HomeUncategorized75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ....

75-80 ಸೀಟು ನಷ್ಟ! ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ….

40ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲ್ಲಿರುವ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ

- Advertisement -
- Advertisement -

ಕಳೆದ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಉತ್ತರ ಭಾರತದ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಅದ್ಭುತ ವಿಜಯ ಸಾಧಿಸುವುದರ ಮೂಲಕ. ಈ ಸಲ ಉತ್ತರ ಭಾರತದಲ್ಲಿ ಅದರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನುತ್ತಾರೆ ಖ್ಯಾತ ವಿಶ್ಲೇಷಕ ದೀಪಂಕರ್ ಬಸು ನತ್ತು ಅವರ ತಂಡದ ಸದಸ್ಯರು. ವಿವಿಧ ಚುನಾವಣಾ ಶಾಸ್ತ್ರಗಳನ್ನು ಬಲ್ಲ ಈ ತಂಡ, ಎರಡು-ಮೂರು ಮಾನದಂಡಗಳಲ್ಲಿ ವಿಶ್ಲೇಷಣೆ ಮಾಡಿದಾಗಲೂ, ಅಂತಿಮ ಫಲಿತಾಂಶ: ಉತ್ತರ ಭಾರತದಲ್ಲಿ ಬಿಜೆಪಿ ಪಾತಾಳಕ್ಕೆ ಎಂಬುದೇ ಆಗಿದೆ….. ಪಶ್ಚಿಮ ಬಂಗಾಳದಲ್ಲೂ ಅದಕ್ಕೆ ಸಿಗುವ ಲಾಭ ಅಷ್ಟಕ್ಕಷ್ಟೇ …ಈ ಅಧ್ಯಯನವನ್ನು ಓದಿ ಅದರ ಸಂಕ್ಷಿಪ್ತ ರೂಪವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ…

ಹಿಂದಿ ಬೆಲ್ಟ್: ಬಿಜೆಪಿಗೆ 75 ಸೀಟು ನಷ್ಟ
ಕಳೆದ ಸಲ 2014ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಹಿಂದಿ ಬೆಲ್ಟ್ ಎಂದು ಕರೆಯಲ್ಪಡುವ 10 ರಾಜ್ಯಗಳಾದ ಬಿಹಾರ್, ಛತ್ತೀಸ್‍ಘಡ್, ದೆಹಲಿ, ಹಿಮಾಚಲ ಪ್ರದೇಶ, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ್, ಉತ್ತರಾಖಂಡ, ಮತ್ತು ಉತ್ತರ ಪ್ರದೇಶಗಳಲ್ಲಿ ಅದು ಸಾಧಿಸಿದ ಅಭೂತಪೂರ್ವ ಗೆಲುವು. ಈ 10 ರಾಜ್ಯಗಳ ಒಟ್ಟು 225 ಸೀಟುಗಳಲ್ಲಿ ಬಿಜೆಪಿ 190 ಸೀಟುಗಳನ್ನು ಗೆದ್ದಿತ್ತು!
2019ರಲ್ಲಿ ಅದರ ಭವಿಷ್ಯವನ್ನು ಇದೇ ರಾಜ್ಯಗಳು ಬರೆಯಲಿವೆ. ಅದರಲ್ಲೂ ಉತ್ತರ ಪ್ರದೇಶ ರಾಜ್ಯದ ಫಲಿತಾಂಶವೇ ಈ ಇತರ ಹಿಂದಿ ರಾಜ್ಯಗಳ ಮೇಲೂ ಪ್ರಭಾವ ಹೊಂದಿರುತ್ತದೆ.

ಮೊದಲ ಏಟೇ ಯು.ಪಿ.ಯಿಂದ!
ಇಲ್ಲಿ ಈ ಅಧ್ಯಯನದಲ್ಲಿ ಎರಡು ವಿಧಾನ ಆಯ್ದು ಕೊಳ್ಳಲಾಗಿದೆ. ಮೊದಲ ವಿಧಾನದಲ್ಲಿ 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಅಸೆಂಬ್ಲಿ ಚುನಾವಣೆಗಳನ್ನು ಮತ್ತು ಎರಡನೇ ವಿಧಾನದಲ್ಲಿ 2014ರ ಸಂಸತ್ ಚುನಾವಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.
ಮೊದಲ ವಿಧಾನದ ಪ್ರಕಾರ, ಅದರ ಶೇಕಡಾವಾರು ಮತಗಳಿಕೆ ಶೇ.42.3ರಿಂದ 39.3ಕ್ಕೆ ಇಳಿಯಲಿದೆ. ಅಂದರೆ, ಈಗಿರುವ ಅದರ 71 ಸಂಸದರ ಸಂಖ್ಯೆ 27ಕ್ಕೆ ಕುಸಿಯಲಿದೆ. ಇದರರ್ಥ 44 ಸೀಟುಗಳ ನಷ್ಟ.

ಎರಡನೆ ವಿಧಾನದಲ್ಲಿ, ಅದರ ಶೇಕಡಾವಾರು ಮತಗಳಿಕೆ ಹೆಚ್ಚೂಕಡಿಮೆ 2014ರಲ್ಲಿ ಇದ್ದಷ್ಟೇ ಇರಲಿದ್ದು, ಸೀಟುಗಳ ಸಂಖ್ಯೆಯಲ್ಲಿ 71ರಿಂದ 30ಕ್ಕೆ ಇಳಿಯಲಿದೆ. ಅಂದರೆ 41 ಸೀಟುಗಳ ನಷ್ಟ.

40ರ ಕೊರತೆ ಎಲ್ಲಿ ತುಂಬುವುದು?
2014ರಲ್ಲಿ ಬಿಜೆಪಿ ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಸ್ವೀಪ್ ಎನ್ನುವ ಮಟ್ಟಿಗೆ ವಿಜಯ ಸಾಧಿಸಿತ್ತು. ಇದರರ್ಥ ಈಗದು ಉತ್ತರ ಪ್ರದೇಶದ 40 ಸೀಟುಗಳ ಕೊರತೆಯನ್ನು ಈ ಭಾಗದಿಂದಲೇ ತುಂಬಿಕೊಳ್ಳಬೇಕು. ಏಕೆಂದರೆ, ಉಳಿದೆಡೆ ಅಂತಹ ವಾತಾವರಣ ಇಲ್ಲ. ಪೂರ್ವ ಮತ್ತು ದಕ್ಷಿಣದಲ್ಲಿ ಅದಕ್ಕೆ ಗಮನಾರ್ಹ ಲಾಭ ತಂದುಕೊಡುವ ಪರಿಸ್ಥಿತಿ ಇಲ್ಲವೇ ಇಲ್ಲ.
ಅಂತಿಮವಾಗಿ ಉತ್ತರಪ್ರದೇಶದ ನಷ್ಟ ಅಂದರೆ, ಅಧಿಕಾರದ ನಷ್ಟವೆಂದೇ ಅರ್ಥ.

ಇದನ್ನು ಓದಿ: ಡಾಟಾ ಅನಾಲಿಕಲ್ ವರದಿ ಹೇಳುತ್ತಿವೆ ಬಿಜೆಪಿಗೆ ಸೋಲು ಖಚಿತ

ಮಮತಾ ಮುಂದೆ ಮಂಡಿಯೂರಿತೇ?
ಪೂರ್ವ ಭಾರತದ ಪ್ರಮುಖ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಈ ಸಲ ಪುಶ್ ಪಡೆಯಲಿದೆ ಎನ್ನುವ ಲೆಕ್ಕಾಚಾರಗಳೂ ಉಲ್ಟಾ ಆಗತೊಡಗಿವೆ. ಇಲ್ಲಿ ಒಟ್ಟು 42 ಸೀಟುಗಳಿದ್ದು 2014ರಲ್ಲಿ ಬಿಜೆಪಿ 2 ಸೀಟು ಗೆದ್ದಿತ್ತು. ಈ ಸಲ 8 ಗೆಲ್ಲಲಿದೆ ಎಂಬ ಲೆಕ್ಕಾಚಾರವನ್ನು ಮಮತಾ ದೀದಿ ಹೊಡೆದು ಹಾಕಿದ್ದಾರೆ. ಇಲ್ಲಿ ಬಿಜೆಪಿ ತನ್ನ ಸಂಖ್ಯೆಯನ್ನು 2ರಿಂದ 6ಕ್ಕೆ ಹೆಚ್ಚಿಸಕೊಳ್ಳಬಹುದು. ಅಂದರೆ 4 ಸೀಟು ಲಾಭ. ಇನ್ನೊಂದು ಲೆಕ್ಕದಲ್ಲಿ ಅದು 2ರಿಂದ ಒಂದಕ್ಕೂ ಕುಸಿಯಬಹುದು….

75 ಸೀಟು ಕೊರತೆಯೇ ಹೊಡೆತ!
ಉತ್ತರದಲ್ಲಿ ಬಿಜೆಪಿಗೆ ಕಳೆದ ಸಲಕ್ಕಿಂತ ಈ ಸಲ 75 ಸೀಟು ಕಡಿಮೆ ಬರಲಿವೆ. ಇದನ್ನು ತುಂಬಿಕೊಂಡರಷ್ಟೇ ಅದು ಮೊದಲಿನ ಸ್ಥಾನಕ್ಕೆ ಬರಬಹುದು. ಎಲ್ಲಿಂದ ತುಂಬಿಕೊಳ್ಳಲಿದೆ? ಪಶ್ಚಿಮದಲ್ಲಿಯಾ? ಅಷ್ಟು ಸುಲಭವಲ್ಲ… ದಕ್ಷಿಣದಲ್ಲಿ? ಬಿಜೆಪಿಗೇ ಗೊತ್ತಿರುವಂತೆ ಇದೂ ಅಸಾಧ್ಯ….
(ಆಧಾರ: ದೀಪಂಕರ್ ಬಸು ಮತ್ತು ತಂಡ, ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...