Homeಕರ್ನಾಟಕಝೀರೋ‌ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ಒಂದೆಡೆ... ಒಂದಿಡೀ ಊರಿಗೆ ಬೀಗ ಹಾಕಿಸಿದ ಮಂತ್ರಿ ಇನ್ನೊಂದೆಡೆ...!!

ಝೀರೋ‌ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ಒಂದೆಡೆ… ಒಂದಿಡೀ ಊರಿಗೆ ಬೀಗ ಹಾಕಿಸಿದ ಮಂತ್ರಿ ಇನ್ನೊಂದೆಡೆ…!!

- Advertisement -
- Advertisement -

ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ತನಗೆ ಝೀರೋ‌ ಟ್ರಾಫಿಕ್ ಬೇಡವೆಂದು ಜನತೆಯ ಪ್ರಶಂಸೆಗೆ ಪಾತ್ರವಾಗಿದ್ದರು. ಆ ಬಳಿಕ ಯಾವುದೋ ಒಂದು ಖಾಸಗಿ ಟಿವಿ ಕಾರ್ಯಕ್ರಮದಲ್ಲಿ ತನ್ನನ್ನು ತಾನು Common Man (CM) ಎಂದು ಜನರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.‌ ಅದು ಗಿಮಿಕ್ಕೋ, ಇನ್ನೇನೋ ಎನ್ನಿ.. ಆದರೂ ಅವರ ಮಾತಿಗೆ ಅವರ ಅಧಿಕಾರಾವಧಿ ಮುಗಿಯುವವರೆಗೆ ಬದ್ಧರಾಗಿದ್ದರೆ ಅವರು ಆ ವಿಷಯದಲ್ಲಿ ಗೌರವಾರ್ಹರಾಗಿಯೇ ಉಳಿಯುತ್ತಾರೆ.

ನಮ್ಮ ದೇಶದಲ್ಲಿ ಮಾತ್ರ ಆಡಳಿತದಲ್ಲಿರುವವರು More equal than the common man. ಕೆನಡಾ, ಉರುಗ್ವೆ, ಲ್ಯಾಟಿನ್‌ ಅಮೆರಿಕಾದ ಅನೇಕ ದೇಶಗಳಲ್ಲಿ ಅಲ್ಲಿನ ಅಧ್ಯಕ್ಷರು, ಪ್ರಧಾನಿಗಳು ಕಾಮನ್ ಮ್ಯಾನ್‌ನಂತೆಯೇ ಜೀವಿಸುತ್ತಾರೆ. ಉರುಗ್ವೆ ದೇಶದ ಅಧ್ಯಕ್ಷರಾಗಿದ್ದ ಹೊಸೈ ಮುಕ್ಸಿಕ ತನ್ನ ತೋಟದಲ್ಲಿ ಸ್ವಯಂ ದುಡಿಯುತ್ತಿದ್ದರು. ತನ್ನ ಕಾರನ್ನು ತಾನೇ ಚಲಾಯಿಸುತ್ತಾ ಅಧ್ಯಕ್ಷರ ಕಚೇರಿಗೆ ಯಾವುದೇ ಬೆಂಗಾವಲು ವಾಹನವಿಲ್ಲದೇ ಹೋಗುತ್ತಿದ್ದರು. ಅವರೆಲ್ಲರ ಪ್ರಕಾರ ಝೀರೋ‌ ಟ್ರಾಫಿಕ್, ಹತ್ತಾರು ಬೆಂಗಾವಲು ವಾಹನ, ಕೈಗೊಂದು ಕಾಲಿಗೊಂದು ಆಳು ಎಂದರೆ ಅದು ನ್ಯಾಶನಲ್ ವೇಸ್ಟ್.. ಅದು ಪ್ರಜಾಪ್ರಭುತ್ವದ ನಿಜವಾದ ಸೌಂದರ್ಯ ಕೂಡಾ.

ಝೀರೋ‌ ಟ್ರಾಫಿಕನ್ನು, (ನ)ಗಣ್ಯ ವ್ಯಕ್ತಿ ಭೇಟಿ‌ ಕೊಡುವ ಊರಿಗೆ ಬೀಗ ಹಾಕುವುದನ್ನು ಜನರು ತಮ್ಮ ಬೇಡಿಕೆ ಈಡೇರಿಕೆಗಾಗಿ, ತಮ್ಮ ಅಸಮಾಧಾನ ತೋರ್ಪಡಿಕೆಗಾಗಿ ಪ್ರತಿಭಟಿಸುವ ಕಾರಣ ಮುಂದಿಟ್ಟು ಸಮರ್ಥಿಸುತ್ತಾರೆ. ಅಧಿಕಾರದಲ್ಲಿ‌ ಕೂತವ ಟೀಕೆ, ಪ್ರತಿಭಟನೆಗಳನ್ನು ಎದುರಿಸಲು ಸದಾ ತಯಾರಿರಬೇಕು. ಯಾಕೆಂದರೆ ಅವರು ನಮ್ಮಿಂದ ಆಯ್ಕೆಗೊಂಡವರು. ನಮ್ಮ ಹಕ್ಕುಗಳನ್ನು ಕೇಳುವ, ಅದಕ್ಕಾಗಿ‌ ಪ್ರತಿಭಟಿಸುವ ಹಕ್ಕು ನಮಗೆ ನಮ್ಮ ಸಂವಿಧಾನವೇ ಕೊಟ್ಟಿದೆ. ಪ್ರತಿಭಟನೆಗಳನ್ನು ದಮನಿಸುವುದು ಪ್ರಜಾತಂತ್ರಕ್ಕೆಸಗುವ ಅಪಚಾರ.
ಇರಲಿ ವಿಷಯಕ್ಕೆ ಬರುತ್ತೇನೆ.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಹೋರಾಟಗಾರರು

ಇಂದು ನಮ್ಮ ಪಕ್ಕದೂರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಆಗಮಿಸಿದ್ದಾರೆ. ಅದಕ್ಕಾಗಿ ಇಡೀ ಕೊಣಾಜೆಗೆ ಪೋಲೀಸರು ಬೇಲಿ ಹಾಕಿದ್ದಾರೆ. ನನ್ನೂರು ಪಜೀರಿಗೆ ಹೋಗಬೇಕೆಂದರೆ ನಮಗೆ ಸುಲಭ ಮಾರ್ಗ ಯುನಿವರ್ಸಿಟಿ ಕ್ಯಾಂಪಸ್‌ನ ಮಧ್ಯೆ ಹಾದು ಹೋಗುವ ರಸ್ತೆ. ಇಂದು ಬೆಳಗ್ಗೆ ಬಂದ್ ಮಾಡಿದ ಆ ರಸ್ತೆಯನ್ನು ಈ ಬರಹ ಬರೆಯುತ್ತಿರುವವರೆಗೂ ತೆರೆಯಲಾಗಿಲ್ಲ. ಯಾಕೆಂದರೆ ಅಶ್ವಥ್ ನಾರಾಯಣ್ ಯುನಿವರ್ಸಿಟಿಯಲ್ಲಿ‌ ಕಾರ್ಯಕ್ರಮವೊಂದಕ್ಕೆ ಬಂದಿದ್ದಾರೆ. ಕಾರ್ಯಕ್ರಮ ಯಾವತ್ತೋ ಮುಗಿದಾಗಿದೆ. ಆದರೆ ಅವರು ಯುನಿವರ್ಸಿಟಿಯ ಗೆಸ್ಟ್ ಹೌಸ್‌ನಲ್ಲಿ ಮೀಟಿಂಗ್‌ನಲ್ಲಿದ್ದಾರೆ ಎಂಬ ಕಾರಣ ನೀಡಿ ಇನ್ನೂ ಊರಿನ ಬೀಗ ತೆರೆದಿಲ್ಲ.

ಇದರಿಂದಾಗಿ ನಾವು ಪಜೀರಿಗರು ಮೂರು ಕಿಲೋ‌ಮೀಟರ್ ಸುತ್ತಿ ಬಳಸಿ ನಮ್ಮೂರಿಗೆ ಹೋಗಬೇಕು. ಇನ್ನು ಕೊಣಾಜೆಯ ಮತ್ತು ಯುನಿವರ್ಸಿಟಿಯ ಸುತ್ತ ಮುತ್ತಲಿರುವ ಹಳ್ಳಿಗರಿಗೆ ಇಂದು ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಊರಿಂದ ಹೊರ ಹೋಗದಂತೆ ಪೋಲೀಸರು ತಡೆಯುತ್ತಿದ್ದಾರೆ. ಹೊರಗಡೆ ಕೆಲಸಕ್ಕೆ ಹೋದವರು ಮಧ್ಯಾಹ್ನ ತಮ್ಮ ಕೆಲಸ ಮುಗಿಸಿ ಬಂದಿದ್ದರೆ ಅವರು ಅವರ ಮನೆಗೂ ಹೋಗುವಂತಿಲ್ಲ.. ಇದೆಂತಹ ನ್ಯಾಯ ಸ್ವಾಮೀ…? ಅಸೈಗೋಳಿಯಲ್ಲಿ ಇಳಿದು ಆಟೋದಲ್ಲಿ ಹೋಗಲೂ ಅಲ್ಲಿನ ಜನರಿಗೆ ಪೋಲೀಸರು ಬಿಡುತ್ತಿಲ್ಲ. ಇಲ್ಲಿಗೇ ಮುಗಿಯಲಿಲ್ಲ.. ಇನ್ನು ಆ ಮಾರ್ಗವಾಗಿ ಹರೇಕಳ, ಪಾವೂರು, ಇನೋಳಿ, ಮಲಾರ್, ಗ್ರಾಮಚಾವಡಿ ಮುಂತಾದ ಊರುಗಳಿಗೆ ಹೋಗುವ ಬಸ್‌ಗಳು ಮೂರು ಕಿಲೋ ಮೀಟರ್ ಸುತ್ತು ಹೊಡೆದು ನಡುಪದವು ಕ್ರಾಸ್, ಕಂಬಳಪದವು, ಪಜೀರು ದಾರಿಯಾಗಿ ಹೋಗಬೇಕು. ಸ್ವಂತ ವಾಹನವಿರುವವರು, ಬಸ್ಸಲ್ಲಿ ಹೋಗುವವರು ಹೇಗೂ ಸುತ್ತಿ ಬಳಸಿ ಹೋಗುತ್ತಾರೆ.

ಆದರೆ, ಪೋಲೀಸರು ಬೀಗ ಹಾಕಿದ ಊರಿನ ವೃದ್ಧರು, ರೋಗಿಗಳು ನಡೆದುಕೊಂಡೇ ಹೋಗಬೇಕು.. ಆಕಸ್ಮಾತ್ ಯಾರಾದರೂ, ಗರ್ಬಿಣಿಯರನ್ನು, ರೋಗಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಬೇಕಾದರೆ ಅವರನ್ನು ಹೊತ್ತುಕೊಂಡೇ ಹೋಗಬೇಕಷ್ಟೇ..?

ತನ್ನನ್ನು ತಾನು ಕಾಮನ್ ಮ್ಯಾನ್ ಎಂದು ಘೋಷಿಸಿದ, ಝೀರೋ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ತನ್ನ ಕೈ ಕೆಳಗಿನ ಮಂತ್ರಿಯ ಈ ಘನಂದಾರಿ ಕೆಲಸಕ್ಕೇನೆನ್ನುತ್ತಾರೆ…? ನಮ್ಮೂರಲ್ಲಿ ನಾನು ಹುಟ್ಟಿದಂದಿನಿಂದಲೂ ಯುನಿವರ್ಸಿಟಿ ಇರುವುದರಿಂದ ನಮ್ಮೂರಿಗೆ ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರು ಬರುವುದು ಸಾಮಾನ್ಯ. ನಾನು ನನ್ನ ಈವರೆಗಿನ ಬದುಕಲ್ಲಿ ಯಾವೊಬ್ಬ ಮಂತ್ರಿಯಾಗಲೀ, ಮುಖ್ಯಮಂತ್ರಿಯಾಗಲೀ, ರಾಜ್ಯಪಾಲನಾಗಲೀ ಊರಿಗೆ ಬೀಗ ಹಾಕಿಸಿದ್ದನ್ನು ನೋಡಿಲ್ಲ. ಯುನಿವರ್ಸಿಟಿ ಕ್ಯಾಂಪಸ್ ಒಳಗಡೆ ಈ ಹಿಂದೆಯೂ ಮಂತ್ರಿಗಳು ಬಂದಾಗ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸಿದ್ದಾರೆ. ಇಂದು ಕ್ಯಾಂಪಸ್ ಫ್ರಂಟ್‌ನ ಹುಡುಗರು ಪ್ರತಿಭಟಿಸಿದ್ದು ಮೊದಲಲ್ಲ. ಪ್ರಜಾಪ್ರಭುತ್ವದಲ್ಲಿ ಅಧಿಕಾರದಲ್ಲಿ‌ ಕೂತವನು ಪ್ರತಿಭಟನಾಕಾರರ ಅಹವಾಲು ಆಲಿಸಬೇಕೇ ಹೊರತು ಹೇಡಿಯಂತೆ ಊರಿಗೆ ಬೀಗ ಹಾಕುವುದಲ್ಲ.
ಹಿಂದೆಲ್ಲಾ ಗಣ್ಯ ವ್ಯಕ್ತಿಗಳು ಕ್ಯಾಂಪಸ್‌ಗೆ ಬರುವುದಕ್ಕಿಂತ ಐದು ನಿಮಿಷ ಮುಂಚೆ ವಾಹನಗಳನ್ನು ತಡೆಯುತ್ತಿದ್ದರು.. ಈ ರೀತಿ ಊರಿಗೇ ಬೀಗ ಹಾಕಿದ ಮೊದಲ ಮಂತ್ರಿ ನಮ್ಮ ಸನ್ಮಾನ್ಯ ಅಶ್ವಥ್ ನಾರಾಯಣರೊಬ್ಬರೇ.. ಇದನ್ನು ಹೀಗೇ ಮುಂದುವರಿಯಲು ಬಿಟ್ಟರೆ ಇನ್ನು ಈ ಪರಿಪಾಠವನ್ನು ಎಲ್ಲರೂ ಮುಂದುವರಿಸುತ್ತಾರೆ.

ಇಸ್ಮತ್ ಪಜೀರ್


ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಶಾಸಕರು, ಮಂತ್ರಿಗಳು ರಾಜಮಹಾರಾಜರನ್ನು ಮೀರಿಸುವಂತೆ ದರ್ಬಾರು ನಡೆಸುತ್ತಿದ್ದಾರೆ. ಇದನ್ನು ಮುಸ್ಲಿಮರು ವಿರೋದಿಸಿದರೆ, ಅವರು ತಾಲಿಬಾನ್! ಈ ರೀತಿಯ ಮೂರ್ಕರ ಬೋಪರಾಕಿನಿಂದ ಈ ದೇಶ ಇಂದು ಅದೋಗತಿಗೆ ಇಳಿದಿದೆ.

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...