Homeಕರ್ನಾಟಕಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ...

ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ಮೊಹರಂ ಹಬ್ಬದಂದು ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಕಳೆದ ವಾರ ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದು ದಲಿತಪರ ಹೋರಾಟಗಾರ ಕರಿಯಪ್ಪ ಗುಡಿಮನಿ ಎಚ್ಚರಿಕೆ ನೀಡಿದ್ದಾರೆ.

ಸಿಂಗನಾಳ ಗ್ರಾಮದಲ್ಲಿ ಕಳೆದ ವಾರ ಮೊಹರಂ ಹಬ್ಬದ ದಿನವಾದ ಶುಕ್ರವಾರಂದು ಗೆಜ್ಜೆ ಕುಣಿತದ ಸಮಯದಲ್ಲಿ ಮೈಕೈ ಸ್ಪರ್ಶಿಸಿದ್ದಕ್ಕೆ ಜಗಳಗಳು ಪ್ರಾರಂಭವಾಗಿದೆ. ಇದುವೆ ದೊಡ್ಡದಾಗಿ ಶನಿವಾರ ಕೂಡಾ ಮಾದಿಗರ ಮೇಲೆ ಆಕ್ರಮಣ ನಡೆದಿದೆ. ಶುಕ್ರವಾರ ರಾತ್ರಿ 7 ಗಂಟೆಗೆ ಮಾದಿಗ ಸಮುದಾಯದವರು ಪೋಲಿಸರಿಗೆ ದೂರವಾಣಿ ಮೂಲಕ ಘಟನೆ ಬಗ್ಗೆ ತಿಳಿಸಿದ್ದರು.

ಪೊಲೀಸರಿಗೆ ದೂರು ನೀಡಿದಕ್ಕಾಗಿ ಕುರುಬ ಮತ್ತು ನಾಯಕ ಸಮುದಾಯದವರು ಮತ್ತೆ ಶನಿವಾರದಂದು ಮುಂಜಾನೆ ಗುಂಪು ಕಟ್ಟಿಕೊಂಡು ಮಾದಿಗ ಸಮುದಾಯದ ಮೇಲೆ ಆಕ್ರಮಣ ನಡೆಸಿದ್ದಾರೆ ಎನ್ನಲಾಗಿತ್ತು. ಆಕ್ರಮಣದಿಂದಾಗಿ ನಾಲ್ಕು ಯುವಕರಿಗೆ ಗಂಭೀರ ಗಾಯಗಾಳಾಗಿದ್ದು ಅವರು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯ ಪಿಎಸ್‌ಐ ದೊಡ್ಡಯ್ಯ ಮಾತನಾಡಿ, “ಘಟನೆಯಲ್ಲಿ ಒಂದು ಕಡೆಯಿಂದ 20 ಮತ್ತು ಇನ್ನೊಂದು ಕಡೆಯಿಂದ 21 ಜನರ ಮೇಲೆ ಪ್ರಕರಣ ದಾಖಲಾಗಿದೆ” ಎಂದು ಹೇಳಿದ್ದರು.

ಈ ಬಗ್ಗೆ ವಿಚಾರಣೆ ನಡೆಸಲು ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತವೇ ಸಿಂಗನಾಳ ಗ್ರಾಮಕ್ಕೆ ಭೇಟಿ ನೀಡಿತ್ತು. ಎರಡು ಸಮುದಾಯದ ಜನರ ನಡುವೆ ಶಾಮತಿಸಭೆ ನಡೆಸಲು ಪ್ರಯತ್ನಿಸಿತ್ತು. ಇಲ್ಲಿಯೂ ಮಾತಿನ ಚಕಮಕಿ ನಡೆದಿದೆ.

PC:gbnewskannada

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಹೋರಾಟಗಾರ ಕರಿಯಪ್ಪ ಗುಡಿಮನಿ, “ಹಲ್ಲೆಯಲ್ಲಿ ಗಾಯಗಳಾಗಿರುವುದು 8 ರಿಂದ 10 ಜನರಿಗೆ. ಆದರೆ, ಎಫ್‌ಐಆರ್‌ನಲ್ಲಿ ಸೇರಿಸಿರುವುದು ಮಾತ್ರ ಒಬ್ಬರ ಹೆಸರು ಮಾತ್ರ. ಹೀಗಾದರೆ ಅವರಿಗೆ ಪರಿಹಾರ ಹೇಗೆ ಸಿಗುತ್ತೆ…? ಅದಕ್ಕೆ ಹೆಸರು ಸೇರಿಸಲು ಒತ್ತಾಯಿಸಿದ್ದೇವೆ. ಈ ಜನರಿಗೆ ನ್ಯಾಯ ಸಿಗುವವರೆಗೆ ನಾವು ಹೋರಾಟ ಮಾಡುತ್ತೇವೆ ಅಂತ ಜಿಲ್ಲಾಧಿಕಾರಿಗೆ ಹೇಳಿದ್ದೇವೆ. ಜಿಲ್ಲಾಧಿಕಾರಿಗಳು ಗಾಯಾಳುಗಳ ಜೊತೆ ಮಾತಾಡಿಲ್ಲ. ಶಾಂತಿ ಸಭೆ ನಡೆಸುತ್ತೇವೆ ಎಂದು ಎಲ್ಲರೂ ಬಂದಿದ್ದರು. ನಾವು ಈ ಘಟನೆ ಬಗ್ಗೆ ಫ್ಯಾಕ್ಟ್ ಫೈಂಡಿಗೆ ಮಾಡುತ್ತೇವೆ” ಎಂದಿದ್ದಾರೆ.

ಮುಂದುವರೆದು… “ಕೊಪ್ಪಳ ಜಿಲ್ಲೆಯ ಅಸ್ಪೃಶ್ಯತೆ, ಜಾತಿ ವ್ಯವಸ್ಥೆಯಿಂದ ಅಮಾಯಕರ ಮೇಲೆ ಪದೇ ಪದೆ ಹಳ್ಳಿಗಳಲ್ಲಿ ಹಲ್ಲೆಗಳಾಗುತ್ತಿರುವ ಬಗ್ಗೆ ಜನ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ದಲಿತ ದಮನಿರ ಒಕ್ಕೂಟದ ಜೊತೆಗೆ ಹೋರಾಟ ನಡೆಸುತ್ತೇವೆ. ಸಿಂಗನಾಳ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ” ಎಂದು ಕರಿಯಪ್ಪ ಗುಡಿಮನಿ ಹೇಳಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಜಗಳದಲ್ಲಿ ಬಾಗಿಯಾದವರು ಎಲ್ಲರೂ ವಿದ್ಯಾವಂತರೇ.. ಉನ್ನತಸ್ಥಾನದಲ್ಲಿ ಇರುವವರೇ. ತಪ್ಪು ಮಾಡಿದಾಗ ಊರಿನ ಯುವಕರಿಗೆ ಬುದ್ದಿ ಹೇಳಬೇಕಾದವರೇ, ಊರಿನ ಹಿರಿಯರೇ ಈ ರೀತಿ ನಡೆದುಕೊಂಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...