Homeಮುಖಪುಟಕ್ಷಮೆ ಕೇಳುವರೇ ನರೇಂದ್ರ ಮೋದಿ? ಸವಾಲು ಒಪ್ಪಿಕೊಳ್ಳುವರೇ ಮೋದಿ?

ಕ್ಷಮೆ ಕೇಳುವರೇ ನರೇಂದ್ರ ಮೋದಿ? ಸವಾಲು ಒಪ್ಪಿಕೊಳ್ಳುವರೇ ಮೋದಿ?

- Advertisement -
- Advertisement -

//ನಾನು ಗೌರಿ ಡೆಸ್ಕ್//

ಇಂದು ನರೇಂದ್ರ ಮೋದಿಯವರಿಗೆ ಎರಡೆರಡು ಸವಾಲುಗಳು ಎದುರಾಗಿವೆ. ಒಂದು ಅವರ ಪಕ್ಷಕ್ಕೆ ಸೇರಿದ ಅಭ್ಯರ್ಥಿಗೆ ಸಂಬಂಧಿಸಿದ್ದರೆ, ಇನ್ನೊಂದು ಅವರ ಎದುರಾಳಿ ರಾಹುಲ್‍ಗಾಂಧಿಯದ್ದಾಗಿದೆ.
ಮಹಾತ್ಮಾಗಾಂಧಿಯವರ ಕೊಲೆಗಡುಕ ನಾಥೂರಾಂ ಗೋಡ್ಸೆ ದೇಶಭಕ್ತ ಎಂಬ ಪ್ರಗ್ಯಾ ಠಾಕೂರ್ ಹೇಳಿಕೆಯ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಕ್ಷಮೆ ಕೇಳಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಒತ್ತಾಯಿಸಿದ್ದಾರೆ. ಪ್ರಗ್ಯಾರ ಈ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಬಿಜೆಪಿಯ ವಕ್ತಾರ ಜಿವಿಎಲ್ ನರಸಿಂಹರಾವ್ ಅದನ್ನು ಖಂಡಿಸಿದರಲ್ಲದೇ, ಪ್ರಗ್ಯಾ ಇದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದೂ ಹೇಳಿದ್ದರು. ಇದಕ್ಕೂ ಮುಂಚೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆಯ ವಿರುದ್ಧವೂ ಪ್ರಗ್ಯಾ ಹೇಳಿಕೆ ನೀಡಿ ಅವರ ಪಕ್ಷವನ್ನು ಮುಜುಗರಕ್ಕೆ ಸಿಕ್ಕಿಸಿದ್ದರು. ಅದರ ಬಗ್ಗೆಯೂ ಬಿಜೆಪಿಯು ಕ್ಷಮೆ ಕೇಳಲು ಸೂಚಿಸಿದ್ದರಿಂದ ಪ್ರಗ್ಯಾ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಪ್ರಗ್ಯಾ ಹೇಳಿಕೆ ಏನು?
ಆದರೆ, ಈ ಸಾರಿ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಒಪ್ಪಲು ನೆಟ್ಟಿಗರು ಸಿದ್ಧರಿಲ್ಲ. ಅವರ ಪ್ರಕಾರ, ನರೇಂದ್ರ ಮೋದಿ ನಿರ್ದಿಷ್ಟ ಕಾರಣದಿಂದ ಪ್ರಗ್ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಸ್ವತಃ ಅವರೇ ಇದಕ್ಕೆ ಕ್ಷಮೆ ಯಾಚಿಸಬೇಕು ಎಂಬುದಾಗಿದೆ.
ಮೊಟ್ಟ ಮೊದಲಿಗೆ ಇದಕ್ಕೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ನಾಥೂರಾಮ್ ಗೋಡ್ಸೆ ದೇಶಭಕ್ತನಾದರೆ, ಮಹಾತ್ಮಾ ಗಾಂಧಿ ದೇಶವಿರೋಧಿಯೇ ಎಂದು ಟ್ವಿಟ್ಟರ್‍ನಲ್ಲಿ ಕೇಳಿದ್ದರು.

ಇವೆಲ್ಲವೂ ಉದ್ಭವಿಸಿದ್ದು, ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ನಾಥೂರಾಂ ಗೋಡ್ಸೆ ಮತ್ತು ಆತನೊಬ್ಬ ಹಿಂದು ಎಂದು ಹೇಳಿದ ನಂತರ. ಇದಕ್ಕೆ ಪ್ರತಿಕ್ರಿಯಿಸುತ್ತಾ, ಸ್ವತಃ ನರೇಂದ್ರ ಮೋದಿಯವರೂ ‘ಹಿಂದೂ ಒಬ್ಬ ಭಯೋತ್ಪಾದಕ ಆಗಲು ಸಾಧ್ಯವೇ ಇಲ್ಲ’ ಎಂದು ಚುನಾವಣಾ ಭಾಷಣದಲ್ಲೇ ಹೇಳಿದ್ದರು. ಹಾಗಾದರೆ, ನಾಥೂರಾಂ ಗೋಡ್ಸೆಯ ಬಗ್ಗೆ ನಿಮ್ಮ ನಿಲುವೇನು ಎಂಬ ಪ್ರಶ್ನೆ ಉದ್ಭವಿಸಿತ್ತು. ಅದಕ್ಕೆ ಪ್ರಧಾನಿಯವರು ಇನ್ನೂ ಉತ್ತರಿಸಿಲ್ಲ.
ಪತ್ರಕರ್ತೆ ನಿಧಿ ರಾಜ್ದಾನ್ ಸಹಾ ಈ ಬಗ್ಗೆ ಕಿಡಿಕಾರುತ್ತಾ, ಇಂತಹದೊಂದು ಸ್ಥಿತಿ ಬರುತ್ತದೆಂದು ನಾನೆಂದೂ ಬಗೆದಿರಲಿಲ್ಲ ಎಂದಿದ್ದಾರೆ.

ದುರಂತವೆಂದರೆ, ಪ್ರಗ್ಯಾ ಹೇಳಿಕೆಯನ್ನು ಖಂಡಿಸುತ್ತಾ ಎಐಎಂಐಎಂನ ಸಂಸದ ಓವೈಸಿ ಟ್ವೀಟ್ ಮಾಡಿ, ಇದು ಹೀಗೆಯೇ ಮುಂದುವರೆದು ‘ಶ್ರೀ ಶ್ರೀ ಗೋಡ್ಸೆಗೆ’ ಭಾರತರತ್ನ ಕೊಟ್ಟರೂ ಆಶ್ಚರ್ಯವಿಲ್ಲ ಎಂದಿದ್ದಕ್ಕೆ, ಚೌಕೀದಾರ್ ಶಿವಂ ಘಟಕ್ ಎಂಬಾತ, ಹೌದು ಗೋಡ್ಸೆಗೆ ಭಾರತರತ್ನ ಕೊಡಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಪತ್ರಕರ್ತ ನಿಖಿಲ್ ವಾಗ್ಲೆ ಸಹಾ ಇದನ್ನು ಖಂಡಿಸಿರುವುದಲ್ಲದೇ, ಇದರ ಹಿಂದೆ ಆರೆಸ್ಸೆಸ್‍ನ ಅಜೆಂಡಾ ಕೆಲಸ ಮಾಡುತ್ತಿದ್ದು, ರಾಷ್ಟ್ರದ ಭಾವನೆಗಳನ್ನು ಕೆರಳಿಸುತ್ತಿದ್ದಾರೆಂದು ಹೇಳಿದ್ದಾರೆ.

ಕಾಂಗ್ರೆಸ್‍ನ ಮಾಧ್ಯಮ ಉಸ್ತುವಾರಿ ನರೇಂದ್ರ ಸಲೂಜಾ, ‘ಇದು ಬಿಜೆಪಿಯ ತಾತ್ವಿಕತೆಯನ್ನು ತೋರಿಸುತ್ತದೆ ಮತ್ತು ಬಿಜೆಪಿ ಪಕ್ಷವು ಎಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿದೆ ಎಂಬುದನ್ನು ಬಯಲುಗೊಳಿಸುತ್ತಿದೆ’ ಎಂದಿದ್ದಾರೆ. ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕಟುವಾಗಿ ಪ್ರತಿಕ್ರಿಯಿಸಿ ‘ಗೋಡ್ಸೆಯ ಉತ್ತರಾಧಿಕಾರಿಗಳಾದ ಬಿಜೆಪಿಯವರಿಂದ ದೇಶದ ಆತ್ಮವೇ ದಾಳಿಗೊಳಗಾಗುತ್ತಿದೆ’ ಎಂದಿದ್ದಾರೆ. ‘ರಾಷ್ಟ್ರಪಿತನ ಕೊಲೆ ಮಾಡಿದವನನ್ನೇ ರಾಷ್ಟ್ರಭಕ್ತನೆಂದೂ, ದೇಶಕ್ಕಾಗಿ ಪ್ರಾಣತೆತ್ತ ಭಯೋತ್ಪಾದಕ ನಿರೋಧಕ ದಳದ ಮುಖ್ಯಸ್ಥ ಹುತಾತ್ಮ ಕರ್ಕರೆಯನ್ನು ದೇಶವಿರೋಧಿಯೆಂದೂ ಬಿಜೆಪಿಯವರು ಕರೆಯುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
ಪ್ರಗ್ಯಾ ಠಾಕೂರ್‍ರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್‍ಸಿಂಗ್ ‘ಮೋದಿ ಮತ್ತು ಅಮಿತ್‍ಷಾ ತಮ್ಮ ಹೇಳಿಕೆಗಳನ್ನು ನೀಡಿ ದೇಶದ ಮುಂದೆ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರಗ್ಯಾ ಸಿಂಗ್ ಸಹಚರರಿಗೆ ಗೌರಿ ಲಂಕೇಶ್ ಹಂತಕರ ನಂಟು?

ಪದೇ ಪದೇ ಗೋಡ್ಸೆಯ ವಿಚಾರವನ್ನು ಬಿಜೆಪಿಯ ಕೆಲವರು ಮುಂದೆ ತರುತ್ತಿದ್ದಾಗ್ಯೂ ಪ್ರಧಾನಿ ಮೋದಿ ಬಾಯಿ ಬಿಟ್ಟಿಲ್ಲ. ಈ ಹಿನ್ನೆಲೆಯಲ್ಲಿಯೂ ಮೋದಿ ಕ್ಷಮೆ ಯಾಚಿಸಬೇಕು ಎಂಬ ವಿಚಾರ ಮುನ್ನೆಲೆಗೆ ಬಂದಿದೆ. ಪ್ರಧಾನಿಯವರು ಏನು ಹೇಳುತ್ತಾರೆ ಎಂದು ಕಾದು ನೋಡಬೇಕು.

ಮೋದಿಯವರಿಗೆ ಎದುರಾಗಿರುವ ಇನ್ನೊಂದು ಸಂಗತಿಯೆಂದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರ ಸವಾಲು. ಮೋದಿಯವರಿಗೆ ಧೈರ್ಯವಿದ್ದರೆ ತನ್ನೊಂದಿಗೆ ಮುಖಾಮುಖಿ ಚರ್ಚೆಗೆ ಬರಲಿ. ತಾನು ಕೇವಲ 15 ನಿಮಿಷ ಮಾತಾಡುತ್ತೇನೆ. ಮೋದಿಯವರು 2 ಗಂಟೆ ಮಾತಾಡಲಿ ಎಂಬುದು ರಾಹುಲ್ ಸವಾಲು. ಇದನ್ನು ಈ ಹಿಂದೆಯೂ ಹೇಳಿದ್ದ ರಾಹುಲ್‍ಗಾಂಧಿ, ಕಡೆಯ ಹಂತದ ಚುನಾವಣೆಗೆ ಮುಂಚೆ ಅದನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ರಾಫೇಲ್ ಡೀಲ್‍ಗೆ ಸಂಬಂಧಿಸಿದಂತೆ ರಾಹುಲ್‍ಗಾಂಧಿಯವರ ಬಳಿ ಇನ್ನೂ ದೊಡ್ಡ ಸತ್ಯವೊಂದಿದ್ದು, ಅದನ್ನು ಬಹಿರಂಗ ಪಡಿಸುವ ಅವಕಾಶಕ್ಕಾಗಿ ಅವರು ಹೀಗೆ ಮಾಡುತ್ತಿದ್ದಾರೆಂಬ ಕುತೂಹಲ ದೆಹಲಿಯ ರಾಜಕೀಯ ವಲಯಗಳಲ್ಲಿದೆ.
ಈ ವಿಚಾರಗಳ ಕುರಿತು ಪ್ರಧಾನಿಯವರು ಪ್ರತಿಕ್ರಿಯಿಸದೇ ಮೌನ ತಾಳುವುದು ಹಿಂದಿನಿಂದಲೂ ಟೀಕೆಗೊಳಗಾಗಿದ್ದು, ಈ ಸಾರಿ ಮೋದಿ ಮೌನ ಮುರಿಯುವರೇ ಎಂಬುದಕ್ಕೆ ಮುಂದಿನ ದಿನಗಳೇ ಉತ್ತರ ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...