Homeಕರ್ನಾಟಕಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಎರೆಡೆರೆಡು ಬಾರಿ ಮುಖ್ಯಮಂತ್ರಿಯಾಗಿ ಬೇಜವಾಬ್ದಾರಿಯಾಗಿ ‘ಪ್ರಜಾಪ್ರಭುತ್ವ ವಿರೋಧಿ ಸಲಹೆ’ ನೀಡಿದ್ದಾರೆ ಎಂದು ನಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ವಿರುದ್ದ ರಾಜಕಾರಣಿಗಳು ತಮಗೆ ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಕನ್ನಡದ ಖ್ಯಾತ ಚಿತ್ರ ನಟ ಚೇತನ್ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಸಮಾಜದಲ್ಲಿ ಇರುವ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಿ ಲಿಂಗ ಸಮಾನತೆಯ ರಾಜ್ಯವನ್ನು ನಿರ್ಮಿಸಲು ಕಾಂಗ್ರೆಸ್-ಬಿಜೆಪಿ-ಜೆಡಿಎಸ್‌ನ ಪುರುಷರು ಮತ್ತು ಮಹಿಳೆಯರು ಅಸಮರ್ಥರಾಗಿದ್ದಾರೆ ಎಂದು ರಾಜ್ಯಕ್ಕೆ ಬಂದ 16 ವರ್ಷಗಳ ನಂತರ ನಾನು ಅರಿತುಕೊಂಡೆ” ಎಂದು ಅವರು ಚೇತನ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ಅಧಿಕಾರದಲ್ಲಿರುವ ಅನೇಕರು ಮಹಿಳೆಯರ ಮೇಲಿನ ಶೋಷಣೆಯನ್ನು ನಿರಾಕರಿಸುತ್ತಾರೆ, ಆದರೆ ಹೆಚ್ಚಿನವರು ಇದಕ್ಕೆ ಪರಿಹಾರವಾಗಿ ರಕ್ತಪಾತವನ್ನೇ ಪ್ರತಿಪಾದಿಸುತ್ತಾರೆ. ನಮ್ಮ ಶಾಸಕರು ಕಲಿಯಬೇಕು ಮತ್ತು ಕಲಿಸಿಕೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ 

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಚೇತನ್‌ ಕುಮಾರ್‌, “ಕುಮಾರ ಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ‘ಮೈಸೂರು ಪ್ರಕರಣ’ದ ಆರೋಪಿಗಳನ್ನು ಆಂಧ್ರ ಮಾದರಿಯಲ್ಲಿ ನಡೆಸಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು.

2019 ರ ಹೈದರಾಬಾದ್ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದರು. “ಈ ಘಟನೆಯ ಮಾದರಿಯು ಇನ್ನಷ್ಟು ತಪ್ಪುಗಳಿಗೆ ಎಡೆ ಮಾಡಿಕೊಡುತ್ತದೆ. ಶಿಕ್ಷೆಯನ್ನು ನ್ಯಾಯಾಂಗ ನೀಡಬೇಕೆ ವಿನಃ ಪೊಲೀಸರು ಅಲ್ಲ. ಯಾವುದೆ ವಿಚಾರಣೆಯಿಲ್ಲದೆ ಆರೋಪಿಗಳನ್ನು ಸಾಯಿಸುವುದಾದರೆ ದೇಶದಲ್ಲಿ ಕೋರ್ಟ್‌ಗಳು ಯಾಕೆ? ಈ ಮಾದರಿಯನ್ನು ಬಳಸಿಕೊಂಡು ಅಮಾಯರನ್ನೂ ಕೊಲೆ ಮಾಡಬಹುದಲ್ಲವೆ” ಎಂದು ಹಲವಾರು ಜನರು ಹೇಳಿದ್ದರು. 2019 ರ ಹೈದರಾಬಾದ್ ಎನ್‌ಕೌಂಟರ್‌ ಅನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಲಾಗಿತ್ತು.

“ಎರಡು ಬಾರಿ ಮುಖ್ಯಮಂತ್ರಿ ಆಗಿರುವ ಕುಮಾರಸ್ವಾಮಿಯವರು ಎಂದಿನಂತೆ ಮತ್ತೊಮ್ಮೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೈಸೂರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕೆಯವರು 2019 ರ ಹೈದರಾಬಾದ್ ಅತ್ಯಾಚಾರದ ಆರೋಪಿತರ ಮೇಲೆ ನಡೆದಂತೆ ಪೋಲಿಸ್ ದೌರ್ಜನ್ಯದಂತ ಪ್ರಜಾಪ್ರಭುತ್ವ ವಿರೋಧಿ ಸಲಹೆಯನ್ನ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಂತೆಯೆ ಜೆಡಿಎಸ್ ಕೂಡ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು, ಲಿಂಗಸಮಾನತೆಯ ನ್ಯಾಯ ಒದಗಿಸಲು ನಾಲಾಯಕ್ಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನೂ ಚೇತನ್ ವಿರೋಧಿಸಿದ್ದು, “ಯುವತಿದ್ದೇ ತಪ್ಪೆನ್ನುವ ಹಾಗೆ ಮಾತನಾಡಿರುವುದು ಕೇವಲ ಬಿಜೆಪಿಯೊಂದರ ಸಮಸ್ಯೆಯಲ್ಲ. 2015 ರಲ್ಲಿ, ಕಾಂಗ್ರೆಸ್‌‌ನ ಗೃಹ ಮಂತ್ರಿಯಾಗಿದ್ದ ಪರಮೇಶ್ವರ ಅವರು ಕೂಡ ಅತ್ಯಾಚಾರಕ್ಕೆ ಒಳಗಾದ ಯುವತಿಯು ರಾತ್ರಿ 9.30ರ ಹೊತ್ತಲ್ಲಿ ಆಕೆ ಬೆಂಗಳೂರಿನಲ್ಲಿ ಆಚೆ ಯಾಕಿದ್ದಳು ಎಂದು ಪ್ರಶ್ನೆ ಮಾಡಿದ್ದರು. ಅಧಿಕಾರದಲ್ಲಿರುವ ಅನೇಕ ಮಹಿಳೆಯರು ಕೂಡ ಇದೇ ರೀತಿಯ ಸ್ತ್ರೀ ಶೋಷಣೆಯನ್ನು ಪ್ರದರ್ಶಿಸುತ್ತಾರೆ. ಅಂತರ್ನಿರ್ಮಿತ ಸ್ತ್ರೀ ವಿರೋಧಿ ತತ್ವ(Sexism)ಗಳನ್ನು ಹೋಗಲಾಡಿಸಲು ಲಿಂಗ ಜಾಗೃತಿ ಅಭಿಯಾನಗಳು ಅತ್ಯಗತ್ಯ” ಎಂದು ಹೇಳಿದ್ದಾರೆ.

ಈ ಮಧ್ಯೆ ಮೈಸೂರು ವಿಶ್ವವಿದ್ಯಾಲಯ ಕೂಡಾ ಅತ್ಯಾಚಾರಕ್ಕೆ ಮಹಿಳೆಯರೇ ಕಾರಣ ಎಂಬಂತಹ ನಿಲುವನ್ನು ತೆಳೆದಿದ್ದು, ಸಂಜೆಯ ನಂತರ ವಿದ್ಯಾರ್ಥಿನಿಯರು ಏಕಾಂಗಿಯಾಗಿ ಇರಬಾರದು ಎಂಬಂತಹ ಸುತ್ತೋಲೆಯನ್ನು ಹೊರಡಿಸಿ ವಿವಾಕ್ಕೆ ಈಡಾಗಿದೆ.

“ಇತ್ತೀಚೆಗಿನ ಅತ್ಯಾಚಾರ ಘಟನೆಯ ಹಿನ್ನಲೆಯಲ್ಲಿ, ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಸುತ್ತೋಲೆ ಹೇಳಿದೆ. ಇದರ ವಿರುದ್ದ ಕೂಡಾ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...