Homeಚಳವಳಿಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ - ಕುಡಿಯುವ ನೀರಿಗೂ ಅಡ್ಡಿ

ಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ – ಕುಡಿಯುವ ನೀರಿಗೂ ಅಡ್ಡಿ

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ..

- Advertisement -
- Advertisement -

ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಕರಾವಳಿಯ ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಡಿ-ಮೈಲಿಗೆ, ಮೂಢ ನಂಬಿಕೆ, ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ದತಿಗಳು ಇಂದಿಗೂ ಒಳಗೊಳಗೆ ನಡೆಯುತ್ತಿವೆ. ಅಜಲು ಪದ್ದತಿಯಂತ ಅಮಾನುಷ ಸಂಪ್ರದಾಯ ಆಚರಿಸುವಂತೆ ದಲಿತರಿಗೆ ಮೇಲು ವರ್ಗದವರು ಬಲವಂತ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕಂದಾವರ ಗ್ರಾಮದಲ್ಲಿ ಮೊನ್ನೆ ಸವರ್ಣೀಯರು 28 ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ! ಅಷ್ಟೇ ಅಲ್ಲ, ಆ ದಲಿತರ ಕೇರಿಗೆ ಗ್ರಾಮ ಪಂಚಾಯತಿಯಿಂದ ಕುಡಿಯುವ ನೀರು ಸರಬರಾಜು ಆಗದಂತೆ ನೋಡಿಕೊಳ್ಳಲಾಗಿದೆ. ಇದರ ಹಿಂದೆ ರಾಜಕೀಯ, ಜಾತಿ ಅಹಂಕಾರ ಕೆಲಸ ಮಾಡಿದೆ ಮಾತ್ರವಲ್ಲ ಸಂವಿಧಾನದ, ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಂದಾವರ ಗ್ರಾಮ ಪಂಚಾಯತ್‌ನ ಇಬ್ಬರು ಮಹಿಳಾ ಸದಸ್ಯೆಯರು ಮತ್ತು ಒಬ್ಬ ಪರುಷ ಸದಸ್ಯ ದಲಿತರಿಗೆ ಜಾತಿನಿಂದನೆ ಮಾಡಿ ಕಿರುಕುಳ ಕೊಟ್ಟ ಕುರಿತು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಪಂ ಸದಸ್ಯ ರಾಮಚಂದ್ರ ಶೆರೇಗಾರ್, ಅನುಪಮಾ ಶೆಟ್ಟಿ ಮತ್ತು ಜಯಶ್ರೀ ಶೆಟ್ಟಿ ದಲಿತರಿಗೆ ಗ್ರಾಮ ಪಂಚಾಯತ್‌ನಿಂದ ನೀರು ಸಿಗದಂತೆ ಮಾಡಿ ನೀರಿಗಾಗಿ ಪ್ರಯತ್ನಿಸಿದ ದಲಿತರ ಮೇಲೆಡ ದೌರ್ಜನ್ಯ ನಡೆಸಿದ್ದಾರೆಂದು ದೂರಲಾಗಿದೆ. ಈ ಜಾತಿ ಬಲದ ಸದಸ್ಯರ ಚಿತಾವಣೆಯಿಂದ ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೂ ಒಳಗಾಗಿವೆ. ಈ ಪಂಚಾಯತ್ ಸದಸ್ಯರ ಮೇಲೀಗ ದಲಿತ ದೌರ್ಜನ್ಯದ ಕೇಸು ಹಾಕಲಾಗಿದೆ.

ಸುಮಾರು 28 ದಲಿತ ಕುಟುಂಬಗಳು ಕಂದಾವರದ ಸರಕಾರಿ ಭೂಮಿ ಸರ್ವೆ ನಂಬರ್ 152/ಪಿ1ರಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಗುಡಿಸಲು ಕಟ್ಟಿಕೊಂಡು ಉಳಿದಿದ್ದ ದಲಿತರು, ಸದರಿ ಜಾಗ ತಮಗೆ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಕೇಳಿಕೊಳ್ಳುತ್ತ ಬಂದಿದ್ದರು. ಮೂರು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಮೇರಿ ಪ್ರಿಯಾಂಕಾ ಎಂಟು ಎಕರೆ ಜಾಗ ದಲಿತ ಕುಟುಂಬಗಳಿಗೆ ಮಂಜೂರು ಮಾಡಿದ್ದರು. ತಮ್ಮ ಬೇಡಿಕೆ ಈಡೇರಿಸಿದ ಡಿಸಿ ಮೇರಿ ಪ್ರಿಯಾಂಕ ಅವರ ಹೆಸರನ್ನೇ ತಮ್ಮ ಕೇರಿಗೆ ಇಡಲು ದಲಿತರು ಯೋಚಿಸಿದ್ದರು. ಆದರೆ ದಲಿತರ ಆ ಕೇರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮೂರು ವರ್ಷದಿಂದಲೂ ಇರಲಿಲ್ಲ. ಗ್ರಾಮ ಪಂಚಾಯತಿಗೆ ಪದೇ ಪದೇ ನೀರು ಸರಬರಾಜು ವ್ಯವಸ್ಥೆ ಮಾಡುವಂತೆ ವಿನಂತಿಸಿಕೊಂಡರೂ ಆಡಳಿತಗಾರರು ದಲಿತರ ಸಮಸ್ಯೆ ಪರಿಹಾರಕ್ಕೆ ಮನಸ್ಸು ಮಾಡಲಿಲ್ಲ.

ದಲಿತರು ಕುಡಿಯುವ ನೀರಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದರು. ಅಂತೂ ಎಪ್ರಿಲ್ 14ರಂದು ಜರುಗಿದ ಕಂದಾವರ ಗ್ರಾಮ ಪಂಚಾಯತ್ ಸಭೆಯಲ್ಲಿ ದಲಿತರ ಕೇರಿಗೆ ನೀರೊದಗಿಸುವ ನಿರ್ಣಯ ಕೈಗಳ್ಳಲಾಗಿತ್ತು. ಆದರೆ ದಲಿತರೆ ಕೊಳವೆ ಮಾರ್ಗ ನಿರ್ಮಿಸಿಕೊಂಡರಷ್ಟೇ ನೀರು ಪೂರೈಸುವ ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ದಲಿತರಾದ ಸುರೇಶ್ ಎಂಬುವವರು ಪೈಪ್ ಲೈನ್ ತಾವೇ ಹಾಕಿಸಿಕೊಂಡು ಪಂಚಾಯತದ ಆಡಳಿತಗಾರರಿಗೆ ನೀರು ಒದಗಿಸಲು ಮನವಿ ಮಾಡಿದ್ದಾರೆ. ಆದರೆ ಆರೋಪಿ ಸದಸ್ಯರು ನೀರು ಕೊಡಲು ಒಪ್ಪದೆ ದಲಿತರಿಗೆ ಅವಾಚ್ಯವಾಗಿ ಬೈಯುತ್ತ ಜಾತಿ ನಿಂದನೆ ಮಾಡಿದ್ದಾರೆಂದು ದಲಿತ ಮುಂದಾಳುಗಳು ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಲಿಖಿತ ಆದೇಶ ಮಾಡಿದರೂ ಸಹ ಗ್ರಾ.ಪಂ ಆಡಳಿತಗಾರರು ದಲಿತರೆಂಬ ಕಾರಣಕ್ಕೆ ನೀರು ಪೊರೈಕೆ ಮಂದಾಗಲಿಲ್ಲ ಎನ್ನಲಾಗಿದೆ.

ದಲಿತರು ಈಗ ಬೇರೆ ದಾರಿಯಿಲ್ಲದೆ ತಮಗೆ ನೀರು ಕೊಡಲು ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆಗೈದು ದೌರ್ಜನ್ಯವೆಸಗಿದ ಪಂಚಾಯತ್‌ನ ಮೂರು ಸದಸ್ಯರ ಮೇಲೆ ಕೇಸು ದಾಖಲಿಸಿದ್ದಾರೆ.

ನಮ್ಮ ಸಂವಿಧಾನವು ಅಸ್ಪೃಶ್ಯತೆ ಆಚರಣೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆರ್ಟಿಕಲ್ 17ರ ಪ್ರಕಾರ ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂಬುದನ್ನು ಪತ್ರಿಕೆ ಮತ್ತೊಮ್ಮೆ ನೆನಪಿಸುತ್ತಿದೆ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...