Homeಕರ್ನಾಟಕಝೀರೋ‌ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ಒಂದೆಡೆ... ಒಂದಿಡೀ ಊರಿಗೆ ಬೀಗ ಹಾಕಿಸಿದ ಮಂತ್ರಿ ಇನ್ನೊಂದೆಡೆ...!!

ಝೀರೋ‌ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ಒಂದೆಡೆ… ಒಂದಿಡೀ ಊರಿಗೆ ಬೀಗ ಹಾಕಿಸಿದ ಮಂತ್ರಿ ಇನ್ನೊಂದೆಡೆ…!!

- Advertisement -
- Advertisement -

ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ತನಗೆ ಝೀರೋ‌ ಟ್ರಾಫಿಕ್ ಬೇಡವೆಂದು ಜನತೆಯ ಪ್ರಶಂಸೆಗೆ ಪಾತ್ರವಾಗಿದ್ದರು. ಆ ಬಳಿಕ ಯಾವುದೋ ಒಂದು ಖಾಸಗಿ ಟಿವಿ ಕಾರ್ಯಕ್ರಮದಲ್ಲಿ ತನ್ನನ್ನು ತಾನು Common Man (CM) ಎಂದು ಜನರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.‌ ಅದು ಗಿಮಿಕ್ಕೋ, ಇನ್ನೇನೋ ಎನ್ನಿ.. ಆದರೂ ಅವರ ಮಾತಿಗೆ ಅವರ ಅಧಿಕಾರಾವಧಿ ಮುಗಿಯುವವರೆಗೆ ಬದ್ಧರಾಗಿದ್ದರೆ ಅವರು ಆ ವಿಷಯದಲ್ಲಿ ಗೌರವಾರ್ಹರಾಗಿಯೇ ಉಳಿಯುತ್ತಾರೆ.

ನಮ್ಮ ದೇಶದಲ್ಲಿ ಮಾತ್ರ ಆಡಳಿತದಲ್ಲಿರುವವರು More equal than the common man. ಕೆನಡಾ, ಉರುಗ್ವೆ, ಲ್ಯಾಟಿನ್‌ ಅಮೆರಿಕಾದ ಅನೇಕ ದೇಶಗಳಲ್ಲಿ ಅಲ್ಲಿನ ಅಧ್ಯಕ್ಷರು, ಪ್ರಧಾನಿಗಳು ಕಾಮನ್ ಮ್ಯಾನ್‌ನಂತೆಯೇ ಜೀವಿಸುತ್ತಾರೆ. ಉರುಗ್ವೆ ದೇಶದ ಅಧ್ಯಕ್ಷರಾಗಿದ್ದ ಹೊಸೈ ಮುಕ್ಸಿಕ ತನ್ನ ತೋಟದಲ್ಲಿ ಸ್ವಯಂ ದುಡಿಯುತ್ತಿದ್ದರು. ತನ್ನ ಕಾರನ್ನು ತಾನೇ ಚಲಾಯಿಸುತ್ತಾ ಅಧ್ಯಕ್ಷರ ಕಚೇರಿಗೆ ಯಾವುದೇ ಬೆಂಗಾವಲು ವಾಹನವಿಲ್ಲದೇ ಹೋಗುತ್ತಿದ್ದರು. ಅವರೆಲ್ಲರ ಪ್ರಕಾರ ಝೀರೋ‌ ಟ್ರಾಫಿಕ್, ಹತ್ತಾರು ಬೆಂಗಾವಲು ವಾಹನ, ಕೈಗೊಂದು ಕಾಲಿಗೊಂದು ಆಳು ಎಂದರೆ ಅದು ನ್ಯಾಶನಲ್ ವೇಸ್ಟ್.. ಅದು ಪ್ರಜಾಪ್ರಭುತ್ವದ ನಿಜವಾದ ಸೌಂದರ್ಯ ಕೂಡಾ.

ಝೀರೋ‌ ಟ್ರಾಫಿಕನ್ನು, (ನ)ಗಣ್ಯ ವ್ಯಕ್ತಿ ಭೇಟಿ‌ ಕೊಡುವ ಊರಿಗೆ ಬೀಗ ಹಾಕುವುದನ್ನು ಜನರು ತಮ್ಮ ಬೇಡಿಕೆ ಈಡೇರಿಕೆಗಾಗಿ, ತಮ್ಮ ಅಸಮಾಧಾನ ತೋರ್ಪಡಿಕೆಗಾಗಿ ಪ್ರತಿಭಟಿಸುವ ಕಾರಣ ಮುಂದಿಟ್ಟು ಸಮರ್ಥಿಸುತ್ತಾರೆ. ಅಧಿಕಾರದಲ್ಲಿ‌ ಕೂತವ ಟೀಕೆ, ಪ್ರತಿಭಟನೆಗಳನ್ನು ಎದುರಿಸಲು ಸದಾ ತಯಾರಿರಬೇಕು. ಯಾಕೆಂದರೆ ಅವರು ನಮ್ಮಿಂದ ಆಯ್ಕೆಗೊಂಡವರು. ನಮ್ಮ ಹಕ್ಕುಗಳನ್ನು ಕೇಳುವ, ಅದಕ್ಕಾಗಿ‌ ಪ್ರತಿಭಟಿಸುವ ಹಕ್ಕು ನಮಗೆ ನಮ್ಮ ಸಂವಿಧಾನವೇ ಕೊಟ್ಟಿದೆ. ಪ್ರತಿಭಟನೆಗಳನ್ನು ದಮನಿಸುವುದು ಪ್ರಜಾತಂತ್ರಕ್ಕೆಸಗುವ ಅಪಚಾರ.
ಇರಲಿ ವಿಷಯಕ್ಕೆ ಬರುತ್ತೇನೆ.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಹೋರಾಟಗಾರರು

ಇಂದು ನಮ್ಮ ಪಕ್ಕದೂರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಆಗಮಿಸಿದ್ದಾರೆ. ಅದಕ್ಕಾಗಿ ಇಡೀ ಕೊಣಾಜೆಗೆ ಪೋಲೀಸರು ಬೇಲಿ ಹಾಕಿದ್ದಾರೆ. ನನ್ನೂರು ಪಜೀರಿಗೆ ಹೋಗಬೇಕೆಂದರೆ ನಮಗೆ ಸುಲಭ ಮಾರ್ಗ ಯುನಿವರ್ಸಿಟಿ ಕ್ಯಾಂಪಸ್‌ನ ಮಧ್ಯೆ ಹಾದು ಹೋಗುವ ರಸ್ತೆ. ಇಂದು ಬೆಳಗ್ಗೆ ಬಂದ್ ಮಾಡಿದ ಆ ರಸ್ತೆಯನ್ನು ಈ ಬರಹ ಬರೆಯುತ್ತಿರುವವರೆಗೂ ತೆರೆಯಲಾಗಿಲ್ಲ. ಯಾಕೆಂದರೆ ಅಶ್ವಥ್ ನಾರಾಯಣ್ ಯುನಿವರ್ಸಿಟಿಯಲ್ಲಿ‌ ಕಾರ್ಯಕ್ರಮವೊಂದಕ್ಕೆ ಬಂದಿದ್ದಾರೆ. ಕಾರ್ಯಕ್ರಮ ಯಾವತ್ತೋ ಮುಗಿದಾಗಿದೆ. ಆದರೆ ಅವರು ಯುನಿವರ್ಸಿಟಿಯ ಗೆಸ್ಟ್ ಹೌಸ್‌ನಲ್ಲಿ ಮೀಟಿಂಗ್‌ನಲ್ಲಿದ್ದಾರೆ ಎಂಬ ಕಾರಣ ನೀಡಿ ಇನ್ನೂ ಊರಿನ ಬೀಗ ತೆರೆದಿಲ್ಲ.

ಇದರಿಂದಾಗಿ ನಾವು ಪಜೀರಿಗರು ಮೂರು ಕಿಲೋ‌ಮೀಟರ್ ಸುತ್ತಿ ಬಳಸಿ ನಮ್ಮೂರಿಗೆ ಹೋಗಬೇಕು. ಇನ್ನು ಕೊಣಾಜೆಯ ಮತ್ತು ಯುನಿವರ್ಸಿಟಿಯ ಸುತ್ತ ಮುತ್ತಲಿರುವ ಹಳ್ಳಿಗರಿಗೆ ಇಂದು ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಊರಿಂದ ಹೊರ ಹೋಗದಂತೆ ಪೋಲೀಸರು ತಡೆಯುತ್ತಿದ್ದಾರೆ. ಹೊರಗಡೆ ಕೆಲಸಕ್ಕೆ ಹೋದವರು ಮಧ್ಯಾಹ್ನ ತಮ್ಮ ಕೆಲಸ ಮುಗಿಸಿ ಬಂದಿದ್ದರೆ ಅವರು ಅವರ ಮನೆಗೂ ಹೋಗುವಂತಿಲ್ಲ.. ಇದೆಂತಹ ನ್ಯಾಯ ಸ್ವಾಮೀ…? ಅಸೈಗೋಳಿಯಲ್ಲಿ ಇಳಿದು ಆಟೋದಲ್ಲಿ ಹೋಗಲೂ ಅಲ್ಲಿನ ಜನರಿಗೆ ಪೋಲೀಸರು ಬಿಡುತ್ತಿಲ್ಲ. ಇಲ್ಲಿಗೇ ಮುಗಿಯಲಿಲ್ಲ.. ಇನ್ನು ಆ ಮಾರ್ಗವಾಗಿ ಹರೇಕಳ, ಪಾವೂರು, ಇನೋಳಿ, ಮಲಾರ್, ಗ್ರಾಮಚಾವಡಿ ಮುಂತಾದ ಊರುಗಳಿಗೆ ಹೋಗುವ ಬಸ್‌ಗಳು ಮೂರು ಕಿಲೋ ಮೀಟರ್ ಸುತ್ತು ಹೊಡೆದು ನಡುಪದವು ಕ್ರಾಸ್, ಕಂಬಳಪದವು, ಪಜೀರು ದಾರಿಯಾಗಿ ಹೋಗಬೇಕು. ಸ್ವಂತ ವಾಹನವಿರುವವರು, ಬಸ್ಸಲ್ಲಿ ಹೋಗುವವರು ಹೇಗೂ ಸುತ್ತಿ ಬಳಸಿ ಹೋಗುತ್ತಾರೆ.

ಆದರೆ, ಪೋಲೀಸರು ಬೀಗ ಹಾಕಿದ ಊರಿನ ವೃದ್ಧರು, ರೋಗಿಗಳು ನಡೆದುಕೊಂಡೇ ಹೋಗಬೇಕು.. ಆಕಸ್ಮಾತ್ ಯಾರಾದರೂ, ಗರ್ಬಿಣಿಯರನ್ನು, ರೋಗಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಬೇಕಾದರೆ ಅವರನ್ನು ಹೊತ್ತುಕೊಂಡೇ ಹೋಗಬೇಕಷ್ಟೇ..?

ತನ್ನನ್ನು ತಾನು ಕಾಮನ್ ಮ್ಯಾನ್ ಎಂದು ಘೋಷಿಸಿದ, ಝೀರೋ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ತನ್ನ ಕೈ ಕೆಳಗಿನ ಮಂತ್ರಿಯ ಈ ಘನಂದಾರಿ ಕೆಲಸಕ್ಕೇನೆನ್ನುತ್ತಾರೆ…? ನಮ್ಮೂರಲ್ಲಿ ನಾನು ಹುಟ್ಟಿದಂದಿನಿಂದಲೂ ಯುನಿವರ್ಸಿಟಿ ಇರುವುದರಿಂದ ನಮ್ಮೂರಿಗೆ ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರು ಬರುವುದು ಸಾಮಾನ್ಯ. ನಾನು ನನ್ನ ಈವರೆಗಿನ ಬದುಕಲ್ಲಿ ಯಾವೊಬ್ಬ ಮಂತ್ರಿಯಾಗಲೀ, ಮುಖ್ಯಮಂತ್ರಿಯಾಗಲೀ, ರಾಜ್ಯಪಾಲನಾಗಲೀ ಊರಿಗೆ ಬೀಗ ಹಾಕಿಸಿದ್ದನ್ನು ನೋಡಿಲ್ಲ. ಯುನಿವರ್ಸಿಟಿ ಕ್ಯಾಂಪಸ್ ಒಳಗಡೆ ಈ ಹಿಂದೆಯೂ ಮಂತ್ರಿಗಳು ಬಂದಾಗ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸಿದ್ದಾರೆ. ಇಂದು ಕ್ಯಾಂಪಸ್ ಫ್ರಂಟ್‌ನ ಹುಡುಗರು ಪ್ರತಿಭಟಿಸಿದ್ದು ಮೊದಲಲ್ಲ. ಪ್ರಜಾಪ್ರಭುತ್ವದಲ್ಲಿ ಅಧಿಕಾರದಲ್ಲಿ‌ ಕೂತವನು ಪ್ರತಿಭಟನಾಕಾರರ ಅಹವಾಲು ಆಲಿಸಬೇಕೇ ಹೊರತು ಹೇಡಿಯಂತೆ ಊರಿಗೆ ಬೀಗ ಹಾಕುವುದಲ್ಲ.
ಹಿಂದೆಲ್ಲಾ ಗಣ್ಯ ವ್ಯಕ್ತಿಗಳು ಕ್ಯಾಂಪಸ್‌ಗೆ ಬರುವುದಕ್ಕಿಂತ ಐದು ನಿಮಿಷ ಮುಂಚೆ ವಾಹನಗಳನ್ನು ತಡೆಯುತ್ತಿದ್ದರು.. ಈ ರೀತಿ ಊರಿಗೇ ಬೀಗ ಹಾಕಿದ ಮೊದಲ ಮಂತ್ರಿ ನಮ್ಮ ಸನ್ಮಾನ್ಯ ಅಶ್ವಥ್ ನಾರಾಯಣರೊಬ್ಬರೇ.. ಇದನ್ನು ಹೀಗೇ ಮುಂದುವರಿಯಲು ಬಿಟ್ಟರೆ ಇನ್ನು ಈ ಪರಿಪಾಠವನ್ನು ಎಲ್ಲರೂ ಮುಂದುವರಿಸುತ್ತಾರೆ.

ಇಸ್ಮತ್ ಪಜೀರ್


ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಶಾಸಕರು, ಮಂತ್ರಿಗಳು ರಾಜಮಹಾರಾಜರನ್ನು ಮೀರಿಸುವಂತೆ ದರ್ಬಾರು ನಡೆಸುತ್ತಿದ್ದಾರೆ. ಇದನ್ನು ಮುಸ್ಲಿಮರು ವಿರೋದಿಸಿದರೆ, ಅವರು ತಾಲಿಬಾನ್! ಈ ರೀತಿಯ ಮೂರ್ಕರ ಬೋಪರಾಕಿನಿಂದ ಈ ದೇಶ ಇಂದು ಅದೋಗತಿಗೆ ಇಳಿದಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...