Homeಕರ್ನಾಟಕರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ ಎಂದು ರೈತರ ಜೊತೆಗೆ ಜಾನುವಾರುಗಳೂ ಸರ್ಕಾರದ ಬಳಿ ಕೇಳಿಕೊಂಡಿವೆ

- Advertisement -
- Advertisement -

ಬೆಂಗಳೂರು ಅಭಿವೃದ್ದಿಯ ನೆಪದಲ್ಲಿ ಬಿ.ಡಿ.ಎ. ನಿರ್ಮಿಸಲು ಹೊರಟಿರುವ ‘ಶಿವರಾಮ ಕಾರಂತ ಬಡವಣೆ ಯೋಜನೆ’ಯ ವಿರುದ್ದ ಮತ್ತು ಯೋಜನೆಯ ಅನುಷ್ಠಾನದಲ್ಲಿ ಬಿ.ಡಿ.ಎ. ಅಧಿಕಾರಿಗಳು ನಡೆಸುತ್ತಿರುವ ದೌರ್ಜ್ಯನ್ಯವನ್ನು ಖಂಡಿಸಿ, ರಾಮಗೊಂಡನಹಳ್ಳಿ ಗ್ರಾಮದ ರೈತರು ತಮ್ಮ ಜಾನುವಾರುಗಳೊಂದಿಗೆ ದಲಿತ ಸಂಘರ್ಷ ಸಮಿತಿ(ಸಂಯೋಜಿತ) ಅಡಿಯಲ್ಲಿ, ‘ವಿಧಾನಸೌಧ ಚಲೋ’ ಚಳವಳಿ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ರಾಮಗೊಂಡನಹಳ್ಳಿಯಲ್ಲಿ ಪ್ರಾರಂಭವಾದ ಮೆರವಣಿಗೆಯಲ್ಲಿ ನೂರಾರು ರೈತರ ಜೊತೆಗೆ ಅವರ ಜಾನುವಾರುಗಳೂ ಸಾಥ್‌ ನೀಡಿದವು. ಆದರೆ ಪೊಲೀಸರು ಮೆರವಣಿಗೆಯು ಮುಖ್ಯರಸ್ತೆಗೆ ತೆರಳುತ್ತಿದ್ದಂತೆ ತಡೆದಿದ್ದರಿಂದ, ರೈತರು ರಸ್ತೆಯಲ್ಲೆ ತಮ್ಮ ಜಾನುವಾರುಗಳಿಗೆ ಹುಲ್ಲುಗಳನ್ನು ನೀಡಿ ಪ್ರತಿಭಟಿಸಿದರು. ನಂತರ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ಆಗ್ರಹ ಪತ್ರವನ್ನು ಪಡೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ರಾಮಗೊಂಡನಹಳ್ಳಿಯ ರೈತರು ಮತ್ತು ನಿವಾಸಿಗಳು, ತಮ್ಮ ನೆಲವನ್ನು ಅಕ್ರಮವಾಗಿ ಪಡೆಯಲು ಪ್ರಯತ್ನಿಸುತ್ತಿರುವ ಬಿಡಿಎ ವಿರುದ್ದ ಆಗಸ್ಟ್‌ 2 ರಿಂದ ಇಂದಿನವರೆಗೂ ಅನಿರ್ಧಿಷಾವದಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಆಗಸ್ಟ್‌ 18 ರಂದು ಕೂಡಾ ಪಾದಯಾತ್ರೆಯನ್ನು ನೆಡೆಸಿ ಮುಖ್ಯಮಂತ್ರಿ, ಬಿಡಿಎಗೆ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು. ಅಂದು ಮನವಿಯನ್ನು ಸ್ವೀಕರಿಸಿದ್ದ ಅಧಿಕಾರಿಗಳು 7 ದಿನಗಳೊಳಗಾಗಿ ಪ್ರತಿಭಟನಾಕಾರರಿಗೆ ಲಿಖಿತ ಉತ್ತರವನ್ನು ನೀಡುವುದಾಗಿ ತಿಳಿಸಿದ್ದರು. ಆದರೆ 12 ದಿನ ಕಳೆದರು ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಇದರ ವಿರುದ್ದ ಪ್ರತಿಭಟಿಸಿ ರೈತರು ಇಂದು ತಮ್ಮ ಜಾನುವಾರುಗಳೊಂದಿಗೆ ವಿಧಾನಸೌಧ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ – ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಎಂ. ರಮೇಶ್, “ರಾಮಗೊಂಡನಹಳ್ಳಿಯಲ್ಲೇ ಸುಮಾರು 400 ಹಸುಗಳು ಮತ್ತು 80 ಕ್ಕೂ ಹೆಚ್ಚು ಎತ್ತುಗಳಿವೆ. ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದ್ದ ನಮ್ಮ ಜೊತೆ ಸ್ಥಳೀಯ ಶಾಸಕ ಮತ್ತು ಬಿಡಿಎ ಅಧ್ಯಕ್ಷರೂ ಆಗಿರುವ ವಿಶ್ವನಾಥ್‌ ಇತ್ತೀಚೆಗೆ ಸಭೆ ನಡೆಸಿದ್ದರು. ನಮ್ಮ ಅಹವಾಲುಗಳನ್ನು ಹಾಗೂ ಹಸುಗಳ ಬಗ್ಗೆ ಹೇಳಿದ್ದೆವು. ಅದಕ್ಕೆ ಅವರು ನಿಮ್ಮ ಹಸುಗಳನ್ನ ಗೋಶಾಲೆಗೆ ಹೊಡೆದುಬಿಡಿ ಎಂದು ಹೇಳಿದ್ದರು. ಅದಕ್ಕಾಗಿ ಸಾಂಕೇತಿಕವಾಗಿ 150-200 ಹಸುಗಳನ್ನು ಮೆರೆವಣಿಗೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿದ್ದಾರೆ.

“ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ” ಎಂದು ಮೆರವಣಿಗೆಯುದ್ದಕ್ಕೂ ಹಸುಗಳ ಕುತ್ತಿಗೆಯಲ್ಲಿ ಘೋಷಣಾ ಫಲಕಗಳು ರಾರಾಜಿಸುತ್ತಿದ್ದವು.

ಪ್ರತಿಭಟನೆಯ ಉದ್ದಕ್ಕೂ ರೈತರು ಸರ್ಕಾರದ ವಿರುದ್ದ ತಮ್ಮ ಆಕ್ರೊಶ ವ್ಯಕ್ತಪಡಿಸಿದರು. ವಿಧಾನಸೌಧಕ್ಕೆ ತೆರಳುತ್ತಿದ್ದ ರೈತರನ್ನು ತಡೆದದ್ದರಿಂದ ರೈತರು ಅಲ್ಲಿಯೆ ತಮ್ಮ ಪ್ರತಿಭಟನೆಗಳನ್ನು ಮುಂದುವರೆಸಿದರು. ನಂತರ ಅಧಿಕಾರಿಗಳು ಪ್ರತಿಭಟನಾಕಾರರಿಂದ ಆಗ್ರಹ ಪತ್ರವನ್ನು ಸ್ವೀಕರಿಸಿದರು. ರೈತರು ಸರ್ಕಾರಕ್ಕೆ ಸಲ್ಲಿಸಿರುವ ಆಗ್ರಹ ಪತ್ರವನ್ನು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಬಹುದು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...