Homeಸಿನಿಮಾಕ್ರೀಡೆಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

- Advertisement -
- Advertisement -

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಈ ಮೂಲಕ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ನಲ್ಲಿ ಪದಕ ಗೆದ್ದ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ದಾಖಲೆ ಸೃಷ್ಟಿಸಿದ್ದಾರೆ.

ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್‌ನಲ್ಲಿ ಚೀನಾದ ವಿಶ್ವ ನಂ.1 ಯಿಂಗ್ ಜ್ಸಾವು ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು. ಈ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಭವಿನಾ ಪಟೇಲ್ ಅವರು ಶನಿವಾರ ಟೋಕಿಯೊದಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಈವೆಂಟ್‌ನಲ್ಲಿ, ವಿಶ್ವದ 3 ನೇ ಶ್ರೇಯಾಂಕಿತ ಚೀನಾದ ಜಾಂಗ್ ಮಿಯಾವೊ ವಿರುದ್ಧ ಗೆಲುವು ಸಾಧಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಅಂಕಣಕಾರ, ಲೇಖಕ ಸುರೇಶ್ ಕಂಜರ್ಪಣೆ ಭವಿನಾ ಪಟೇಲ್‌ ಮತ್ತು ದೇಶದಲ್ಲಿ ನಡೆದ ಪಲ್ಸ್‌ ಪೋಲಿಯೋ ಅಭಿಯಾನದ ಕುರಿತು ವಿವರವಾಗಿ ಬರೆದಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

“ಈಕೆ ಭವಿನಾ ಪಟೇಲ್ …‌ ಪ್ಯಾರಾ ಒಲಿಂಪಿಕ್ಸನ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಫೈನಲ್‌ ತಲುಪಿದ ಮೊದಲ ಭಾರತೀಯ. ಈಕೆ ಹುಟ್ಟಿದ್ದು 1986ರಲ್ಲಿ. ಈಕೆ ಹುಟ್ಟಿದಾಗ ಅಂಗ ವೈಕಲ್ಯ ಇರಲಿಲ್ಲ. ಒಂದು ವರ್ಷದ ಹಸುಳೆಯಾಗಿದ್ದಾಗ ಈಕೆಗೆ ಪೋಲಿಯೋ ತಗುಲಿತು. ಭಾರತದಲ್ಲಿ ಲಕ್ಷಾಂತರ ಮಕ್ಕಳು ಪೋಲಿಯೋ ದವಡೆಗೆ ಸಿಲುಕುತ್ತಿದ್ದ ಕಾಲವಿತ್ತು. ಮೇಲುಕೋಟೆಯ ದಿ. ಸುರೇಂದ್ರ ಕೌಲಗಿಯವರು ಆರಂಭಿಸಿದ್ದ ಕರುಣಾ ಗೃಹದಲ್ಲಿ ಬಹುತೇಕ ಪೋಲಿಯೋ ಬಾಧಿತ ಮಕ್ಕಳೇ ಇದ್ದರು. ಅವರ ಆಶ್ರಯದಲ್ಲಿ ಕಲಿತು ಆತ್ಮವಿಶ್ವಾಸದಲ್ಲಿ ಜೀವನ ನಡೆಸುತ್ತಿರುವ ನೂರಾರು ಮಕ್ಕಳನ್ನು ನಾನು ನೋಡಿದ್ದೇನೆ (ಮಕ್ಕಳೇನು ಬಂತು, ಈಗ ಅವರೆಲ್ಲಾ ಮಧ್ಯವಯಸ್ಕರು)”.

’ಭಾರತ ಸರಕಾರ ಪಲ್ಸ್‌ ಪೋಲಿಯೋ ಲಸಿಕಾ ನೀಡಿಕೆ ಕಾರ್ಯಕ್ರಮವನ್ನು ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪರಮ ಬದ್ಧತೆಯೊಂದಿಗೆ ಆರಂಭಿಸಿದ್ದರ ಪರಿಣಾಮವಾಗಿ 2014 ರಲ್ಲಿ ಭಾರತವನ್ನು ಪೋಲಿಯೋ ಮುಕ್ತ ದೇಶವೆಂದು ಘೋಷಿಸಲಾಯಿತು. ಅಂದರೆ 2009ರಿಂದ ದೇಶದಲ್ಲಿ ಒಂದೇ ಒಂದು ಪೋಲಿಯೋ ಪ್ರಕರಣ ವರದಿಯಾಗಲಿಲ್ಲ. ಈಗ ಪ್ರತಿಯೊಂದು ಮಗುವೂ ಕುಣಿದಾಡಿ ಓಡಾಡುವುದು ನೋಡುವಾಗ ಒಂದು ಧನ್ಯತಾ ಭಾವ ಆವರಿಸುತ್ತದೆ. ಸರಕಾರವೊಂದು ಬದ್ಧತೆಯಲ್ಲಿ, ಪ್ರಚಾರದ ಗೀಳಿಲ್ಲದೇ ಮಾಡಿದ ಕೆಲಸ ಇದು. ಅಮಿತಾಭ್‌ ಬಚ್ಚನ್‌ ಅವರ ಎರಡು ಹನಿ, ಜೀವ ಉಳಿಸಲು ಎಂಬ ಘೋಷ ವಾಕ್ಯದ ಜಾಹೀರಾತು ನೆನಪಿಸಿಕೊಳ್ಳಿ!’.

’ಆರೋಗ್ಯ ಕಾರ್ಯಕರ್ತರು ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಸಂತೆ, ಬಸ್‌ ಸ್ಟಾಂಡ್‌ ಹೀಗೆ ಎಲ್ಲೂ ಬಿಡದೇ ಅಲ್ಲಿ ಕಂಡ ಮಕ್ಕಳಿಗೆ ಎರಡು ಬಿಂದು ಬಾಯಿಗೆ ಲಸಿಕೆ ಹಾಕುವ ಶ್ರದ್ಧೆ ಈಗಲೂ ಕಣ್ಣಿಗೆ ಕಂಡಂತಿದೆ.
ಆಗಿನ ಸರಕಾರದವರು ಫೋಟೋ ಹಾಕಿಸಿಕೊಳ್ಳಲಿಲ್ಲ. ಅದು ಜನರದ್ದೇ ಕಾರ್ಯಕ್ರಮ ಎಂಬಂತೆ ಅನುಷ್ಠಾನಗೊಳಿಸಿದರು’.

’ಈ ಭವಿನಾ ಪಟೇಲ್ ಎಂಬ ಭರಪೂರ ಸ್ಥೈರ್ಯದ ಹೆಣ್ಣು ಮಗಳ ಸಾಧನೆ ಕಂಡಾಗ, ಇದು ನೆನಪಾಯಿತು. ನಮ್ಮಲ್ಲಿ ಜಗತ್ತಿನಲ್ಲೇ ಅತ್ಯಧಿಕ ಸಂಖ್ಯೆಯ ರಕ್ತಹೀನತೆ, ಕುಪೋಶಣೆಯಲ್ಲಿ ಬಳಲುತ್ತಿರುವ ಮಕ್ಕಳು, ಹೆಣ್ಣು ಮಕ್ಕಳಿದ್ದಾರೆ. ವಿದ್ಯಾಭ್ಯಾಸದಲ್ಲಿ ಹೈಸ್ಕೂಲು ತಲುಪುವ ಮೊದಲೇ ಡ್ರಾಪ್‌ ಔಟ್‌ ಆಗುವ ಕೋಟ್ಯಂತರ ಮಕ್ಕಳಿದ್ದಾರೆ. ( ಇವರಲ್ಲಿ ಹಿಂದೂಗಳೇ ಹೆಚ್ಚು!!). ನಮ್ಮ ಈಗಿನ ಸರಕಾರಕ್ಕೆ ಇದೆಲ್ಲಾ ಮನಸ್ಸಿನೊಳಗೆ ಇಳಿದಿದ್ದರೆ ಈ ಆರೋಗ್ಯ, ಪೋಷಣೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿತ್ತು. ಮಕ್ಕಳು ನೀರಿಲ್ಲದ ಗಿಡದ ಎಲೆಗಳಂತೆ ಒಣಗಿ ಬೀಳುವ ಪರಿ ತಟ್ಟಬೇಕಿತ್ತು. ಇರಲಿ… ಈ ಭವಿನಾ ಬೆಳ್ಳಿ ಗೆದ್ದಿದ್ದಾಳೆ. ಈಕೆಯ ಆತ್ಮವಿಶ್ವಾಸ ಈ ದೇಶದ ಅವಕಾಶ ವಂಚಿತರಲ್ಲಿ ಕನಸು ಚಿಗುರೊಡೆಯುವಂತೆ ಮಾಡಲಿ” ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...