Homeಮುಖಪುಟ‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

- Advertisement -
- Advertisement -

ಒಟಿಟಿ ಫ್ಲಾಟ್‌ಫಾರ್ಮ್‌ ನೆಟ್‌ಫ್ಲಿಕ್ಸ್‌‌ನ ಜನಪ್ರಿಯ ವೆಬ್‌ಸರಣಿ ‘ಮನಿ ಹೀಸ್ಟ್‌’ನ 5ನೇ ಆವೃತ್ತಿ ಸೆಪ್ಟೆಂಬರ್‌‌ 3 ರಂದು ಬಿಡುಗಡೆಗೊಳ್ಳಲಿದೆ. ವಿಶ್ವದಾದ್ಯಂತ ಸಿನಿರಸಿಕರನ್ನು ಹುಚ್ಚೆಬ್ಬಿಸಿರುವ ಈ ವೆಬ್‌ ಸರಣಿಯ ಬಿಡುಗಡೆಯ ದಿನ, ಸಂಸ್ಥೆಯೊಂದು ರಜಾದಿನ ಎಂದು ಘೋಷಿಸಿದೆ. ರಜೆ ನೀಡುವುದಕ್ಕೆ ಅದು ನೀಡಿರುವ ಕಾರಣದಿಂದಾಗಿ ಅದರ ಆದೇಶದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಡಿಜಿಟಲ್ ಸೊಲ್ಯೂಷನ್ಸ್ ಪೂರೈಕೆದಾರರಾದ ವೆರ್ವೆಲಾಜಿಕ್‌ನ ಸಿಇಒ ಅಭಿಷೇಕ್ ಜೈನ್ ಅವರು ಈ ರಜೆಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಸಂಸ್ಥೆಯು ಅಧಿಸೂಚನೆಯನ್ನು , ‘‘ನೆಟ್‌ಫ್ಲಿಕ್ಸ್ ಮತ್ತು ಚಿಲ್ ಹಾಲಿಡೇ” ಎಂದು ಕರೆದಿದೆ.

ಇದನ್ನೂ ಓದಿ: ಭಾರತದ ವಿವಿಧ ಭಾಷೆಗಳ ಇತ್ತೀಚಿನ ಸಿನಿಮಾಗಳಲ್ಲಿ ದಲಿತ ಕಥನಗಳು: ಭಾಗ-2

ನೆಟ್‌ಫ್ಲಿಕ್ಸ್‌ನಲ್ಲಿ ಮನಿ ಹೀಸ್ಟ್‌ ಬಿಡುಗಡೆಯಾದ ದಿನ, ಸುಳ್ಳು ಹೇಳಿ ರಜೆ ಪಡೆಯುವ ಮೇಲ್‌ಗಳ ದಾಳಿಯಿಂದ ತಪ್ಪಿಸಲು, ಸಾಮೂಹಿಕ ಬಂಕ್‌ಗಳು ಮತ್ತು ಮೊಬೈಲ್ ಸ್ವಿಚ್‌ ಆಫ್‌ ಆಗುವುದನ್ನು ತಪ್ಪಿಸಲು ಕಂಪೆನಿ ಬಯಸಿದೆ ಎಂದು ತಮಾಷೆಯಾಗಿ ಹೇಳಲಾಗಿದೆ.

ಕಂಪೆನಿಯು, ತಮ್ಮ ಉದ್ಯೋಗಿಗಳು ಅಂದು ಪಾಪ್‌ಕಾರ್ನ್ ಬಟ್ಟಲನ್ನು ಹಿಡಿದು, ಅವರ ಪ್ರೀತಿಪಾತ್ರರ ಜೊತೆ ಒಟ್ಟಿಗೆ ಕೂತು ದಿನವನ್ನು ಕಳೆಯಲು ಪ್ರೋತ್ಸಾಹಿಸಿದೆ. “ಯಾಕೆಂದರೆ, ಕೆಲವು ಖುಷಿಯ ಕ್ಷಣಗಳು ತಮ್ಮ ಕೆಲಸವನ್ನು ನಿರ್ವಹಿಸಲು ಶಕ್ತಿ ನೀಡುವ ಅತ್ಯುತ್ತಮ ಮಾತ್ರೆಗಳಾಗಬಹುದು” ಎಂದು ಕಂಪೆನಿ ಹೇಳಿದೆ.

 

View this post on Instagram

 

A post shared by Verve Logic (@vervelogicin)

ಇಷ್ಟೇ ಅಲ್ಲದೆ ಸಾಂಕ್ರಾಮಿಕ ಸಮಯದಲ್ಲಿ ಮನೆಯಲ್ಲಿದ್ದೇ ತಮ್ಮ ಉದ್ಯೋಗಿಗಳು ಮಾಡಿದ ಕಠಿಣ ಪರಿಶ್ರಮದಿಂದಾಗಿ ಕಷ್ಟದ ಸಮಯದಲ್ಲಿ ಕಂಪೆನಿ ಸುಲಭವಾಗಿ ಮುನ್ನಡೆದಿದೆ ಎಂದು ಹೇಳಿರುವ ಕಂಪೆನಿ, ಇದಕ್ಕಾಗಿ ಉದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದೆ.

ಪ್ರಸ್ತುತ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕ ನೆಟ್ಟಿಗರು ಪ್ರಶಂಸೆಯ ಮಾತುಗಳನ್ನು ಹೇಳಿದ್ದಾರೆ. ಹೆಚ್ಚಿನ ಜನರು ತಾವು ಕೂಡಾ ಅಂತಹ ಸಂಸ್ಥೆಗಳ ಭಾಗವಾಗಲು ಬಯಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...