Homeಮುಖಪುಟನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ. - ಕಾಶೀನಾಥ್ ನಾಯ್ಕ್‌

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನ ಜಾವಲಿನ್ ಎಸತ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಬಂದ ನೀರಜ್ ಚೋಪ್ರಾರ ಆರಂಭಿಕ ಗುರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಬಳಿಯ ಬೆಂಗಳೆಯ ಕಾಶೀನಾಥ್ ನಾಯ್ಕ್‌ರವರಿಗೆ ಕ್ರೀಡಾ ದಿನದಂದು ತವರೂರಲ್ಲಿ ಸನ್ಮಾನಿಸಲಾಗಿದೆ.

ರಾಷ್ಟ್ರಕ್ಕೆ ಹೆಮ್ಮೆ ತಂದ ಬಂಗಾರದ ಹುಡುಗನಿಗೆ ತರಬೇತಿ ನೀಡಿದ ಸಾಧನೆಗಾಗಿ ತಾಲೂಕಾಡಳಿತ ಕಾಶೀನಾಥ್ ನಾಯ್ಕ್‌ರವರನ್ನು ಊರಿಗೆ ಕರೆಸಿ ಗೌರವಿಸಿದೆ. ಶಿರಸಿಯ ಶಾಸಕರು ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮಾನದಿಂದ ಸನ್ಮಾನಿಸಿದ್ದಾರೆ.

2010ರಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ ಜಾವಲಿನ್ ಥ್ರೋನಲ್ಲಿ ಕಾಶೀನಾಥ ನಾಯ್ಕ್ 74.29 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದಿದ್ದರು. ಸೈನ್ಯದಲ್ಲಿ ಸುಭೇದಾರ್ ಆಗಿರುವ ಅವರನ್ನು ಪಟಿಯಾಲಾದಲ್ಲಿ ಜಾವಲಿನ್ ಕೋಚ್ ಎಂದು ನೇಮಿಸಲಾಗಿತ್ತು. ಅಲ್ಲಿ ಅವರು ನೀರಜ್‌ಗೆ 2015 ರಿಂದ 2017ರವರೆಗೆ ನೀರಜ್‌ಗೆ ತರಬೇತಿ ಕೊಟ್ಟಿದ್ದರು.

ನೀರಜ್ ಚೋಪ್ರಾ ಚಿನ್ನದ ಪದಕ ತಂದಾಗ ರಾಜ್ಯ ಸರ್ಕಾರ ಅವರ ಗುರು ಕಾಶೀನಾಥ್‌ ನಾಯ್ಕ್‌ರವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿತ್ತು. ಆಗ ಅಸೂಯೆಯಿಂದ ಚಡಪಡಿಸಿದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಅನಾವಶ್ಯಕ ಮುಜುಗರಕ್ಕೀಡಾಗಿದ್ದ ಕಾಶೀನಾಥರ ಪುಣೆಯ ಮನೆಗೆ ಶಿಷ್ಯ ನೀರಜ್ ಚೋಪ್ರಾ ಖುದ್ದು ಭೇಟಿ ನೀಡಿ ಗುರುವಿಗೆ ಕೃತಜ್ಞತೆ ಅರ್ಪಿಸಿದಾಗ ಟೀಕಾಕಾರರ ಬಾಯಿ ಬಂದ್ ಆಗಿತ್ತು.

ಈಗ ಕಾಶೀನಾಥರಿಗೆ ಹುಟ್ಟೂರಲ್ಲಿ ಬಂಗಾರದಂತಹ ಶಿಷ್ಯನನನ್ನು ತರಬೇತುಗೊಳಿಸಿದ್ದಕ್ಕೆ ಸನ್ಮಾನ ಮಾಡಿರುವುದು ಅವರು ನೀರಜ್‌ಗೆ ತರಬೇತಿ ಕೊಟ್ಟಿರುವುದಕ್ಕೆ ಮತ್ತೊಂದು ಸಿಂಧುತ್ವ ಸಿಕ್ಕಾಂತಾಗಿದೆ.

ಶಿರಸಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದ ಕಾಶೀನಾಥ ನಾಯ್ಕ್, “ಭಾರತದಲ್ಲಿ ವಿದೇಶಿ ಕೋಚ್‌ಗಳಿಗೆ ಕೊಡುವ ಸೌಲಭ್ಯಗಳು ದೇಶಿಯ ಕೋಚ್‌ಗಳಿಗೆ ಸಿಗುತ್ತಿಲ್ಲ. ಅಂತಹ ಸೌಲಭ್ಯ-ಸೌಕರ್ಯ-ಮಾನ್ಯತೆ-ಗೌರವ ನಮ್ಮ ತರಬೇತಿದಾರರಿಗೂ ಸಿಕ್ಕರೆ ದೇಶದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುತ್ತಾರೆ. ದೇಶದ ಗೌರವ ಹೆಚ್ಚಿಸಲು ನಿಷ್ಠೆಯಿಂದ ಕೆಲಸಮಾಡುವ ತರಬೇತಿದಾರರಿಗೆ ಪ್ರೋತ್ಸಾಹ ಸಿಕ್ಕರೆ ಇನ್ನಷ್ಟು ಒಲಂಪಿಕ್ಸ್ ಮತ್ತಿತರ ಕ್ರೀಡಾಕೂಟದಲ್ಲಿ ದೇಶದ ಪ್ರತಿಭೆಗಳು ಪದಕ ಗೆಲ್ಲುವ ಸಾಮರ್ಥ್ಯ ತೋರಿಸುತ್ತಾರೆಂಬುದು ನನ್ನ ನಂಬಿಕೆ” ಎಂದರು.

ದೇಶದ ಕ್ರೀಡಾ ಕ್ಷೇತ್ರದ ವಾಸ್ತವ ಪರಿಸ್ಥಿತಿ ಕೆಟ್ಟದಾಗಿದ್ದರೂ ನಮ್ಮಲ್ಲಿನ ಕೋಚ್‌ಗಳು ದೇಶಾಭಿಮಾನದ ಬದ್ದತೆಯಿಂದ ತರಬೇತಿ ಕೊಡುತ್ತಿದ್ದಾರೆ. ಮುಂದಿನ ದಿನದಲ್ಲಾದರು ಕ್ರೀಡಾ ಕ್ಷೇತ್ರದತ್ತ ಸರ್ಕಾರ ಆಸಕ್ತಿ ವಹಿಸಿ ಪೂರಕ, ಪ್ರೋತ್ಸಾಹದಾಯಕ ವಾತವರಣ ಕಲ್ಪಿಸಬೇಕೆಂದು ನಾಯ್ಕ್ ಹೇಳಿದರು.

ಉತ್ತರ ಕನ್ನಡದಲ್ಲೂ ಬಹಳಷ್ಟು ಕ್ರೀಡಾ ಪ್ರತಿಭೆಗಳಿವೆ. ಅವರಿಗೆಲ್ಲ ಸರಿಯಾದ ಸೌಲಭ್ಯ ಒದಗಿಸಿ ಹರಿದುಂಬಿಸಬೇಕು. ಕೀಡಾ ಸಾಧಕನ ಹಿಂದಿರುವ ತರಬೇತಿದಾರನನ್ನು ತಾಯ್ನೆಲ ಗರುತಿಸಿರುವುದು ನನ್ನ ಬದುಕಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಲಿದೆ. ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ: ಖೇಲೋ ಇಂಡಿಯಾ ಇನ್ನಿತರ ಕ್ರೀಡಾ ಸೌಲಭ್ಯ- ಅವಕಾಶಗಳ ಕುರಿತು ತಿಳುವಳಿಕೆ, ಜಾಗೃತಿ ಮೂಡಿಸ ಬೇಕಾಗಿದೆ ಎಂದರು.

ಕಾಗೇರಿಯವರು ಮಾತನಾಡಿ, “ಶಿರಸಿ ಕ್ರೀಡಾಂಗಣದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿಸಬೇಕಿದೆ. ಕಾಶೀನಾಥ ನಾಯ್ಕ್‌ರವರ ಆಶಯದಂತೆ ದೇಶಿಯ ತರಬೇತಿದಾರರನ್ನೂ ಉತ್ತಮವಾಗಿ ಪರಿಗಣಿಸಲು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದರು.


ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...