ತೊಂದರೆ ಆಗಬಾರದಷ್ಟೇ.
ಅಂದಹಾಗೆ #ತಾಲಿಬಾನ್ ಅಂದ್ರೆ ಏನು? ಎಲ್ಲಿದೆ ಅದು? ಎಂದು ಚಿಂತಕಿ ವಿ.ಕೆ ಸಂಜ್ಯೋತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನವು ಭಾರತದ ಪ್ರಜೆಗಳಿಗೆಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿರುವಾಗ ಮಹಿಳೆಯರಿಗೆ ಮಾತ್ರವೇ ಮಿತಿಗಳನ್ನು ಹೇರುತ್ತಿರುವವರು ಯಾರು ಮತ್ತು ಯಾಕೆ? ಮಹಿಳೆಯರು ಇಲ್ಲಿ ಎರಡನೆಯ ದರ್ಜೆಯ ಪ್ರಜೆಗಳೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಹೆಣ್ಣುಮಕ್ಕಳನ್ನ ಗರ್ಭದಲ್ಲೇ ಕೊಂದುಬಿಡೋಣ; ಆಗ ಅತ್ಯಾಚಾರ ಮಾಡೋಕೆ ಆಗಲ್ಲ. ಏನಂತೀರಿ ಮಾನ್ಯ ಕುಲಪತಿಗಳೇ ಹಾಗು ಖಾಕಿ ಪುಂಡರೇ?
ಇದೂ ವಿಶ್ವವಿದ್ಯಾನಿಲಯ, ಇವರು ಮಕ್ಕಳಿಗೆ ಪಾಠ ಮಾಡ್ತಾರಂತೆ. ಥೂ!
ಒಂದು ವೇಳೆ ಅತ್ಯಾಚಾರ ಮಧ್ಯಾಹ್ನ 1 ಘಂಟೆಗೆ ಆಯ್ತು ಅಂತ ಇಟ್ಕೊಳಿ ಆಗ ಹೆಣ್ಣುಮಕ್ಕಳು 1 ಘಂಟೆ ಮೇಲೆ ಒಬ್ಬರೇ ಓಡಾಡುವ ಹಾಗಿಲ್ವಾ? ಎಂದು ವಿವೇಕ್‌ರವರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮಾಡುವ ಅತ್ಯಾಚಾರಿಗಳಿಗೆ ನಿಭಂದನೆಯನ್ನು ಹಾಕುವುದನ್ನು ಬಿಟ್ಟು ಇನ್ನೂ ಹೆಣ್ಣು ಮಕ್ಕಳನ್ನೆ ಬಂಧಿಸುವ ಈ ವ್ಯವಸ್ಥೆಯ ಬಗ್ಗೆ ಎನು ಹೇಳ ಬೇಕೊ? ನಾಚಿಕೆಗೇಡು… ಹೆಣ್ಣು ಮಕ್ಕಳ ಮೇಲೆ ನಿರ್ಬಂಧ ಹಾಕುವುದನ್ನು ಬಿಟ್ಟು ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡುವ ವಾತವರಣ ನಿರ್ಮಾಣ ಮಾಡಿ ತೋರಿಸಿ ನಿಮ್ಮ ಯೋಗ್ಯತೆಗೆ… ಎಂದು ಪೂರ್ಣಿಮಾರವರು ಸವಾಲು ಹಾಕಿದ್ದಾರೆ.

ಸಂಜೆ ಆರೂವರೆ ನಂತರ ಹೆಣ್ಣುಮಕ್ಕಳು ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಓಡಾಡುವುದನ್ನು ನಿಷೇಧಿಸುವ ಬದಲು ಪೂರ್ತಿಯಾಗಿ ಶಿಕ್ಷಣದಿಂದಲೇ ಹೆಣ್ಣುಮಕ್ಕಳನ್ನೇ ನಿಷೇಧಿಸಿಬಿಡಿ. ನಮ್ಮಲ್ಲೂ ತಾಲಿಬಾನ್ ಮಾದರಿ ಆಡಳಿತವಿದೆ ಎಂದು ಎದೆ ತಟ್ಟಿಕೊಂಡು ಹೇಳುತ್ತೇವೆ. ಥೂ, ನಿಮ್ಮ ಯೋಗ್ಯತೆಗಿಷ್ಟು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಯಾಗಿದ್ದಾಗಲೂ, ಯುವತಿಯಾಗಿದ್ದಾಗಲೂ, ವೃದ್ದೆಯಾಗಿದ್ದಾಗಲೂ ಮನೆಗಳಲ್ಲಿದ್ದಾಗಲೂ ತಾನೇ ಸ್ವತಂತ್ರವಾಗಿ ಸ್ತ್ರೀಯು ಯಾವ ಕಾರ್ಯವನ್ನೂ ಮಾಡಬಾರದು. ಮಹಿಳೆ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮೃತಿ ಹೇಳುತ್ತದೆ.

ಭಾರತದ ಯಾವುದೇ ನಾಗರೀಕರಿಗೆ ಜಾತಿ, ವರ್ಗ, ಧರ್ಮ, ಲಿಂಗ, ಜನಾಂಗದ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ಭಾರತದ ಸಂವಿಧಾನದ ವಿಧಿ 15 ಹೇಳುತ್ತದೆ.

ಯುವತಿಯರು ಸಂಜೆ 6:30 ರ ನಂತರ ವಿಶ್ವವಿದ್ಯಾಲಯದ ಅವರಣದಲ್ಲಿ ಏಕಾಂಗಿಯಾಗಿ ಸಂಚರಿಸಬಾರದು ಎಂದು ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಈಗ ಹೇಳಿ.. ಮೈಸೂರು ವಿವಿ ಯಾವುದನ್ನು ಪಾಲಿಸುತ್ತಿದೆ ಎಂದು ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಶಿವಪ್ಪ ರಾಮಕೃಷ್ಣರವರನ್ನು ನಾನುಗೌರಿ.ಕಾಂ ಸಂಪರ್ಕಿಸಿತು. ಅವರು, “ನಾವು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಬರೆದಿದ್ದೇವೆ. ಆ ರೀತಿಯ ಯಾವ ನಿಬಂಧನೆಗಳು ಹಾಕುವ ಉದ್ದೇಶ ನಮಗಿಲ್ಲ” ಎಂದರು. ಆದರೆ ನಿಮ್ಮ ಸುತ್ತೋಲೆ ನೇರವಾಗಿ ಹೆಣ್ಣು ಮಕ್ಕಳ ವಿರುದ್ಧವಿದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದೆಯಲ್ಲ ಎಂದು ಪ್ರಶ್ನಿಸಿದಾದ ಅದನ್ನು ತಿದ್ದುಕೊಳ್ಳುತ್ತೇವೆ. ಅದನ್ನು ವಾಪಸ್ ಪಡೆದು ಮತ್ತೊಂದು ಸುತ್ತೋಲೆ ಹೊರಡಿಸುತ್ತೇವೆ ಎಂದರು.

ಒಟ್ಟಿನಲ್ಲಿ ಅತ್ಯಾಚಾರದಂತಹ ಅಪರಾಧಗಳ ಹಿಂದಿನ ಕಾರಣಗಳನ್ನು ಅರಿಯುವಲ್ಲಿ ಸರ್ಕಾರಗಳು ಮತ್ತು ನಮ್ಮ ವಿಶ್ವವಿದ್ಯಾನಿಲಯಗಳು ಸಂಪೂರ್ಣ ವಿಫಲವಾಗಿವೆ ಎಂಬುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ. ಪ್ರಜ್ಞಾಂವಂತ ವಲಯದಿಂದ ಬಂದ ತೀವ್ರ ಆಕ್ರೋಶಕ್ಕೆ ಸರ್ಕಾರ ಮತ್ತು ವಿವಿಗಳು ಪಾಠ ಕಲಿಯಬೇಕಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...