Homeಕರ್ನಾಟಕಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿ ಹರಿಯುವ ನದಿಗಳನ್ನು ಬಯಲು ಸೀಮೆಯತ್ತ ತಿರುಗಿಸುವ ಅನಾಹುತಕಾರಿ ಕಾರ್ಯಸಾಧ್ಯವಲ್ಲದ ಯೋಜನೆಗಳು ಪ್ರಸ್ತಾಪವಾಗುತ್ತಿರುವ ಹೊತ್ತಲ್ಲೇ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಇದೇ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬರೋಬ್ಬರಿ ಒಂದು ಸಾವಿರದಾ ನಾಲ್ಕು ನೂರು ಕಿರು ಅಣೆಕಟ್ಟು ಕಟ್ಟಿ ನೀರಿನ ದಾಹ ಇಂಗಿಸಲಾಗುವುದೆಂದು ಹೇಳಿದ್ದಾರೆ! ಇಲ್ಲಿಯೇ ಸರಣಿ ಚೆಕ್ ಡ್ಯಾಮ್ ಕಟ್ಟಿದರೆ ಬಯಲು ಸೀಮೆ ನದಿಗಳಿಗೆ ಸೇರಿಸಲು ನೀರು ಸಿಗುತ್ತದಾ? ಇದೆಲ್ಲ ಒಂದಕ್ಕೊಂದು ವಿರೋಧಭಾಸದ ಹುಚ್ಚು ಲೆಕ್ಕಾಚಾರವೆಂಬ ಜಿಜ್ಞಾಸೆ ನಡೆದಿದೆ.

ಇಂಥ ಕೆಲಸಕ್ಕೆ ಬಾರದ ಯೋಜನೆಗಳ ಪ್ರಸ್ತಾಪವಾದಾಗೆಲ್ಲ ಪಶ್ಚಿಮವಾಹಿನಿ ನದಿಗಳು ವ್ಯರ್ಥವಾಗಿ ಸಮುದ್ರ ಸೇರುತ್ತದೆಂದು ಸರ್ಕಾರಿ ಪಂಡಿತರು ವ್ಯಾಖ್ಯಾನಿಸುತ್ತಾರೆ. ಆದರೆ ಪಶ್ಚಿಮವಾಹಿನಿ ನದಿಗಳು ಹರಿವಾಗ ಇಕ್ಕೆಲದ ದಂಡೆಯುದ್ದಕ್ಕೂ ಅಸಂಖ್ಯ ಜೀವ ರಾಶಿಯನ್ನು ಪೋರೆದು ಕೊನೆಗೆ ಕಡಲ ಜಲಚರಗಳಿಗೆ ಆಹಾರ-ಪೋಶಕಾಂಶ ಒದಗಿಸುತ್ತವೆ. ನದಿ ನೀರು ಸಮುದ್ರ ಸೇರದಿದ್ದರೆ ಅಳಿವೆ ಒಣಗಿ ಮೀನುಗಾರಿಕೆ, ಕೃಷಿ, ಕುಡಿಯುವ ನೀರಿನ ಬಾವಿಗಳಿಗೆ ಧಕ್ಕೆಯಾಗುತ್ತದೆ. ಹಾಗಾಗಿ ನದಿ ನೀರು ಸಮುದ್ರ ಸೇರುವುದು ವ್ಯರ್ಥವೆಂಬುದೇ ಅನರ್ಥಕಾರಿ ಮಾತೆಂದು ಪರಿಸರ ತಜ್ಞರು ಹೇಳುತ್ತಾರೆ. ಈಗ ಸಚಿವ ಮಾಧುಸ್ವಾಮಿಯೂ ಹಾಗೇ ಹೇಳಿದ್ದಾರೆ. ಪಶ್ಚಿಮ ಘಟ್ಟಗಳಲ್ಲಿನ ನದಿಗಳು ವ್ಯರ್ಥವಾಗಿ ನದಿ ಸೇರುತ್ತಿದ್ದು ಆ ನೀರನ್ನು ಕುಡಿಯುವುದಕ್ಕೆ 1,400 ಸರಣಿ ಚೆಕ್ ಡ್ಯಾಮ್‌ಗಳಲ್ಲಿ ಸಂಗ್ರಹಿಸಲಾಗುತ್ತದಂತೆ!

ಈ ಯೋಜನೆಗೆ ಪರಿಸರವಾದಿಗಳಿಂದ ದೊಡ್ಡ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಭುಗಿಲೆಳುತ್ತಿದ್ದಂತೆ ಸದರಿ ಯೋಜನೆ ಪರಿಸರಕ್ಕೆ ಮಾರಕವಲ್ಲವೆಂಬ ಸಮಜಾಯಿಶಿ ಕೊಟ್ಟಿದ್ದಾರೆ. ಪಶ್ಚಿಮ ಘಟ್ಟವಿರುವ ಐದು ಜಿಲ್ಲೆಗಳನ್ನು ಬಿಟ್ಟು ಉಳಿದ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಈ ಕಿರು ಆಣೆಕಟ್ಟೆ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗುತ್ತದಂತೆ. ಅಣೆಕಟ್ಟೆ ಎತ್ತರ ಆರು ಅಡಿಯಾದರೆ, ಅಚ್ಚುಕಟ್ಟು ಪ್ರದೇಶ 60-70 ಎಕರೆ. ದೊಡ್ಡ ಪ್ರಮಾಣದ ನೀರು ಸಂಗ್ರಹವಾಗುವುದಿಲ್ಲದ್ದರಿಂದ ಅರಣ್ಯ ನಾಶವಾಗುವುದಿಲ್ಲ, ಪರಿಸರ ಸಮಸ್ಯೆಯಿಲ್ಲ ಎಂದು ಮಂತ್ರಿ ಮಾಧುಸ್ವಾಮಿ ಹೇಳುತ್ತಾರೆ. ಇದನ್ನು ರಾಷ್ಟ್ರೀಯ ಜಲಮಿಷನ್ ಯೋಜನೆಯಲ್ಲಿ ಕಾರ್ಯಗತಗೊಳಿಸಲಾಗುತ್ತದಂತೆ. ಕೇಂದ್ರ ಸರ್ಕಾರ ನೆರವು ನೀಡುವ ಭರವಸೆಯಿದೆಯಂತೆ.

ಸಚಿವ ಮಾಧುಸ್ವಾಮಿ ಕೊಟ್ಟಿರುವ ಯೋಜನಾ ಮಾಹಿತಿ ಒಂಥರಾ ಮೋಗಮ್ ಆಗಿದೆ. ಯೋಜನೆಯ ಅಂದಾಜು ವೆಚ್ಚ, ಸಂಗ್ರಹವಾಗುವ ನೀರು ಎಲ್ಲಿ ಬಳಸಲಾಗುತ್ತದೆ, ಆ ನೀರನ್ನು ಯಾವ ವಿಧಾನದಲ್ಲಿ ಉದ್ದೇಶಿತ ಪ್ರದೇಶಕ್ಕೆ ಸಾಗಿಸಲಾಗುತ್ತದೆ ಎಂಬುದನ್ನು ಮಾಧುಸ್ವಾಮಿ ಹೇಳಿಲ್ಲ; ವಿಸ್ತ್ರತ ಯೋಜನಾ [ಡಿಪಿಆರ್] ಬಗ್ಗೆ ಕಾರ್ಯಸಾಧ್ಯತಾ ವರದಿ ಯೋಜನೆ ಅನುಷ್ಠಾನದಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಏನನ್ನು ಸ್ಪಷ್ಟಪಡಿಸಿಲ್ಲ. ಯೋಜನೆ ಜಾರಿಗೊಳಿಸಲು ಮಂತ್ರಿಗಳು ವಹಿಸಿರುವ ಆಸಕ್ತಿ ನೋಡಿದರೆ ಅವರಿಗೆ ಪಶ್ಚಿಮ ಘಟ್ಟಗಳು ಅದೆಷ್ಟು ನಾಜೂಕು ಮತ್ತಲ್ಲಿ ಅಭಿವೃದ್ಧಿ ಕಾಮಗಾರಿ ಕೈಗಳ್ಳುವಾಗ ಅದೆಂಥ ಎಚ್ಚರ ವಹಿಸಬೇಕೆಂದು ಬಾಹ್ಯಕಾಶ ವಿಜ್ಞಾನಿ ಕಸ್ತೂರಿರಂಗನ್, ಪರಿಸರ ವಿಜ್ಞಾನಿ ಮಾಧವ ಗಾಡ್ಗಿಳ್ ಮತ್ತಿತರ ಭೂ ವಿಜ್ಞಾನಿಗಳು ಅಧ್ಯಯನಪೂರ್ಣವಾಗಿ ಮಂಡಿಸಿರುವ ವರದಿಯ ಗಂಭೀರತೆಯ ಅರಿವಿರುವಂತಿಲ್ಲವೆಂದು ಪರಿಸರವಾದಿಗಳು ಹೇಳುತ್ತಾರೆ. ಅಣೆಕಟ್ಟು ಯಾವ ಗಾತ್ರದ್ದೇ ಇರಲಿ. ಘಟ್ಟದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸಿದರೆ ಘಟ್ಟದ ಬುಡ ಅಲ್ಲಾಡಿ ಗುಡ್ಡಗಳು ಕುಸಿದು ಅನಾಹುತವಾಗುತ್ತದೆ. ಘಟ್ಟದ ಮೇಲೆ ಯಾವ ಕಾಮಗಾರಿ ಕೈಗೊಂಡರೂ ಪರಿಸರದ ಲಯ ತಪ್ಪುತ್ತದೆ. ಪಶ್ಚಿಮ ಘಟ್ಟದಲ್ಲಿ ಕಿರು ಆಣೆಕಟ್ಟು ಕಟ್ಟಿದರೆ ಘಟ್ಟದ ಬುಡದಲ್ಲಿನ ಬದುಕಷ್ಟೇ ಅಲ್ಲ, ಇಡೀ ರಾಜ್ಯದ ಮೇಲೆ ಕೆಟ್ಟ ಪರಿಣಮವಾಗುತ್ತದೆ ಎಂದು ಭೂ ವಿಜ್ಞಾನಿಗಳು ಹೇಳುತ್ತಾರೆ.

ಕೊಡಗಿನದು ಮೆದು ಮಣ್ಣಾದ್ದರಿಂದ ತೇವಾಂಶ ಹೆಚ್ಚಾದರೆ ಗುಡ್ಡಗಳು ಕುಸಿಯುತ್ತವೆ. 2018ರಲ್ಲಿ ಹಾರಂಗಿ ಜಲಾಶಯದ ಹಿನ್ನಿರಿಂದ ಗುಡ್ಡಗಳು ಆಸ್ಪೋಟಿಸಿದ್ದವು. ಗುಡ್ಡದಲ್ಲಿ ಮಿನಿ ಜಲಾಶಯ ಕಟ್ಟುವುದು ಅಪಾಯಕಾರಿ ಎಂದು ಪರಿಸರವಾದಿಗಳು ಹೇಳುತ್ತಿದ್ದಾರೆ. ಕಾಫಿ ತೋಟಕ್ಕೆ ನೀರು ಹಾಯಿಸಲು ಕಾಫಿ ಬೆಳೆಗಾರರು ಹಲವು ಕೆರೆಗಳನ್ನು ನಿರ್ಮಿಸಿದ್ದರು. 2018ರಲ್ಲಿ ಮಳೆ ಜೋರಾಗಿ ಕೆರೆಗಳು ಒಡೆದು ಬೆಟ್ಟಗಳು ಕಸಿದುಬಿದ್ದು ದೊಡ್ಡ ದುರಂತ ಸಂಭವಿಸಿತ್ತು. ಬೆಟ್ಟದ ಮೇಲೆ ಕೆರೆ ನಿರ್ಮಿಸಿದ್ದೆ ಅನಾಹುತಕ್ಕೆ ಕಾರಣವೆಂದು ಭೂ ವಿಜ್ಞಾನಿಗಳು ವರದಿ ಕೊಟ್ಟಿದ್ದಾರೆ. ಇದೆಲ್ಲ ಸರಣಿ ಮಿನಿ ಜಲಾಶಯ ಕಟ್ಟಲು ಹೊರಟವರ ಕಣ್ಣು ತೆರೆಸದಿರುವುದು ದುರಂತವಾಗಿದೆ.

PC : Bantwal News

ಕಳೆದ ವರ್ಷ ತಲಕಾವೇರಿಯಲ್ಲಿ ಗುಡ್ಡ ಸ್ಪೋಟಗೊಂಡು ಗಂಡಾಂತರ ಎದುರಾಗಿತ್ತು; ಈ ಮಳೆಗಾಲದಲ್ಲಿ ಅಣಸಿ ಗುಡ್ಡ, ಅರೆಬೈಲ್ ಗುಡ್ಡ ಉರುಳಿಬಿದ್ದಿದೆ! ಯಲ್ಲಾಪುರದ ಕಳಚೆಯೆಂಬ ಹಳ್ಳಿ ಮಣ್ಣಡಿ ಹೂತು ಹೋಗಿದೆ. ಈಗ ಪಶ್ಚಿಮ ಘಟ್ಟ ಭಗದಲ್ಲಿಕರು ಜಲ ವಿದ್ಯುತ್ ಯೋಜನೆಗಳಿಂದ ಅನೇಕ ಸಮಸ್ಯೆಯಾಗುತ್ತಿದೆ. ಮಿನಿ ಡ್ಯಾಮ್ ನಿರ್ಮಾಣವಾಗುವ ಪ್ರದೇಶದ ಗುಡ್ಡಗಳಿಂದ ನೀರು ಒಸರುತ್ತದೆ. ಇದು ಭೂ ಕುಸಿತಕ್ಕೆ ಕಾರಣವಾಗಲಿದೆ. ಚೆಕ್ ಡ್ಯಾಮ್ ನಿರ್ಮಾಣಕ್ಕೆ ತಳಪಾಯ ಬಂಡೆಯಂತೆ ಗಟ್ಟಿಯಾಗಿರಬೇಕು. ಆದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಂತಹ ಗಟ್ಟಿ ಜಾಗವಿಲ್ಲ. ಮಿನಿ ಅಣೆಕಟ್ಟು ಕಟ್ಟಿದರೂ ಅವು ದೀರ್ಘ ಕಾಲ ಬಾಳಿಕೆ ಬರಲಾರದು. ಮಳೆ ನೀರಿನೊಂದಿಗೆ ಹರಿದುಬರುವ ಕಸ-ಕಡ್ಡಿ ಮಿನಿ ಡ್ಯಾಮ್‌ನಲ್ಲಿ ತುಂಬಿ ಕೊಚ್ಚಿಹೋಗುವ ಸಾಧ್ಯತೆಯೆ ಹೆಚ್ಚೆಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಇದೆಲ್ಲ ಕಿರು ಡಾಮ್‌ನಿಂದ ಕುಡಿಯುವ ನೀರಿನ ದಾಹ ತಣಿಸುವ ತರಾತುರಿಯಲ್ಲಿರುವ ಪಂಡಿತರಿಗೆ ಅರ್ಥ ಮಾಡಿಸುವವರ್‍ಯಾರು?!


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...