Homeಕರ್ನಾಟಕಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿ ಹರಿಯುವ ನದಿಗಳನ್ನು ಬಯಲು ಸೀಮೆಯತ್ತ ತಿರುಗಿಸುವ ಅನಾಹುತಕಾರಿ ಕಾರ್ಯಸಾಧ್ಯವಲ್ಲದ ಯೋಜನೆಗಳು ಪ್ರಸ್ತಾಪವಾಗುತ್ತಿರುವ ಹೊತ್ತಲ್ಲೇ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಇದೇ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬರೋಬ್ಬರಿ ಒಂದು ಸಾವಿರದಾ ನಾಲ್ಕು ನೂರು ಕಿರು ಅಣೆಕಟ್ಟು ಕಟ್ಟಿ ನೀರಿನ ದಾಹ ಇಂಗಿಸಲಾಗುವುದೆಂದು ಹೇಳಿದ್ದಾರೆ! ಇಲ್ಲಿಯೇ ಸರಣಿ ಚೆಕ್ ಡ್ಯಾಮ್ ಕಟ್ಟಿದರೆ ಬಯಲು ಸೀಮೆ ನದಿಗಳಿಗೆ ಸೇರಿಸಲು ನೀರು ಸಿಗುತ್ತದಾ? ಇದೆಲ್ಲ ಒಂದಕ್ಕೊಂದು ವಿರೋಧಭಾಸದ ಹುಚ್ಚು ಲೆಕ್ಕಾಚಾರವೆಂಬ ಜಿಜ್ಞಾಸೆ ನಡೆದಿದೆ.

ಇಂಥ ಕೆಲಸಕ್ಕೆ ಬಾರದ ಯೋಜನೆಗಳ ಪ್ರಸ್ತಾಪವಾದಾಗೆಲ್ಲ ಪಶ್ಚಿಮವಾಹಿನಿ ನದಿಗಳು ವ್ಯರ್ಥವಾಗಿ ಸಮುದ್ರ ಸೇರುತ್ತದೆಂದು ಸರ್ಕಾರಿ ಪಂಡಿತರು ವ್ಯಾಖ್ಯಾನಿಸುತ್ತಾರೆ. ಆದರೆ ಪಶ್ಚಿಮವಾಹಿನಿ ನದಿಗಳು ಹರಿವಾಗ ಇಕ್ಕೆಲದ ದಂಡೆಯುದ್ದಕ್ಕೂ ಅಸಂಖ್ಯ ಜೀವ ರಾಶಿಯನ್ನು ಪೋರೆದು ಕೊನೆಗೆ ಕಡಲ ಜಲಚರಗಳಿಗೆ ಆಹಾರ-ಪೋಶಕಾಂಶ ಒದಗಿಸುತ್ತವೆ. ನದಿ ನೀರು ಸಮುದ್ರ ಸೇರದಿದ್ದರೆ ಅಳಿವೆ ಒಣಗಿ ಮೀನುಗಾರಿಕೆ, ಕೃಷಿ, ಕುಡಿಯುವ ನೀರಿನ ಬಾವಿಗಳಿಗೆ ಧಕ್ಕೆಯಾಗುತ್ತದೆ. ಹಾಗಾಗಿ ನದಿ ನೀರು ಸಮುದ್ರ ಸೇರುವುದು ವ್ಯರ್ಥವೆಂಬುದೇ ಅನರ್ಥಕಾರಿ ಮಾತೆಂದು ಪರಿಸರ ತಜ್ಞರು ಹೇಳುತ್ತಾರೆ. ಈಗ ಸಚಿವ ಮಾಧುಸ್ವಾಮಿಯೂ ಹಾಗೇ ಹೇಳಿದ್ದಾರೆ. ಪಶ್ಚಿಮ ಘಟ್ಟಗಳಲ್ಲಿನ ನದಿಗಳು ವ್ಯರ್ಥವಾಗಿ ನದಿ ಸೇರುತ್ತಿದ್ದು ಆ ನೀರನ್ನು ಕುಡಿಯುವುದಕ್ಕೆ 1,400 ಸರಣಿ ಚೆಕ್ ಡ್ಯಾಮ್‌ಗಳಲ್ಲಿ ಸಂಗ್ರಹಿಸಲಾಗುತ್ತದಂತೆ!

ಈ ಯೋಜನೆಗೆ ಪರಿಸರವಾದಿಗಳಿಂದ ದೊಡ್ಡ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಭುಗಿಲೆಳುತ್ತಿದ್ದಂತೆ ಸದರಿ ಯೋಜನೆ ಪರಿಸರಕ್ಕೆ ಮಾರಕವಲ್ಲವೆಂಬ ಸಮಜಾಯಿಶಿ ಕೊಟ್ಟಿದ್ದಾರೆ. ಪಶ್ಚಿಮ ಘಟ್ಟವಿರುವ ಐದು ಜಿಲ್ಲೆಗಳನ್ನು ಬಿಟ್ಟು ಉಳಿದ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಈ ಕಿರು ಆಣೆಕಟ್ಟೆ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗುತ್ತದಂತೆ. ಅಣೆಕಟ್ಟೆ ಎತ್ತರ ಆರು ಅಡಿಯಾದರೆ, ಅಚ್ಚುಕಟ್ಟು ಪ್ರದೇಶ 60-70 ಎಕರೆ. ದೊಡ್ಡ ಪ್ರಮಾಣದ ನೀರು ಸಂಗ್ರಹವಾಗುವುದಿಲ್ಲದ್ದರಿಂದ ಅರಣ್ಯ ನಾಶವಾಗುವುದಿಲ್ಲ, ಪರಿಸರ ಸಮಸ್ಯೆಯಿಲ್ಲ ಎಂದು ಮಂತ್ರಿ ಮಾಧುಸ್ವಾಮಿ ಹೇಳುತ್ತಾರೆ. ಇದನ್ನು ರಾಷ್ಟ್ರೀಯ ಜಲಮಿಷನ್ ಯೋಜನೆಯಲ್ಲಿ ಕಾರ್ಯಗತಗೊಳಿಸಲಾಗುತ್ತದಂತೆ. ಕೇಂದ್ರ ಸರ್ಕಾರ ನೆರವು ನೀಡುವ ಭರವಸೆಯಿದೆಯಂತೆ.

ಸಚಿವ ಮಾಧುಸ್ವಾಮಿ ಕೊಟ್ಟಿರುವ ಯೋಜನಾ ಮಾಹಿತಿ ಒಂಥರಾ ಮೋಗಮ್ ಆಗಿದೆ. ಯೋಜನೆಯ ಅಂದಾಜು ವೆಚ್ಚ, ಸಂಗ್ರಹವಾಗುವ ನೀರು ಎಲ್ಲಿ ಬಳಸಲಾಗುತ್ತದೆ, ಆ ನೀರನ್ನು ಯಾವ ವಿಧಾನದಲ್ಲಿ ಉದ್ದೇಶಿತ ಪ್ರದೇಶಕ್ಕೆ ಸಾಗಿಸಲಾಗುತ್ತದೆ ಎಂಬುದನ್ನು ಮಾಧುಸ್ವಾಮಿ ಹೇಳಿಲ್ಲ; ವಿಸ್ತ್ರತ ಯೋಜನಾ [ಡಿಪಿಆರ್] ಬಗ್ಗೆ ಕಾರ್ಯಸಾಧ್ಯತಾ ವರದಿ ಯೋಜನೆ ಅನುಷ್ಠಾನದಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಏನನ್ನು ಸ್ಪಷ್ಟಪಡಿಸಿಲ್ಲ. ಯೋಜನೆ ಜಾರಿಗೊಳಿಸಲು ಮಂತ್ರಿಗಳು ವಹಿಸಿರುವ ಆಸಕ್ತಿ ನೋಡಿದರೆ ಅವರಿಗೆ ಪಶ್ಚಿಮ ಘಟ್ಟಗಳು ಅದೆಷ್ಟು ನಾಜೂಕು ಮತ್ತಲ್ಲಿ ಅಭಿವೃದ್ಧಿ ಕಾಮಗಾರಿ ಕೈಗಳ್ಳುವಾಗ ಅದೆಂಥ ಎಚ್ಚರ ವಹಿಸಬೇಕೆಂದು ಬಾಹ್ಯಕಾಶ ವಿಜ್ಞಾನಿ ಕಸ್ತೂರಿರಂಗನ್, ಪರಿಸರ ವಿಜ್ಞಾನಿ ಮಾಧವ ಗಾಡ್ಗಿಳ್ ಮತ್ತಿತರ ಭೂ ವಿಜ್ಞಾನಿಗಳು ಅಧ್ಯಯನಪೂರ್ಣವಾಗಿ ಮಂಡಿಸಿರುವ ವರದಿಯ ಗಂಭೀರತೆಯ ಅರಿವಿರುವಂತಿಲ್ಲವೆಂದು ಪರಿಸರವಾದಿಗಳು ಹೇಳುತ್ತಾರೆ. ಅಣೆಕಟ್ಟು ಯಾವ ಗಾತ್ರದ್ದೇ ಇರಲಿ. ಘಟ್ಟದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸಿದರೆ ಘಟ್ಟದ ಬುಡ ಅಲ್ಲಾಡಿ ಗುಡ್ಡಗಳು ಕುಸಿದು ಅನಾಹುತವಾಗುತ್ತದೆ. ಘಟ್ಟದ ಮೇಲೆ ಯಾವ ಕಾಮಗಾರಿ ಕೈಗೊಂಡರೂ ಪರಿಸರದ ಲಯ ತಪ್ಪುತ್ತದೆ. ಪಶ್ಚಿಮ ಘಟ್ಟದಲ್ಲಿ ಕಿರು ಆಣೆಕಟ್ಟು ಕಟ್ಟಿದರೆ ಘಟ್ಟದ ಬುಡದಲ್ಲಿನ ಬದುಕಷ್ಟೇ ಅಲ್ಲ, ಇಡೀ ರಾಜ್ಯದ ಮೇಲೆ ಕೆಟ್ಟ ಪರಿಣಮವಾಗುತ್ತದೆ ಎಂದು ಭೂ ವಿಜ್ಞಾನಿಗಳು ಹೇಳುತ್ತಾರೆ.

ಕೊಡಗಿನದು ಮೆದು ಮಣ್ಣಾದ್ದರಿಂದ ತೇವಾಂಶ ಹೆಚ್ಚಾದರೆ ಗುಡ್ಡಗಳು ಕುಸಿಯುತ್ತವೆ. 2018ರಲ್ಲಿ ಹಾರಂಗಿ ಜಲಾಶಯದ ಹಿನ್ನಿರಿಂದ ಗುಡ್ಡಗಳು ಆಸ್ಪೋಟಿಸಿದ್ದವು. ಗುಡ್ಡದಲ್ಲಿ ಮಿನಿ ಜಲಾಶಯ ಕಟ್ಟುವುದು ಅಪಾಯಕಾರಿ ಎಂದು ಪರಿಸರವಾದಿಗಳು ಹೇಳುತ್ತಿದ್ದಾರೆ. ಕಾಫಿ ತೋಟಕ್ಕೆ ನೀರು ಹಾಯಿಸಲು ಕಾಫಿ ಬೆಳೆಗಾರರು ಹಲವು ಕೆರೆಗಳನ್ನು ನಿರ್ಮಿಸಿದ್ದರು. 2018ರಲ್ಲಿ ಮಳೆ ಜೋರಾಗಿ ಕೆರೆಗಳು ಒಡೆದು ಬೆಟ್ಟಗಳು ಕಸಿದುಬಿದ್ದು ದೊಡ್ಡ ದುರಂತ ಸಂಭವಿಸಿತ್ತು. ಬೆಟ್ಟದ ಮೇಲೆ ಕೆರೆ ನಿರ್ಮಿಸಿದ್ದೆ ಅನಾಹುತಕ್ಕೆ ಕಾರಣವೆಂದು ಭೂ ವಿಜ್ಞಾನಿಗಳು ವರದಿ ಕೊಟ್ಟಿದ್ದಾರೆ. ಇದೆಲ್ಲ ಸರಣಿ ಮಿನಿ ಜಲಾಶಯ ಕಟ್ಟಲು ಹೊರಟವರ ಕಣ್ಣು ತೆರೆಸದಿರುವುದು ದುರಂತವಾಗಿದೆ.

PC : Bantwal News

ಕಳೆದ ವರ್ಷ ತಲಕಾವೇರಿಯಲ್ಲಿ ಗುಡ್ಡ ಸ್ಪೋಟಗೊಂಡು ಗಂಡಾಂತರ ಎದುರಾಗಿತ್ತು; ಈ ಮಳೆಗಾಲದಲ್ಲಿ ಅಣಸಿ ಗುಡ್ಡ, ಅರೆಬೈಲ್ ಗುಡ್ಡ ಉರುಳಿಬಿದ್ದಿದೆ! ಯಲ್ಲಾಪುರದ ಕಳಚೆಯೆಂಬ ಹಳ್ಳಿ ಮಣ್ಣಡಿ ಹೂತು ಹೋಗಿದೆ. ಈಗ ಪಶ್ಚಿಮ ಘಟ್ಟ ಭಗದಲ್ಲಿಕರು ಜಲ ವಿದ್ಯುತ್ ಯೋಜನೆಗಳಿಂದ ಅನೇಕ ಸಮಸ್ಯೆಯಾಗುತ್ತಿದೆ. ಮಿನಿ ಡ್ಯಾಮ್ ನಿರ್ಮಾಣವಾಗುವ ಪ್ರದೇಶದ ಗುಡ್ಡಗಳಿಂದ ನೀರು ಒಸರುತ್ತದೆ. ಇದು ಭೂ ಕುಸಿತಕ್ಕೆ ಕಾರಣವಾಗಲಿದೆ. ಚೆಕ್ ಡ್ಯಾಮ್ ನಿರ್ಮಾಣಕ್ಕೆ ತಳಪಾಯ ಬಂಡೆಯಂತೆ ಗಟ್ಟಿಯಾಗಿರಬೇಕು. ಆದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಂತಹ ಗಟ್ಟಿ ಜಾಗವಿಲ್ಲ. ಮಿನಿ ಅಣೆಕಟ್ಟು ಕಟ್ಟಿದರೂ ಅವು ದೀರ್ಘ ಕಾಲ ಬಾಳಿಕೆ ಬರಲಾರದು. ಮಳೆ ನೀರಿನೊಂದಿಗೆ ಹರಿದುಬರುವ ಕಸ-ಕಡ್ಡಿ ಮಿನಿ ಡ್ಯಾಮ್‌ನಲ್ಲಿ ತುಂಬಿ ಕೊಚ್ಚಿಹೋಗುವ ಸಾಧ್ಯತೆಯೆ ಹೆಚ್ಚೆಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಇದೆಲ್ಲ ಕಿರು ಡಾಮ್‌ನಿಂದ ಕುಡಿಯುವ ನೀರಿನ ದಾಹ ತಣಿಸುವ ತರಾತುರಿಯಲ್ಲಿರುವ ಪಂಡಿತರಿಗೆ ಅರ್ಥ ಮಾಡಿಸುವವರ್‍ಯಾರು?!


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...