Homeಕರ್ನಾಟಕವಿಜಯಪುರ: ಅತ್ಯಾಚಾರ ಪ್ರಕರಣದ ಆರೋಪಿ ಶೌಚಾಲಯದಲ್ಲಿ ನೇಣಿಗೆ ಶರಣು

ವಿಜಯಪುರ: ಅತ್ಯಾಚಾರ ಪ್ರಕರಣದ ಆರೋಪಿ ಶೌಚಾಲಯದಲ್ಲಿ ನೇಣಿಗೆ ಶರಣು

- Advertisement -
- Advertisement -

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಅಪ್ತಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ಬಂಧಿಸಲಾಗಿದ್ದ ಯುವಕ ಭಾನುವಾರ ಸಿಂದಗಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

13 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಶನಿವಾರ ತಡರಾತ್ರಿ ಬಂಧಿಸಲಾಗಿತ್ತು. ವಿಚಾರಣೆ ವೇಳೆ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಶೌಚಾಲಯಕ್ಕೆ ತೆರಳಿದ್ದ ವ್ಯಕ್ತಿ ಧರಿಸಿದ್ದ ಪ್ಯಾಂಟ್‌ನಿಂದ ನೇಣು ಹಾಕಿಕೊಂಡಿದ್ದಾರೆ.

ಪೊಲೀಸರ ನಿರ್ಲಕ್ಷ್ಯದಿಂದ ಆತ ಸಾವನ್ನಪ್ಪಿದ್ದಾರೆ ಎಂದು ಆರೋಪಿಯ ಪೋಷಕರು, ಸಂಬಂಧಿಕರು ಪೊಲೀಸ್ ಠಾಣೆಯ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಠಾಣೆಗೆ ಮುತ್ತಿಗ ಹಾಕಿ ಪ್ರತಿಭಟನೆ ನಡೆಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಕೆಯ ತಂದೆ ದೂರು ಸಲ್ಲಿಸಿದ್ದರು. ಇದರ ಅನ್ವಯ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿತ್ತು. ತಡ ರಾತ್ರಿ ಬಂಧಿತನಾಗಿದ್ದ ಆರೋಪಿ ದೇವಿಂದ ಸಂಗೋಗಿ ಬೆಳಗ್ಗೆ ಅಷ್ಟರಲ್ಲಿ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ.

ಇತ್ತ ಆಗಸ್ಟ್ 24 ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳನ್ನು ಶನಿವಾರ ಮುಂಜಾನೆ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.

ಆರೋಪಿಗಳ ಮೊಬೈಲ್ ಟವರ್ ಮತ್ತು ಕುಡಿದು ಬಿಸಾಡಿದ್ದ ಮದ್ಯ ಬಾಟಲಿಗಳ ಬಾರ್‌ಕೋಡ್ ಟ್ರ್ಯಾಕ್ ಆಧಾರದಲ್ಲಿ ಬಾರ್ ಒಂದರ ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅವರಲ್ಲಿ ನಾಲ್ವರು ತಮಿಳುನಾಡು ಮೂಲದ ಕಾರ್ಮಿಕರು ಎನ್ನಲಾಗಿದೆ.


ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...