Homeಕರ್ನಾಟಕಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ...

ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ಮೊಹರಂ ಹಬ್ಬದಂದು ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಕಳೆದ ವಾರ ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದು ದಲಿತಪರ ಹೋರಾಟಗಾರ ಕರಿಯಪ್ಪ ಗುಡಿಮನಿ ಎಚ್ಚರಿಕೆ ನೀಡಿದ್ದಾರೆ.

ಸಿಂಗನಾಳ ಗ್ರಾಮದಲ್ಲಿ ಕಳೆದ ವಾರ ಮೊಹರಂ ಹಬ್ಬದ ದಿನವಾದ ಶುಕ್ರವಾರಂದು ಗೆಜ್ಜೆ ಕುಣಿತದ ಸಮಯದಲ್ಲಿ ಮೈಕೈ ಸ್ಪರ್ಶಿಸಿದ್ದಕ್ಕೆ ಜಗಳಗಳು ಪ್ರಾರಂಭವಾಗಿದೆ. ಇದುವೆ ದೊಡ್ಡದಾಗಿ ಶನಿವಾರ ಕೂಡಾ ಮಾದಿಗರ ಮೇಲೆ ಆಕ್ರಮಣ ನಡೆದಿದೆ. ಶುಕ್ರವಾರ ರಾತ್ರಿ 7 ಗಂಟೆಗೆ ಮಾದಿಗ ಸಮುದಾಯದವರು ಪೋಲಿಸರಿಗೆ ದೂರವಾಣಿ ಮೂಲಕ ಘಟನೆ ಬಗ್ಗೆ ತಿಳಿಸಿದ್ದರು.

ಪೊಲೀಸರಿಗೆ ದೂರು ನೀಡಿದಕ್ಕಾಗಿ ಕುರುಬ ಮತ್ತು ನಾಯಕ ಸಮುದಾಯದವರು ಮತ್ತೆ ಶನಿವಾರದಂದು ಮುಂಜಾನೆ ಗುಂಪು ಕಟ್ಟಿಕೊಂಡು ಮಾದಿಗ ಸಮುದಾಯದ ಮೇಲೆ ಆಕ್ರಮಣ ನಡೆಸಿದ್ದಾರೆ ಎನ್ನಲಾಗಿತ್ತು. ಆಕ್ರಮಣದಿಂದಾಗಿ ನಾಲ್ಕು ಯುವಕರಿಗೆ ಗಂಭೀರ ಗಾಯಗಾಳಾಗಿದ್ದು ಅವರು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯ ಪಿಎಸ್‌ಐ ದೊಡ್ಡಯ್ಯ ಮಾತನಾಡಿ, “ಘಟನೆಯಲ್ಲಿ ಒಂದು ಕಡೆಯಿಂದ 20 ಮತ್ತು ಇನ್ನೊಂದು ಕಡೆಯಿಂದ 21 ಜನರ ಮೇಲೆ ಪ್ರಕರಣ ದಾಖಲಾಗಿದೆ” ಎಂದು ಹೇಳಿದ್ದರು.

ಈ ಬಗ್ಗೆ ವಿಚಾರಣೆ ನಡೆಸಲು ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತವೇ ಸಿಂಗನಾಳ ಗ್ರಾಮಕ್ಕೆ ಭೇಟಿ ನೀಡಿತ್ತು. ಎರಡು ಸಮುದಾಯದ ಜನರ ನಡುವೆ ಶಾಮತಿಸಭೆ ನಡೆಸಲು ಪ್ರಯತ್ನಿಸಿತ್ತು. ಇಲ್ಲಿಯೂ ಮಾತಿನ ಚಕಮಕಿ ನಡೆದಿದೆ.

PC:gbnewskannada

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಹೋರಾಟಗಾರ ಕರಿಯಪ್ಪ ಗುಡಿಮನಿ, “ಹಲ್ಲೆಯಲ್ಲಿ ಗಾಯಗಳಾಗಿರುವುದು 8 ರಿಂದ 10 ಜನರಿಗೆ. ಆದರೆ, ಎಫ್‌ಐಆರ್‌ನಲ್ಲಿ ಸೇರಿಸಿರುವುದು ಮಾತ್ರ ಒಬ್ಬರ ಹೆಸರು ಮಾತ್ರ. ಹೀಗಾದರೆ ಅವರಿಗೆ ಪರಿಹಾರ ಹೇಗೆ ಸಿಗುತ್ತೆ…? ಅದಕ್ಕೆ ಹೆಸರು ಸೇರಿಸಲು ಒತ್ತಾಯಿಸಿದ್ದೇವೆ. ಈ ಜನರಿಗೆ ನ್ಯಾಯ ಸಿಗುವವರೆಗೆ ನಾವು ಹೋರಾಟ ಮಾಡುತ್ತೇವೆ ಅಂತ ಜಿಲ್ಲಾಧಿಕಾರಿಗೆ ಹೇಳಿದ್ದೇವೆ. ಜಿಲ್ಲಾಧಿಕಾರಿಗಳು ಗಾಯಾಳುಗಳ ಜೊತೆ ಮಾತಾಡಿಲ್ಲ. ಶಾಂತಿ ಸಭೆ ನಡೆಸುತ್ತೇವೆ ಎಂದು ಎಲ್ಲರೂ ಬಂದಿದ್ದರು. ನಾವು ಈ ಘಟನೆ ಬಗ್ಗೆ ಫ್ಯಾಕ್ಟ್ ಫೈಂಡಿಗೆ ಮಾಡುತ್ತೇವೆ” ಎಂದಿದ್ದಾರೆ.

ಮುಂದುವರೆದು… “ಕೊಪ್ಪಳ ಜಿಲ್ಲೆಯ ಅಸ್ಪೃಶ್ಯತೆ, ಜಾತಿ ವ್ಯವಸ್ಥೆಯಿಂದ ಅಮಾಯಕರ ಮೇಲೆ ಪದೇ ಪದೆ ಹಳ್ಳಿಗಳಲ್ಲಿ ಹಲ್ಲೆಗಳಾಗುತ್ತಿರುವ ಬಗ್ಗೆ ಜನ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ದಲಿತ ದಮನಿರ ಒಕ್ಕೂಟದ ಜೊತೆಗೆ ಹೋರಾಟ ನಡೆಸುತ್ತೇವೆ. ಸಿಂಗನಾಳ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ” ಎಂದು ಕರಿಯಪ್ಪ ಗುಡಿಮನಿ ಹೇಳಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಜಗಳದಲ್ಲಿ ಬಾಗಿಯಾದವರು ಎಲ್ಲರೂ ವಿದ್ಯಾವಂತರೇ.. ಉನ್ನತಸ್ಥಾನದಲ್ಲಿ ಇರುವವರೇ. ತಪ್ಪು ಮಾಡಿದಾಗ ಊರಿನ ಯುವಕರಿಗೆ ಬುದ್ದಿ ಹೇಳಬೇಕಾದವರೇ, ಊರಿನ ಹಿರಿಯರೇ ಈ ರೀತಿ ನಡೆದುಕೊಂಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...