Homeಚಳವಳಿಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ - ಕುಡಿಯುವ ನೀರಿಗೂ ಅಡ್ಡಿ

ಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ – ಕುಡಿಯುವ ನೀರಿಗೂ ಅಡ್ಡಿ

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ..

- Advertisement -
- Advertisement -

ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಕರಾವಳಿಯ ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಡಿ-ಮೈಲಿಗೆ, ಮೂಢ ನಂಬಿಕೆ, ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ದತಿಗಳು ಇಂದಿಗೂ ಒಳಗೊಳಗೆ ನಡೆಯುತ್ತಿವೆ. ಅಜಲು ಪದ್ದತಿಯಂತ ಅಮಾನುಷ ಸಂಪ್ರದಾಯ ಆಚರಿಸುವಂತೆ ದಲಿತರಿಗೆ ಮೇಲು ವರ್ಗದವರು ಬಲವಂತ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕಂದಾವರ ಗ್ರಾಮದಲ್ಲಿ ಮೊನ್ನೆ ಸವರ್ಣೀಯರು 28 ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ! ಅಷ್ಟೇ ಅಲ್ಲ, ಆ ದಲಿತರ ಕೇರಿಗೆ ಗ್ರಾಮ ಪಂಚಾಯತಿಯಿಂದ ಕುಡಿಯುವ ನೀರು ಸರಬರಾಜು ಆಗದಂತೆ ನೋಡಿಕೊಳ್ಳಲಾಗಿದೆ. ಇದರ ಹಿಂದೆ ರಾಜಕೀಯ, ಜಾತಿ ಅಹಂಕಾರ ಕೆಲಸ ಮಾಡಿದೆ ಮಾತ್ರವಲ್ಲ ಸಂವಿಧಾನದ, ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಂದಾವರ ಗ್ರಾಮ ಪಂಚಾಯತ್‌ನ ಇಬ್ಬರು ಮಹಿಳಾ ಸದಸ್ಯೆಯರು ಮತ್ತು ಒಬ್ಬ ಪರುಷ ಸದಸ್ಯ ದಲಿತರಿಗೆ ಜಾತಿನಿಂದನೆ ಮಾಡಿ ಕಿರುಕುಳ ಕೊಟ್ಟ ಕುರಿತು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಪಂ ಸದಸ್ಯ ರಾಮಚಂದ್ರ ಶೆರೇಗಾರ್, ಅನುಪಮಾ ಶೆಟ್ಟಿ ಮತ್ತು ಜಯಶ್ರೀ ಶೆಟ್ಟಿ ದಲಿತರಿಗೆ ಗ್ರಾಮ ಪಂಚಾಯತ್‌ನಿಂದ ನೀರು ಸಿಗದಂತೆ ಮಾಡಿ ನೀರಿಗಾಗಿ ಪ್ರಯತ್ನಿಸಿದ ದಲಿತರ ಮೇಲೆಡ ದೌರ್ಜನ್ಯ ನಡೆಸಿದ್ದಾರೆಂದು ದೂರಲಾಗಿದೆ. ಈ ಜಾತಿ ಬಲದ ಸದಸ್ಯರ ಚಿತಾವಣೆಯಿಂದ ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೂ ಒಳಗಾಗಿವೆ. ಈ ಪಂಚಾಯತ್ ಸದಸ್ಯರ ಮೇಲೀಗ ದಲಿತ ದೌರ್ಜನ್ಯದ ಕೇಸು ಹಾಕಲಾಗಿದೆ.

ಸುಮಾರು 28 ದಲಿತ ಕುಟುಂಬಗಳು ಕಂದಾವರದ ಸರಕಾರಿ ಭೂಮಿ ಸರ್ವೆ ನಂಬರ್ 152/ಪಿ1ರಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಗುಡಿಸಲು ಕಟ್ಟಿಕೊಂಡು ಉಳಿದಿದ್ದ ದಲಿತರು, ಸದರಿ ಜಾಗ ತಮಗೆ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಕೇಳಿಕೊಳ್ಳುತ್ತ ಬಂದಿದ್ದರು. ಮೂರು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಮೇರಿ ಪ್ರಿಯಾಂಕಾ ಎಂಟು ಎಕರೆ ಜಾಗ ದಲಿತ ಕುಟುಂಬಗಳಿಗೆ ಮಂಜೂರು ಮಾಡಿದ್ದರು. ತಮ್ಮ ಬೇಡಿಕೆ ಈಡೇರಿಸಿದ ಡಿಸಿ ಮೇರಿ ಪ್ರಿಯಾಂಕ ಅವರ ಹೆಸರನ್ನೇ ತಮ್ಮ ಕೇರಿಗೆ ಇಡಲು ದಲಿತರು ಯೋಚಿಸಿದ್ದರು. ಆದರೆ ದಲಿತರ ಆ ಕೇರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮೂರು ವರ್ಷದಿಂದಲೂ ಇರಲಿಲ್ಲ. ಗ್ರಾಮ ಪಂಚಾಯತಿಗೆ ಪದೇ ಪದೇ ನೀರು ಸರಬರಾಜು ವ್ಯವಸ್ಥೆ ಮಾಡುವಂತೆ ವಿನಂತಿಸಿಕೊಂಡರೂ ಆಡಳಿತಗಾರರು ದಲಿತರ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡಲಿಲ್ಲ.

ದಲಿತರು ಕುಡಿಯುವ ನೀರಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದರು. ಅಂತೂ ಎಪ್ರಿಲ್ 14ರಂದು ಜರುಗಿದ ಕಂದಾವರ ಗ್ರಾಮ ಪಂಚಾಯತ್ ಸಭೆಯಲ್ಲಿ ದಲಿತರ ಕೇರಿಗೆ ನೀರೊದಗಿಸುವ ನಿರ್ಣಯ ಕೈಗಳ್ಳಲಾಗಿತ್ತು. ಆದರೆ ದಲಿತರೆ ಕೊಳವೆ ಮಾರ್ಗ ನಿರ್ಮಿಸಿಕೊಂಡರಷ್ಟೇ ನೀರು ಪೂರೈಸುವ ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ದಲಿತರಾದ ಸುರೇಶ್ ಎಂಬುವವರು ಪೈಪ್ ಲೈನ್ ತಾವೇ ಹಾಕಿಸಿಕೊಂಡು ಪಂಚಾಯತದ ಆಡಳಿತಗಾರರಿಗೆ ನೀರು ಒದಗಿಸಲು ಮನವಿ ಮಾಡಿದ್ದಾರೆ. ಆದರೆ ಆರೋಪಿ ಸದಸ್ಯರು ನೀರು ಕೊಡಲು ಒಪ್ಪದೆ ದಲಿತರಿಗೆ ಅವಾಚ್ಯವಾಗಿ ಬೈಯುತ್ತ ಜಾತಿ ನಿಂದನೆ ಮಾಡಿದ್ದಾರೆಂದು ದಲಿತ ಮುಂದಾಳುಗಳು ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಲಿಖಿತ ಆದೇಶ ಮಾಡಿದರೂ ಸಹ ಗ್ರಾ.ಪಂ ಆಡಳಿತಗಾರರು ದಲಿತರೆಂಬ ಕಾರಣಕ್ಕೆ ನೀರು ಪೊರೈಕೆ ಮಂದಾಗಲಿಲ್ಲ ಎನ್ನಲಾಗಿದೆ.

ದಲಿತರು ಈಗ ಬೇರೆ ದಾರಿಯಿಲ್ಲದೆ ತಮಗೆ ನೀರು ಕೊಡಲು ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆಗೈದು ದೌರ್ಜನ್ಯವೆಸಗಿದ ಪಂಚಾಯತ್‌ನ ಮೂರು ಸದಸ್ಯರ ಮೇಲೆ ಕೇಸು ದಾಖಲಿಸಿದ್ದಾರೆ.

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂಬುದನ್ನು ಪತ್ರಿಕೆ ಮತ್ತೊಮ್ಮೆ ನೆನಪಿಸುತ್ತಿದೆ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...