Homeಕರ್ನಾಟಕಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

- Advertisement -
- Advertisement -

50 ವರ್ಷಗಳ ಹಿಂದೆ ಆಂಗ್ಲೋ-ಇಂಡಿಯನ್ ಕುಟುಂಬದಿಂದ ಉಡುಗೊರೆಯಾಗಿ ಬಂದ ಚಿಕ್ಕ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದ 8 ಮಂದಿಯ ಕುಟುಂಬ ಈಗ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ. ಪಕ್ಕದ ಮನೆಯವರ ಕೃತ್ಯಕ್ಕೆ ಕೊಡಗಿನ ಯರವ ಸಮುದಾಯದ ಮಹಿಳೆಯ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕೊಡಗಿನ ಯರವ ಸಮುದಾಯದ ಮಹಿಳೆ ಪಂಜಿರಿ ಯರವರ ಕುಂಜಿ, ರಸ್ತೆಯಲ್ಲಿ ಕುಳಿತು ತನ್ನ ಮನೆ ನೆಲಸಮಗೊಳ್ಳುವುದನ್ನು ನೋಡುತ್ತಾ, ಅಳುತ್ತಾ ಕುಳಿತಿದ್ದರು. ಆಕೆ, ತನ್ನ ಮನೆಯನ್ನು ಉರುಳಿಸುವ ಪ್ರಕ್ರಿಯೆ ಮುಗಿಯುವವರೆಗೂ ಒಂದಿಂಚೂ ಕದಲದೆ, ಸುರಿವ ಮಳೆಯ ಮಧ್ಯೆಯೂ ಅಳುತ್ತಾ ರಸ್ತೆಯಲ್ಲೇ ಕುಳಿತ್ತಿದ್ದರು. ಆಕೆ ಹುಟ್ಟಿದಾಗಿನಿಂದ ಆಕೆಗೆ ಇದ್ದದ್ದು ಅದೊಂದೇ ಮನೆ. ತನ್ನ ಮನೆ ನೆಲಸಮಗೊಳ್ಳುತ್ತಿರುವುದನ್ನು ನೋಡಿ ಬಿಕ್ಕಿ-ಬಿಕ್ಕಿ ಅಳುತ್ತಿದ್ದರು.

ಪಂಜಿರಿ ಯರವರ ಕುಂಜಿ ದಕ್ಷಿಣ ಕೊಡಗಿನ ದೇವರಪುರ ಗ್ರಾಮದ ಕನ್ನಂಬಾಡಿ ನಿವಾಸಿ. ಅವರು ಹಲವಾರು ಎಸ್ಟೇಟ್‌ಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆಕೆ ಮತ್ತು ಆಕೆಯ ಕುಟುಂಬದ ಇತರ ಏಳು ಸದಸ್ಯರು ಕನ್ನಂಬಾಡಿಯಲ್ಲಿರುವ ಸರ್ವೇ ನಂಬರ್ 215/8 ರಲ್ಲಿ ಶೀಟ್ ಮನೆಯಲ್ಲಿ ವಾಸಿಸುತ್ತಿದ್ದರು.

ಇವರು ವಾಸಿಸುತ್ತಿದ್ದ ಚಿಕ್ಕ ಭೂಮಿಯನ್ನು ಸುಮಾರು 50 ವರ್ಷಗಳ ಹಿಂದೆ ಆಕೆಯ ಅಜ್ಜನಿಗೆ ಆಂಗ್ಲೋ-ಇಂಡಿಯನ್ ಕುಟುಂಬವಾದ ವಾರಿಂಗ್ ಕುಟುಂಬ ಉಡುಗೊರೆಯಾಗಿ ನೀಡಿತ್ತು.

ಇದನ್ನೂ ಓದಿ:  ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಕುಂಜಿಯ ಅಜ್ಜ ನಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಕುಟುಂಬದವರಿಗೆ ನಮ್ಮ ಕುಟುಂಬಕ್ಕೆ ಸೇರಿದ 215/8 ಸರ್ವೇ ನಂಬರ್ ಭೂಮಿಯನ್ನು ಉಡುಗೊರೆಯಾಗಿ ನೀಡಲಾಗಿತ್ತು. 215/8 ರಲ್ಲಿನ ಭೂಮಿಯು ಇನ್ನೂ ವಾರಿಂಗ್ ಕುಟುಂಬದ ನಮ್ಮ ಒಡೆತನದಲ್ಲಿದೆ. ಆದರೆ, ಕುಂಜಿಯ ಕುಟುಂಬದವರಿಗೆ ಆ ಸ್ಥಳವನ್ನು ಖಾಲಿ ಮಾಡುವಂತೆ ನಾವು ಎಂದಿಗೂ ಕೇಳಲಿಲ್ಲ” ಎಂದು ಈಗ ಚೆನ್ನೈನಲ್ಲಿ ನೆಲೆಸಿರುವ ವಾರಿಂಗ್ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಅವ್ರಿಲ್ ಹೇಳಿದ್ದಾರೆ. ಅಲ್ಲದೆ,ಸರ್ವೇ ನಂಬರ್ 215/8 ರ ತೆರವುಗೊಳಿಸಲು ಕುಟುಂಬಕ್ಕೆ ನ್ಯಾಯಾಲಯದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಆದರೆ, ಆಗಸ್ಟ್ 20 ರಂದು ನೆರೆಯ ನಿವಾಸಿ ಸುಷ್ಮಾ ಸುಬ್ಬಯ್ಯ ಅವರು ಕುಂಜಿ ಮತ್ತು ಆಕೆಯ ಕುಟುಂಬವನ್ನು ಆ ಸ್ಥಳದಿಂದ ಹೊರಹಾಕಲು ಅವರ ಮನೆಯನ್ನು ನೆಲಸಮಗೊಳಿಸಿದ್ದಾರೆ. “ನಮಗೆ ಇಂಗ್ಲಿಷ್ ಓದಲು ಬರುವುದಿಲ್ಲ. ನಮಗೆ ಕೋರ್ಟ್ ನೋಟಿಸ್ ತೋರಿಸಲಾಯಿತು ಮತ್ತು ನಮ್ಮನ್ನು ನಮ್ಮ ಮನೆಯಿಂದ ಹೊರಹಾಕಲಾಯಿತು” ಎಂದು ಕುಂಜಿ ಕುಟುಂಬದ ಸದಸ್ಯರೊಬ್ಬರು ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ.

ಹಲವು ವರ್ಷಗಳಿಂದ ನೆರೆಯವರ ಹಿಂಸೆಗೆ ಬಳಲುತ್ತಿದ್ದೇವೆ ಎಂದು ಯರವ ಸಮುದಾಯದ ಈ ಕುಟುಂಬ ಆರೋಪಿಸಿದ್ದಾರೆ. ಸುಬ್ಬಯ್ಯ ನಮಗೆ ಸ್ಥಳವನ್ನು ಖಾಲಿ ಮಾಡುವಂತೆ ಅನೇಕ ಬಾರಿ ಒತ್ತಾಯಿಸಿದ್ದಾರೆ. ಆದಾಗ್ಯೂ, ಸುಬ್ಬಯ್ಯನ ಮರಣದ ನಂತರ ಶೋಷಣೆ ದುಪ್ಪಟ್ಟಾಯಿತು. ಅವರ ಮಗಳು ಸುಷ್ಮಾ ನಮ್ಮ ಸಮುದಾಯದ ವಿರುದ್ಧ ಹಲವು ಬಾರಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ನ್ಯಾಯಾಲಯದ ಆದೇಶದಲ್ಲಿ ಸರ್ವೇ ನಂ. 218/8 ಅನ್ನು ತೆರವುಒಳಿಸಲು ಆದೇಶಿಸಲಾಗಿದೆ. ಆದಾಗ್ಯೂ, ಕುಂಜಿಯವರು ಆರ್‌ಟಿಸಿ ಸರ್ವೇ ನಂ. 215/8ರಲ್ಲಿ ವಾಸಿಸುತ್ತಿದ್ದರು ಎಂದು ದೃಢಪಡಿಸಿದೆ. ಅದು ವೇರಿಂಗ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಆ ಸ್ಥಳದಲ್ಲಿ ತೆರವುಗೊಳಿಸಲು ಯಾವುದೇ ರೀತಿಯಲ್ಲೂ ಆದೇಶಿಸಲಾಗಿಲ್ಲ.

ಮನೆ ನೆಲಸಮದ ಬಗ್ಗೆ ಯರವ ಕುಟುಂಬದವರು ಗೋಣಿಕೊಪ್ಪಲು ಪೊಲೀಸರನ್ನು ಸಂಪರ್ಕಿಸಿದಾಗ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಕುಟುಂಬವು ನ್ಯಾಯವನ್ನು ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದು, ಶೀಘ್ರದಲ್ಲೇ ಎಸ್‌ಪಿಯನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...