Homeಕರ್ನಾಟಕಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ...

ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ಮೊಹರಂ ಹಬ್ಬದಂದು ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಕಳೆದ ವಾರ ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದು ದಲಿತಪರ ಹೋರಾಟಗಾರ ಕರಿಯಪ್ಪ ಗುಡಿಮನಿ ಎಚ್ಚರಿಕೆ ನೀಡಿದ್ದಾರೆ.

ಸಿಂಗನಾಳ ಗ್ರಾಮದಲ್ಲಿ ಕಳೆದ ವಾರ ಮೊಹರಂ ಹಬ್ಬದ ದಿನವಾದ ಶುಕ್ರವಾರಂದು ಗೆಜ್ಜೆ ಕುಣಿತದ ಸಮಯದಲ್ಲಿ ಮೈಕೈ ಸ್ಪರ್ಶಿಸಿದ್ದಕ್ಕೆ ಜಗಳಗಳು ಪ್ರಾರಂಭವಾಗಿದೆ. ಇದುವೆ ದೊಡ್ಡದಾಗಿ ಶನಿವಾರ ಕೂಡಾ ಮಾದಿಗರ ಮೇಲೆ ಆಕ್ರಮಣ ನಡೆದಿದೆ. ಶುಕ್ರವಾರ ರಾತ್ರಿ 7 ಗಂಟೆಗೆ ಮಾದಿಗ ಸಮುದಾಯದವರು ಪೋಲಿಸರಿಗೆ ದೂರವಾಣಿ ಮೂಲಕ ಘಟನೆ ಬಗ್ಗೆ ತಿಳಿಸಿದ್ದರು.

ಪೊಲೀಸರಿಗೆ ದೂರು ನೀಡಿದಕ್ಕಾಗಿ ಕುರುಬ ಮತ್ತು ನಾಯಕ ಸಮುದಾಯದವರು ಮತ್ತೆ ಶನಿವಾರದಂದು ಮುಂಜಾನೆ ಗುಂಪು ಕಟ್ಟಿಕೊಂಡು ಮಾದಿಗ ಸಮುದಾಯದ ಮೇಲೆ ಆಕ್ರಮಣ ನಡೆಸಿದ್ದಾರೆ ಎನ್ನಲಾಗಿತ್ತು. ಆಕ್ರಮಣದಿಂದಾಗಿ ನಾಲ್ಕು ಯುವಕರಿಗೆ ಗಂಭೀರ ಗಾಯಗಾಳಾಗಿದ್ದು ಅವರು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯ ಪಿಎಸ್‌ಐ ದೊಡ್ಡಯ್ಯ ಮಾತನಾಡಿ, “ಘಟನೆಯಲ್ಲಿ ಒಂದು ಕಡೆಯಿಂದ 20 ಮತ್ತು ಇನ್ನೊಂದು ಕಡೆಯಿಂದ 21 ಜನರ ಮೇಲೆ ಪ್ರಕರಣ ದಾಖಲಾಗಿದೆ” ಎಂದು ಹೇಳಿದ್ದರು.

ಈ ಬಗ್ಗೆ ವಿಚಾರಣೆ ನಡೆಸಲು ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತವೇ ಸಿಂಗನಾಳ ಗ್ರಾಮಕ್ಕೆ ಭೇಟಿ ನೀಡಿತ್ತು. ಎರಡು ಸಮುದಾಯದ ಜನರ ನಡುವೆ ಶಾಮತಿಸಭೆ ನಡೆಸಲು ಪ್ರಯತ್ನಿಸಿತ್ತು. ಇಲ್ಲಿಯೂ ಮಾತಿನ ಚಕಮಕಿ ನಡೆದಿದೆ.

PC:gbnewskannada

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಹೋರಾಟಗಾರ ಕರಿಯಪ್ಪ ಗುಡಿಮನಿ, “ಹಲ್ಲೆಯಲ್ಲಿ ಗಾಯಗಳಾಗಿರುವುದು 8 ರಿಂದ 10 ಜನರಿಗೆ. ಆದರೆ, ಎಫ್‌ಐಆರ್‌ನಲ್ಲಿ ಸೇರಿಸಿರುವುದು ಮಾತ್ರ ಒಬ್ಬರ ಹೆಸರು ಮಾತ್ರ. ಹೀಗಾದರೆ ಅವರಿಗೆ ಪರಿಹಾರ ಹೇಗೆ ಸಿಗುತ್ತೆ…? ಅದಕ್ಕೆ ಹೆಸರು ಸೇರಿಸಲು ಒತ್ತಾಯಿಸಿದ್ದೇವೆ. ಈ ಜನರಿಗೆ ನ್ಯಾಯ ಸಿಗುವವರೆಗೆ ನಾವು ಹೋರಾಟ ಮಾಡುತ್ತೇವೆ ಅಂತ ಜಿಲ್ಲಾಧಿಕಾರಿಗೆ ಹೇಳಿದ್ದೇವೆ. ಜಿಲ್ಲಾಧಿಕಾರಿಗಳು ಗಾಯಾಳುಗಳ ಜೊತೆ ಮಾತಾಡಿಲ್ಲ. ಶಾಂತಿ ಸಭೆ ನಡೆಸುತ್ತೇವೆ ಎಂದು ಎಲ್ಲರೂ ಬಂದಿದ್ದರು. ನಾವು ಈ ಘಟನೆ ಬಗ್ಗೆ ಫ್ಯಾಕ್ಟ್ ಫೈಂಡಿಗೆ ಮಾಡುತ್ತೇವೆ” ಎಂದಿದ್ದಾರೆ.

ಮುಂದುವರೆದು… “ಕೊಪ್ಪಳ ಜಿಲ್ಲೆಯ ಅಸ್ಪೃಶ್ಯತೆ, ಜಾತಿ ವ್ಯವಸ್ಥೆಯಿಂದ ಅಮಾಯಕರ ಮೇಲೆ ಪದೇ ಪದೆ ಹಳ್ಳಿಗಳಲ್ಲಿ ಹಲ್ಲೆಗಳಾಗುತ್ತಿರುವ ಬಗ್ಗೆ ಜನ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ದಲಿತ ದಮನಿರ ಒಕ್ಕೂಟದ ಜೊತೆಗೆ ಹೋರಾಟ ನಡೆಸುತ್ತೇವೆ. ಸಿಂಗನಾಳ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ” ಎಂದು ಕರಿಯಪ್ಪ ಗುಡಿಮನಿ ಹೇಳಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಜಗಳದಲ್ಲಿ ಬಾಗಿಯಾದವರು ಎಲ್ಲರೂ ವಿದ್ಯಾವಂತರೇ.. ಉನ್ನತಸ್ಥಾನದಲ್ಲಿ ಇರುವವರೇ. ತಪ್ಪು ಮಾಡಿದಾಗ ಊರಿನ ಯುವಕರಿಗೆ ಬುದ್ದಿ ಹೇಳಬೇಕಾದವರೇ, ಊರಿನ ಹಿರಿಯರೇ ಈ ರೀತಿ ನಡೆದುಕೊಂಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...