Homeಚಳವಳಿರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

ರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಮತ್ತೊಮ್ಮೆ ಬೆಂಬಲಿಸಿರುವ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್, ಕರ್ನಾಲ್‌ನಲ್ಲಿ ಹರಿಯಾಣ ಸರ್ಕಾರ ನಡೆಸಿರುವ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಮ್ಮೆ ಆಡಳಿತಾರೂ ಬಿಜೆಪಿಯನ್ನು ಟೀಕಿಸಿರುವ ಸತ್ಯಪಾಲ್ ಮಲಿಕ್, ರೈತರ ತಲೆ ಒಡೆಯಲು ಆದೇಶ ನೀಡಿದ ಅಧಿಕಾರಿಯನ್ನು ತಕ್ಷಣ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಶನಿವಾರ ಕರ್ನಾಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಇದರಲ್ಲಿ 10 ಜನರು ಗಾಯಗೊಂಡಿದ್ದರು ಎಂದು ವರದಿಯಾಗಿದೆ.

ಶನಿವಾರದಂದು ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆ ಬುರುಡೆ ಹೊಡೆಯಿರಿ ಎಂದು ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಅವರ ವಿಡಿಯೋ ವೈರಲ್ ಆದ ಬಳಿಕ ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರೈತರ ಮೇಲೆ ಪೊಲೀಸರ ಹಲ್ಲೆ: ಆಯುಷ್‌ ಸಿನ್ಹಾ ಸರ್ಕಾರಿ ತಾಲಿಬಾನ್‌ ಕಮಾಂಡರ್‌- ರಾಕೇಶ್ ಟಿಕಾಯತ್ ಕಿಡಿ

“ಮನೋಹರ್ ಲಾಲ್ ಖಟ್ಟರ್ ರೈತರ ಕ್ಷಮೆ ಕೇಳಬೇಕು … ಹರಿಯಾಣ ಮುಖ್ಯಮಂತ್ರಿ ರೈತರ ಮೇಲೆ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪೊಲೀಸರನ್ನು ಬಳಸಬೇಡಿ ಎಂದು ನಾನು ಉನ್ನತ ನಾಯಕತ್ವಕ್ಕೆ ಹೇಳಿದ್ದೇನೆ” ಎಂದು ಮಲಿಕ್ ಹೇಳಿದ್ದಾರೆ. ಜೊತೆಗೆ  ತನ್ನನ್ನು ತಾನು ರೈತರ ಮಗ ಎಂದು ಕರೆದುಕೊಂಡಿದ್ದಾರೆ.

“ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಯುಷ್ ಸಿನ್ಹಾ (ಎಸ್‌ಡಿಎಂ) ಅವರನ್ನು ತಕ್ಷಣವೇ ವಜಾ ಮಾಡಬೇಕು. ಅವರು ಎಸ್‌ಡಿಎಂ ಹುದ್ದೆಗೆ ಅರ್ಹರಲ್ಲ. ಆದರೆ, ಸರ್ಕಾರವು ಅವರನ್ನು ಬೆಂಬಲಿಸುತ್ತಿದೆ” ಎಂದು ಹೇಳಿದ್ದಾರೆ.

ಈ ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಸರ್ಕಾರವು ಯಾವುದೇ ಸಾಂತ್ವನವನ್ನು ನೀಡಿಲ್ಲ. ಇದರಿಂದ ನಾನು ತುಂಬಾ ನಿರಾಶೆಗೊಂಡಿದ್ದೇನೆ ಎಂದು ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳಲ್ಲಿ 600 ರೈತರು ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾರೂ ಸಮಾಧಾನದ ಮಾತನ್ನೂ ಹೇಳಲಿಲ್ಲ” ಎಂದಿದ್ದಾರೆ.

ತಮ್ಮ ಹೇಳಿಕೆ ವಿರುದ್ಧ ಸರ್ಕಾರ ಏನು ಪ್ರತಿಕ್ರಿಯೆ ನೀಡಿದರೂ ನಾನು ಹೆದರುವುದಿಲ್ಲ ಎಂದಿದ್ದಾರೆ. “ನಾನು ಈ ರಾಜ್ಯಪಾಲರ ಹುದ್ದೆಯನ್ನು ಪ್ರೀತಿಸುತ್ತಿಲ್ಲ. ನಾನು ಏನೇ ಹೇಳಿದರೂ ನನ್ನ ಮನಸ್ಸಿನಿಂದ ಮಾತನಾಡುತ್ತೇನೆ. ನಾನು ರೈತರ ಬಳಿಗೆ ಮರಳಬೇಕು ಎಂದು ಅನಿಸುತ್ತಿದೆ” ಎಂದಿದ್ದಾರೆ.

ಈ ಮೊದಲು ಕೂಡ ರೈತ ಹೋರಾಟವನ್ನು ಬೆಂಬಲಿಸಿದ್ದ ಇವರು, “ಈ ರೈತ ಚಳುವಳಿ ಹೀಗೇ ಮುಂದುವರೆದರೆ, ಮುಂದೆ ಪಶ್ಚಿಮ ಯುಪಿ, ರಾಜಸ್ಥಾನ ಮತ್ತು ಹರಿಯಾಣದಲ್ಲಿ ಬಿಜೆಪಿ ಸೋಲುತ್ತದೆ” ಎಂದು ಹೇಳಿದ್ದರು.

ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರ, ಗೋವಾ, ಬಿಹಾರ ಮತ್ತು ಒಡಿಶಾದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...