Homeಚಳವಳಿಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಮೈಸೂರು ವಿಶ್ವವಿದ್ಯಾನಿಲಯ ಭಾರತದ ಸಂವಿಧಾನವನ್ನು ಪಾಲಿಸುತ್ತಿದೆಯೋ ಅಥವಾ ಮನುಸ್ಮೃತಿಯನ್ನು ಪಾಲಿಸುತ್ತಿದೆಯೋ ಎಂದು ಕಿಡಿಕಾರಲಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಘಟಿಸಿದ ಅಮಾನವೀಯ ಅತ್ಯಾಚಾರದ ಹಿನ್ನೆಲೆಯಲ್ಲಿ ‘ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ’ ಎಂಬ ವಿವಿಯ ವಿವಾದಾತ್ಮಕ ಸುತ್ತೋಲೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬಂದಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗುರುತರ ಜವಾಬ್ದಾರಿ ನಿರ್ವಹಿಸುವಲ್ಲಿ ಸರ್ಕಾರ, ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ತಮ್ಮ ಅದಕ್ಷತನವನ್ನು ಮುಚ್ಚಿಕೊಳ್ಳಲು ಹೆಣ್ಣು ಮಕ್ಕಳನ್ನು ಹೊಣೆ ಮಾಡಲಾಗುತ್ತಿದೆ. ಅವರ ಹೊರಬರಬಾರದು, ಇಂಥದ್ದೆ ಬಟ್ಟೆ ಧರಿಸಬೇಕು ಎಂಬ ನಿಯಮಗಳನ್ನು ಹೇರುವ ಮೂಲಕ ಸಂತ್ರಸ್ತರನ್ನೆ ಬಲಿಪಶು ಮಾಡಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಲಾಗಿದೆ.

ಸರ್ಕಾರ ಮತ್ತು ವಿವಿಗಳು ಮಹಿಳೆಯರ ಓಡಾಡವನ್ನು ನಿರ್ಬಂಧಿಸುತ್ತಿವೆ. ಮುಂದೆ ಅವರು ಮನೆಯಿಂದಲೇ ಹೊರಬರಬಾರದು ಎಂದು ದಿಗ್ಬಂಧನ ವಿಧಿಸುತ್ತವೆ. ಈ ಮೂಲಕ ಪುರುಷಾಧಿಪತ್ಯ ಆಡಳಿತ ಎಗ್ಗಿಲ್ಲದೆ ನಡೆಯುತ್ತದೆ ಎಂದು ಪ್ರಗತಿಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಅತ್ಯಾಚಾರವೆಸಗಿದ ಗಂಡಸು ಜಾತಿಯ ಮೇಲೆ ಯಾವುದೇ ನಿರ್ಬಂಧ ವಿಧಿಸದೇ ಅತ್ಯಾಚಾರಕ್ಕೆ ಒಳಗಾದ ಮಹಿಳಾ ಸಮುದಾಯದ ಮೇಲೆ ನಿರ್ಬಂಧ ವಿಧಿಸುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದ್ದಿದೆ.

7.30ಗೆ ಆಕೆ ಹೊರಗೆ ಹೋಗಿದ್ದಕ್ಕೆ ರೇಪ್ ಆಯ್ತು, ಹಾಗಾಗಿ 6.30 ರ ಮೇಲೆ ಯಾವ ಹೆಣ್ಮಕ್ಳೂ ಹೊರಗೇ ಬರಕೂಡದು!
ವಾವ್! ಎಷ್ಟು ಸುಲಭವಾಗಿ ಅದ್ಭುತ ಪರಿಹಾರ ಕಂಡುಕೊಳ್ಳಲಾಯ್ತು! ಆಮೇಲೆ 5.30ಕ್ಕೆ 2.30ಕ್ಕೆ, 10.30ಕ್ಕೆ ರೇಪ್ ಆದಾಗ ಹಾಗೇ ಸಮಯ ಕುಗ್ಗಿಸುತ್ತಾ ಬನ್ನಿ.
ಯಾಕೆ ಅವರು ಕಾಲೇಜಿಗೆ, ಯೂನಿವರ್ಸಿಟಿಗೆ ಬರಬೇಕು? ಬೇಡ ಅಂದು ಬಿಡಿ. ಆಮೇಲೆ ಬೀದಿಗೆ ಬರೋದೂ ಬೇಡ ಅನ್ನಿ.
ಆಮೇಲೆ ಮನೆಗಳಲ್ಲೇ ರೇಪ್ ಆಗುತ್ತಲ್ಲ, ಆಗ ಭೂಮಿ ಮೇಲೆ ಎಲ್ಲ ಹೆಣ್ಣುಗಳೂ ಸತ್ತುಬಿಡಿ ಅಂತನ್ನಿ!
ಒಟ್ಟಲ್ಲಿ ರೇಪ್ ಮಾಡೋರು ಆರಾಮಾಗಿ ಸುತ್ತಾಡ್ತಾ ಇರ್ಲಿ, ಅವರಿಗೆ ತೊಂದರೆ ಆಗಬಾರದಷ್ಟೇ.
ಅಂದಹಾಗೆ #ತಾಲಿಬಾನ್ ಅಂದ್ರೆ ಏನು? ಎಲ್ಲಿದೆ ಅದು? ಎಂದು ಚಿಂತಕಿ ವಿ.ಕೆ ಸಂಜ್ಯೋತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನವು ಭಾರತದ ಪ್ರಜೆಗಳಿಗೆಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿರುವಾಗ ಮಹಿಳೆಯರಿಗೆ ಮಾತ್ರವೇ ಮಿತಿಗಳನ್ನು ಹೇರುತ್ತಿರುವವರು ಯಾರು ಮತ್ತು ಯಾಕೆ? ಮಹಿಳೆಯರು ಇಲ್ಲಿ ಎರಡನೆಯ ದರ್ಜೆಯ ಪ್ರಜೆಗಳೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಹೆಣ್ಣುಮಕ್ಕಳನ್ನ ಗರ್ಭದಲ್ಲೇ ಕೊಂದುಬಿಡೋಣ; ಆಗ ಅತ್ಯಾಚಾರ ಮಾಡೋಕೆ ಆಗಲ್ಲ. ಏನಂತೀರಿ ಮಾನ್ಯ ಕುಲಪತಿಗಳೇ ಹಾಗು ಖಾಕಿ ಪುಂಡರೇ?
ಇದೂ ವಿಶ್ವವಿದ್ಯಾನಿಲಯ, ಇವರು ಮಕ್ಕಳಿಗೆ ಪಾಠ ಮಾಡ್ತಾರಂತೆ. ಥೂ!
ಒಂದು ವೇಳೆ ಅತ್ಯಾಚಾರ ಮಧ್ಯಾಹ್ನ 1 ಘಂಟೆಗೆ ಆಯ್ತು ಅಂತ ಇಟ್ಕೊಳಿ ಆಗ ಹೆಣ್ಣುಮಕ್ಕಳು 1 ಘಂಟೆ ಮೇಲೆ ಒಬ್ಬರೇ ಓಡಾಡುವ ಹಾಗಿಲ್ವಾ? ಎಂದು ವಿವೇಕ್‌ರವರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮಾಡುವ ಅತ್ಯಾಚಾರಿಗಳಿಗೆ ನಿಭಂದನೆಯನ್ನು ಹಾಕುವುದನ್ನು ಬಿಟ್ಟು ಇನ್ನೂ ಹೆಣ್ಣು ಮಕ್ಕಳನ್ನೆ ಬಂಧಿಸುವ ಈ ವ್ಯವಸ್ಥೆಯ ಬಗ್ಗೆ ಎನು ಹೇಳ ಬೇಕೊ? ನಾಚಿಕೆಗೇಡು… ಹೆಣ್ಣು ಮಕ್ಕಳ ಮೇಲೆ ನಿರ್ಬಂಧ ಹಾಕುವುದನ್ನು ಬಿಟ್ಟು ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡುವ ವಾತವರಣ ನಿರ್ಮಾಣ ಮಾಡಿ ತೋರಿಸಿ ನಿಮ್ಮ ಯೋಗ್ಯತೆಗೆ… ಎಂದು ಪೂರ್ಣಿಮಾರವರು ಸವಾಲು ಹಾಕಿದ್ದಾರೆ.

ಸಂಜೆ ಆರೂವರೆ ನಂತರ ಹೆಣ್ಣುಮಕ್ಕಳು ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಓಡಾಡುವುದನ್ನು ನಿಷೇಧಿಸುವ ಬದಲು ಪೂರ್ತಿಯಾಗಿ ಶಿಕ್ಷಣದಿಂದಲೇ ಹೆಣ್ಣುಮಕ್ಕಳನ್ನೇ ನಿಷೇಧಿಸಿಬಿಡಿ. ನಮ್ಮಲ್ಲೂ ತಾಲಿಬಾನ್ ಮಾದರಿ ಆಡಳಿತವಿದೆ ಎಂದು ಎದೆ ತಟ್ಟಿಕೊಂಡು ಹೇಳುತ್ತೇವೆ. ಥೂ, ನಿಮ್ಮ ಯೋಗ್ಯತೆಗಿಷ್ಟು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಯಾಗಿದ್ದಾಗಲೂ, ಯುವತಿಯಾಗಿದ್ದಾಗಲೂ, ವೃದ್ದೆಯಾಗಿದ್ದಾಗಲೂ ಮನೆಗಳಲ್ಲಿದ್ದಾಗಲೂ ತಾನೇ ಸ್ವತಂತ್ರವಾಗಿ ಸ್ತ್ರೀಯು ಯಾವ ಕಾರ್ಯವನ್ನೂ ಮಾಡಬಾರದು. ಮಹಿಳೆ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮೃತಿ ಹೇಳುತ್ತದೆ.

ಭಾರತದ ಯಾವುದೇ ನಾಗರೀಕರಿಗೆ ಜಾತಿ, ವರ್ಗ, ಧರ್ಮ, ಲಿಂಗ, ಜನಾಂಗದ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ಭಾರತದ ಸಂವಿಧಾನದ ವಿಧಿ 15 ಹೇಳುತ್ತದೆ.

ಯುವತಿಯರು ಸಂಜೆ 6:30 ರ ನಂತರ ವಿಶ್ವವಿದ್ಯಾಲಯದ ಅವರಣದಲ್ಲಿ ಏಕಾಂಗಿಯಾಗಿ ಸಂಚರಿಸಬಾರದು ಎಂದು ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಈಗ ಹೇಳಿ.. ಮೈಸೂರು ವಿವಿ ಯಾವುದನ್ನು ಪಾಲಿಸುತ್ತಿದೆ ಎಂದು ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಶಿವಪ್ಪ ರಾಮಕೃಷ್ಣರವರನ್ನು ನಾನುಗೌರಿ.ಕಾಂ ಸಂಪರ್ಕಿಸಿತು. ಅವರು, “ನಾವು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಬರೆದಿದ್ದೇವೆ. ಆ ರೀತಿಯ ಯಾವ ನಿಬಂಧನೆಗಳು ಹಾಕುವ ಉದ್ದೇಶ ನಮಗಿಲ್ಲ” ಎಂದರು. ಆದರೆ ನಿಮ್ಮ ಸುತ್ತೋಲೆ ನೇರವಾಗಿ ಹೆಣ್ಣು ಮಕ್ಕಳ ವಿರುದ್ಧವಿದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದೆಯಲ್ಲ ಎಂದು ಪ್ರಶ್ನಿಸಿದಾದ ಅದನ್ನು ತಿದ್ದುಕೊಳ್ಳುತ್ತೇವೆ. ಅದನ್ನು ವಾಪಸ್ ಪಡೆದು ಮತ್ತೊಂದು ಸುತ್ತೋಲೆ ಹೊರಡಿಸುತ್ತೇವೆ ಎಂದರು.

ಒಟ್ಟಿನಲ್ಲಿ ಅತ್ಯಾಚಾರದಂತಹ ಅಪರಾಧಗಳ ಹಿಂದಿನ ಕಾರಣಗಳನ್ನು ಅರಿಯುವಲ್ಲಿ ಸರ್ಕಾರಗಳು ಮತ್ತು ನಮ್ಮ ವಿಶ್ವವಿದ್ಯಾನಿಲಯಗಳು ಸಂಪೂರ್ಣ ವಿಫಲವಾಗಿವೆ ಎಂಬುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ. ಪ್ರಜ್ಞಾಂವಂತ ವಲಯದಿಂದ ಬಂದ ತೀವ್ರ ಆಕ್ರೋಶಕ್ಕೆ ಸರ್ಕಾರ ಮತ್ತು ವಿವಿಗಳು ಪಾಠ ಕಲಿಯಬೇಕಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...