Homeಚಳವಳಿಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಮೈಸೂರು ವಿಶ್ವವಿದ್ಯಾನಿಲಯ ಭಾರತದ ಸಂವಿಧಾನವನ್ನು ಪಾಲಿಸುತ್ತಿದೆಯೋ ಅಥವಾ ಮನುಸ್ಮೃತಿಯನ್ನು ಪಾಲಿಸುತ್ತಿದೆಯೋ ಎಂದು ಕಿಡಿಕಾರಲಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಘಟಿಸಿದ ಅಮಾನವೀಯ ಅತ್ಯಾಚಾರದ ಹಿನ್ನೆಲೆಯಲ್ಲಿ ‘ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ’ ಎಂಬ ವಿವಿಯ ವಿವಾದಾತ್ಮಕ ಸುತ್ತೋಲೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬಂದಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗುರುತರ ಜವಾಬ್ದಾರಿ ನಿರ್ವಹಿಸುವಲ್ಲಿ ಸರ್ಕಾರ, ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ತಮ್ಮ ಅದಕ್ಷತನವನ್ನು ಮುಚ್ಚಿಕೊಳ್ಳಲು ಹೆಣ್ಣು ಮಕ್ಕಳನ್ನು ಹೊಣೆ ಮಾಡಲಾಗುತ್ತಿದೆ. ಅವರ ಹೊರಬರಬಾರದು, ಇಂಥದ್ದೆ ಬಟ್ಟೆ ಧರಿಸಬೇಕು ಎಂಬ ನಿಯಮಗಳನ್ನು ಹೇರುವ ಮೂಲಕ ಸಂತ್ರಸ್ತರನ್ನೆ ಬಲಿಪಶು ಮಾಡಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಲಾಗಿದೆ.

ಸರ್ಕಾರ ಮತ್ತು ವಿವಿಗಳು ಮಹಿಳೆಯರ ಓಡಾಡವನ್ನು ನಿರ್ಬಂಧಿಸುತ್ತಿವೆ. ಮುಂದೆ ಅವರು ಮನೆಯಿಂದಲೇ ಹೊರಬರಬಾರದು ಎಂದು ದಿಗ್ಬಂಧನ ವಿಧಿಸುತ್ತವೆ. ಈ ಮೂಲಕ ಪುರುಷಾಧಿಪತ್ಯ ಆಡಳಿತ ಎಗ್ಗಿಲ್ಲದೆ ನಡೆಯುತ್ತದೆ ಎಂದು ಪ್ರಗತಿಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಅತ್ಯಾಚಾರವೆಸಗಿದ ಗಂಡಸು ಜಾತಿಯ ಮೇಲೆ ಯಾವುದೇ ನಿರ್ಬಂಧ ವಿಧಿಸದೇ ಅತ್ಯಾಚಾರಕ್ಕೆ ಒಳಗಾದ ಮಹಿಳಾ ಸಮುದಾಯದ ಮೇಲೆ ನಿರ್ಬಂಧ ವಿಧಿಸುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದ್ದಿದೆ.

7.30ಗೆ ಆಕೆ ಹೊರಗೆ ಹೋಗಿದ್ದಕ್ಕೆ ರೇಪ್ ಆಯ್ತು, ಹಾಗಾಗಿ 6.30 ರ ಮೇಲೆ ಯಾವ ಹೆಣ್ಮಕ್ಳೂ ಹೊರಗೇ ಬರಕೂಡದು!
ವಾವ್! ಎಷ್ಟು ಸುಲಭವಾಗಿ ಅದ್ಭುತ ಪರಿಹಾರ ಕಂಡುಕೊಳ್ಳಲಾಯ್ತು! ಆಮೇಲೆ 5.30ಕ್ಕೆ 2.30ಕ್ಕೆ, 10.30ಕ್ಕೆ ರೇಪ್ ಆದಾಗ ಹಾಗೇ ಸಮಯ ಕುಗ್ಗಿಸುತ್ತಾ ಬನ್ನಿ.
ಯಾಕೆ ಅವರು ಕಾಲೇಜಿಗೆ, ಯೂನಿವರ್ಸಿಟಿಗೆ ಬರಬೇಕು? ಬೇಡ ಅಂದು ಬಿಡಿ. ಆಮೇಲೆ ಬೀದಿಗೆ ಬರೋದೂ ಬೇಡ ಅನ್ನಿ.
ಆಮೇಲೆ ಮನೆಗಳಲ್ಲೇ ರೇಪ್ ಆಗುತ್ತಲ್ಲ, ಆಗ ಭೂಮಿ ಮೇಲೆ ಎಲ್ಲ ಹೆಣ್ಣುಗಳೂ ಸತ್ತುಬಿಡಿ ಅಂತನ್ನಿ!
ಒಟ್ಟಲ್ಲಿ ರೇಪ್ ಮಾಡೋರು ಆರಾಮಾಗಿ ಸುತ್ತಾಡ್ತಾ ಇರ್ಲಿ, ಅವರಿಗೆ ತೊಂದರೆ ಆಗಬಾರದಷ್ಟೇ.
ಅಂದಹಾಗೆ #ತಾಲಿಬಾನ್ ಅಂದ್ರೆ ಏನು? ಎಲ್ಲಿದೆ ಅದು? ಎಂದು ಚಿಂತಕಿ ವಿ.ಕೆ ಸಂಜ್ಯೋತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನವು ಭಾರತದ ಪ್ರಜೆಗಳಿಗೆಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿರುವಾಗ ಮಹಿಳೆಯರಿಗೆ ಮಾತ್ರವೇ ಮಿತಿಗಳನ್ನು ಹೇರುತ್ತಿರುವವರು ಯಾರು ಮತ್ತು ಯಾಕೆ? ಮಹಿಳೆಯರು ಇಲ್ಲಿ ಎರಡನೆಯ ದರ್ಜೆಯ ಪ್ರಜೆಗಳೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಹೆಣ್ಣುಮಕ್ಕಳನ್ನ ಗರ್ಭದಲ್ಲೇ ಕೊಂದುಬಿಡೋಣ; ಆಗ ಅತ್ಯಾಚಾರ ಮಾಡೋಕೆ ಆಗಲ್ಲ. ಏನಂತೀರಿ ಮಾನ್ಯ ಕುಲಪತಿಗಳೇ ಹಾಗು ಖಾಕಿ ಪುಂಡರೇ?
ಇದೂ ವಿಶ್ವವಿದ್ಯಾನಿಲಯ, ಇವರು ಮಕ್ಕಳಿಗೆ ಪಾಠ ಮಾಡ್ತಾರಂತೆ. ಥೂ!
ಒಂದು ವೇಳೆ ಅತ್ಯಾಚಾರ ಮಧ್ಯಾಹ್ನ 1 ಘಂಟೆಗೆ ಆಯ್ತು ಅಂತ ಇಟ್ಕೊಳಿ ಆಗ ಹೆಣ್ಣುಮಕ್ಕಳು 1 ಘಂಟೆ ಮೇಲೆ ಒಬ್ಬರೇ ಓಡಾಡುವ ಹಾಗಿಲ್ವಾ? ಎಂದು ವಿವೇಕ್‌ರವರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮಾಡುವ ಅತ್ಯಾಚಾರಿಗಳಿಗೆ ನಿಭಂದನೆಯನ್ನು ಹಾಕುವುದನ್ನು ಬಿಟ್ಟು ಇನ್ನೂ ಹೆಣ್ಣು ಮಕ್ಕಳನ್ನೆ ಬಂಧಿಸುವ ಈ ವ್ಯವಸ್ಥೆಯ ಬಗ್ಗೆ ಎನು ಹೇಳ ಬೇಕೊ? ನಾಚಿಕೆಗೇಡು… ಹೆಣ್ಣು ಮಕ್ಕಳ ಮೇಲೆ ನಿರ್ಬಂಧ ಹಾಕುವುದನ್ನು ಬಿಟ್ಟು ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡುವ ವಾತವರಣ ನಿರ್ಮಾಣ ಮಾಡಿ ತೋರಿಸಿ ನಿಮ್ಮ ಯೋಗ್ಯತೆಗೆ… ಎಂದು ಪೂರ್ಣಿಮಾರವರು ಸವಾಲು ಹಾಕಿದ್ದಾರೆ.

ಸಂಜೆ ಆರೂವರೆ ನಂತರ ಹೆಣ್ಣುಮಕ್ಕಳು ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಓಡಾಡುವುದನ್ನು ನಿಷೇಧಿಸುವ ಬದಲು ಪೂರ್ತಿಯಾಗಿ ಶಿಕ್ಷಣದಿಂದಲೇ ಹೆಣ್ಣುಮಕ್ಕಳನ್ನೇ ನಿಷೇಧಿಸಿಬಿಡಿ. ನಮ್ಮಲ್ಲೂ ತಾಲಿಬಾನ್ ಮಾದರಿ ಆಡಳಿತವಿದೆ ಎಂದು ಎದೆ ತಟ್ಟಿಕೊಂಡು ಹೇಳುತ್ತೇವೆ. ಥೂ, ನಿಮ್ಮ ಯೋಗ್ಯತೆಗಿಷ್ಟು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಯಾಗಿದ್ದಾಗಲೂ, ಯುವತಿಯಾಗಿದ್ದಾಗಲೂ, ವೃದ್ದೆಯಾಗಿದ್ದಾಗಲೂ ಮನೆಗಳಲ್ಲಿದ್ದಾಗಲೂ ತಾನೇ ಸ್ವತಂತ್ರವಾಗಿ ಸ್ತ್ರೀಯು ಯಾವ ಕಾರ್ಯವನ್ನೂ ಮಾಡಬಾರದು. ಮಹಿಳೆ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮೃತಿ ಹೇಳುತ್ತದೆ.

ಭಾರತದ ಯಾವುದೇ ನಾಗರೀಕರಿಗೆ ಜಾತಿ, ವರ್ಗ, ಧರ್ಮ, ಲಿಂಗ, ಜನಾಂಗದ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ಭಾರತದ ಸಂವಿಧಾನದ ವಿಧಿ 15 ಹೇಳುತ್ತದೆ.

ಯುವತಿಯರು ಸಂಜೆ 6:30 ರ ನಂತರ ವಿಶ್ವವಿದ್ಯಾಲಯದ ಅವರಣದಲ್ಲಿ ಏಕಾಂಗಿಯಾಗಿ ಸಂಚರಿಸಬಾರದು ಎಂದು ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಈಗ ಹೇಳಿ.. ಮೈಸೂರು ವಿವಿ ಯಾವುದನ್ನು ಪಾಲಿಸುತ್ತಿದೆ ಎಂದು ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಶಿವಪ್ಪ ರಾಮಕೃಷ್ಣರವರನ್ನು ನಾನುಗೌರಿ.ಕಾಂ ಸಂಪರ್ಕಿಸಿತು. ಅವರು, “ನಾವು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಬರೆದಿದ್ದೇವೆ. ಆ ರೀತಿಯ ಯಾವ ನಿಬಂಧನೆಗಳು ಹಾಕುವ ಉದ್ದೇಶ ನಮಗಿಲ್ಲ” ಎಂದರು. ಆದರೆ ನಿಮ್ಮ ಸುತ್ತೋಲೆ ನೇರವಾಗಿ ಹೆಣ್ಣು ಮಕ್ಕಳ ವಿರುದ್ಧವಿದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದೆಯಲ್ಲ ಎಂದು ಪ್ರಶ್ನಿಸಿದಾದ ಅದನ್ನು ತಿದ್ದುಕೊಳ್ಳುತ್ತೇವೆ. ಅದನ್ನು ವಾಪಸ್ ಪಡೆದು ಮತ್ತೊಂದು ಸುತ್ತೋಲೆ ಹೊರಡಿಸುತ್ತೇವೆ ಎಂದರು.

ಒಟ್ಟಿನಲ್ಲಿ ಅತ್ಯಾಚಾರದಂತಹ ಅಪರಾಧಗಳ ಹಿಂದಿನ ಕಾರಣಗಳನ್ನು ಅರಿಯುವಲ್ಲಿ ಸರ್ಕಾರಗಳು ಮತ್ತು ನಮ್ಮ ವಿಶ್ವವಿದ್ಯಾನಿಲಯಗಳು ಸಂಪೂರ್ಣ ವಿಫಲವಾಗಿವೆ ಎಂಬುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ. ಪ್ರಜ್ಞಾಂವಂತ ವಲಯದಿಂದ ಬಂದ ತೀವ್ರ ಆಕ್ರೋಶಕ್ಕೆ ಸರ್ಕಾರ ಮತ್ತು ವಿವಿಗಳು ಪಾಠ ಕಲಿಯಬೇಕಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....