Homeಮುಖಪುಟ‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

- Advertisement -
- Advertisement -

ಒಟಿಟಿ ಫ್ಲಾಟ್‌ಫಾರ್ಮ್‌ ನೆಟ್‌ಫ್ಲಿಕ್ಸ್‌‌ನ ಜನಪ್ರಿಯ ವೆಬ್‌ಸರಣಿ ‘ಮನಿ ಹೀಸ್ಟ್‌’ನ 5ನೇ ಆವೃತ್ತಿ ಸೆಪ್ಟೆಂಬರ್‌‌ 3 ರಂದು ಬಿಡುಗಡೆಗೊಳ್ಳಲಿದೆ. ವಿಶ್ವದಾದ್ಯಂತ ಸಿನಿರಸಿಕರನ್ನು ಹುಚ್ಚೆಬ್ಬಿಸಿರುವ ಈ ವೆಬ್‌ ಸರಣಿಯ ಬಿಡುಗಡೆಯ ದಿನ, ಸಂಸ್ಥೆಯೊಂದು ರಜಾದಿನ ಎಂದು ಘೋಷಿಸಿದೆ. ರಜೆ ನೀಡುವುದಕ್ಕೆ ಅದು ನೀಡಿರುವ ಕಾರಣದಿಂದಾಗಿ ಅದರ ಆದೇಶದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಡಿಜಿಟಲ್ ಸೊಲ್ಯೂಷನ್ಸ್ ಪೂರೈಕೆದಾರರಾದ ವೆರ್ವೆಲಾಜಿಕ್‌ನ ಸಿಇಒ ಅಭಿಷೇಕ್ ಜೈನ್ ಅವರು ಈ ರಜೆಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಸಂಸ್ಥೆಯು ಅಧಿಸೂಚನೆಯನ್ನು , ‘‘ನೆಟ್‌ಫ್ಲಿಕ್ಸ್ ಮತ್ತು ಚಿಲ್ ಹಾಲಿಡೇ” ಎಂದು ಕರೆದಿದೆ.

ಇದನ್ನೂ ಓದಿ: ಭಾರತದ ವಿವಿಧ ಭಾಷೆಗಳ ಇತ್ತೀಚಿನ ಸಿನಿಮಾಗಳಲ್ಲಿ ದಲಿತ ಕಥನಗಳು: ಭಾಗ-2

ನೆಟ್‌ಫ್ಲಿಕ್ಸ್‌ನಲ್ಲಿ ಮನಿ ಹೀಸ್ಟ್‌ ಬಿಡುಗಡೆಯಾದ ದಿನ, ಸುಳ್ಳು ಹೇಳಿ ರಜೆ ಪಡೆಯುವ ಮೇಲ್‌ಗಳ ದಾಳಿಯಿಂದ ತಪ್ಪಿಸಲು, ಸಾಮೂಹಿಕ ಬಂಕ್‌ಗಳು ಮತ್ತು ಮೊಬೈಲ್ ಸ್ವಿಚ್‌ ಆಫ್‌ ಆಗುವುದನ್ನು ತಪ್ಪಿಸಲು ಕಂಪೆನಿ ಬಯಸಿದೆ ಎಂದು ತಮಾಷೆಯಾಗಿ ಹೇಳಲಾಗಿದೆ.

ಕಂಪೆನಿಯು, ತಮ್ಮ ಉದ್ಯೋಗಿಗಳು ಅಂದು ಪಾಪ್‌ಕಾರ್ನ್ ಬಟ್ಟಲನ್ನು ಹಿಡಿದು, ಅವರ ಪ್ರೀತಿಪಾತ್ರರ ಜೊತೆ ಒಟ್ಟಿಗೆ ಕೂತು ದಿನವನ್ನು ಕಳೆಯಲು ಪ್ರೋತ್ಸಾಹಿಸಿದೆ. “ಯಾಕೆಂದರೆ, ಕೆಲವು ಖುಷಿಯ ಕ್ಷಣಗಳು ತಮ್ಮ ಕೆಲಸವನ್ನು ನಿರ್ವಹಿಸಲು ಶಕ್ತಿ ನೀಡುವ ಅತ್ಯುತ್ತಮ ಮಾತ್ರೆಗಳಾಗಬಹುದು” ಎಂದು ಕಂಪೆನಿ ಹೇಳಿದೆ.

 

View this post on Instagram

 

A post shared by Verve Logic (@vervelogicin)

ಇಷ್ಟೇ ಅಲ್ಲದೆ ಸಾಂಕ್ರಾಮಿಕ ಸಮಯದಲ್ಲಿ ಮನೆಯಲ್ಲಿದ್ದೇ ತಮ್ಮ ಉದ್ಯೋಗಿಗಳು ಮಾಡಿದ ಕಠಿಣ ಪರಿಶ್ರಮದಿಂದಾಗಿ ಕಷ್ಟದ ಸಮಯದಲ್ಲಿ ಕಂಪೆನಿ ಸುಲಭವಾಗಿ ಮುನ್ನಡೆದಿದೆ ಎಂದು ಹೇಳಿರುವ ಕಂಪೆನಿ, ಇದಕ್ಕಾಗಿ ಉದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದೆ.

ಪ್ರಸ್ತುತ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕ ನೆಟ್ಟಿಗರು ಪ್ರಶಂಸೆಯ ಮಾತುಗಳನ್ನು ಹೇಳಿದ್ದಾರೆ. ಹೆಚ್ಚಿನ ಜನರು ತಾವು ಕೂಡಾ ಅಂತಹ ಸಂಸ್ಥೆಗಳ ಭಾಗವಾಗಲು ಬಯಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...