Homeಮುಖಪುಟಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ...

ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.

- Advertisement -
- Advertisement -

ಆಹಾರ ಸರಬರಾಜು ಕಂಪನಿ ಜೊಮ್ಯಾಟೊದ ಹೃತಿಕ್ ರೋಷನ್ ಮತ್ತು ಕತ್ರಿನಾ ಕೈಫ್‌ರವರಿರುವ ಹೊಸ ಜಾಹೀರಾತಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇದಕ್ಕೆ ಜೊಮ್ಯಾಟೊ ಪ್ರತಿಕ್ರಿಯಿಸಿದ್ದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಜೊಮ್ಯಾಟೊ ಇತ್ತೀಚೆಗೆ ಎರಡು ಜಾಹೀರಾತುಗಳನ್ನು ಯುಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿತ್ತು. ಒಂದರಲ್ಲಿ ಜೊಮ್ಯಾಟೋ ಡೆಲಿವೆರಿ ಪಾರ್ಟ್ನರ್ ಮನೆಯೊಂದರ ಕಾಲಿಂಗ್ ಬೆಲ್ ಒತ್ತಿದಾಗ ಆಶ್ಚರ್ಯ ಕಾದಿರುತ್ತೆ. ಏಕೆಂದರೆ ಬಾಗಿಲು ತೆಗೆದವರು ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಆಗಿರುತ್ತಾರೆ. ಡೆಲಿವೆರಿ ಪಾರ್ಟ್ನರ್ ಸರ್ ನೀವು ಎಂದರೆ, ಹೃತಿಕ್ ‘ಹಾಯ್ ಜಾದೂ’ ಎಂದು ಕರೆಯುತ್ತಾರೆ. ಎಂಥದ್ದೆ ಸಂದರ್ಭದಲ್ಲಿಯೂ ಸಮಯಕ್ಕೆ ಸರಿಯಾಗಿ ಊಟ ತಲುಪಿಸುವ ನೀವು ಯಾವ ಜಾದೂಗಿಂತ ಕಡಿಮೆ ಇಲ್ಲ. ನಿಮ್ಮೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು. ಒಂದು ಗಳಿಗೆ ಬಂದೆ ಇರಿ ಎಂದು ಫೋನ್ ತರಲು ಹೃತಿಕ್ ಮನೆಯೊಳಕ್ಕೆ ಹೋಗುತ್ತಾರೆ. ಇತ್ತ ಡೆಲಿವೆರಿ ಪಾರ್ಟ್ನರ್ ಬಹಳ ಖುಷಿಯಿಂದ ಹೆಲ್ಮೆಟ್ ತೆಗೆದು ತಲೆಗೂದಲೂ ಸರಿಮಾಡಿಕೊಳ್ಳುತ್ತಿರಬೇಕಾದರೆ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಸೆಲ್ಫಿಗಿಂತ ಆರ್ಡರ್ ಅನ್ನು ಸರಿಯಾದ ಸಮಯಕ್ಕೆ ತಲುಪಿಸುವುದೇ ಮುಖ್ಯ, ಎಲ್ಲಾ ಗ್ರಾಹಕರು ಸೂಪರ್ ಸ್ಟಾರ್ ಎಂದು ಸುರಿಯುತ್ತಿರುವ ಮಳೆಯಲ್ಲಿ ಹೆಲ್ಮೆಟ್ ಹಾಕಿಕೊಂಡು ಡೆಲಿವೆರಿ ಪಾರ್ಟ್ನರ್ ಹೊರಡುತ್ತಾರೆ. ಹೃತಿಕ್ ಮನೆ ಹೊರಗೆ ಬಂದು ಹುಡುಕಿದರೆ ಯಾರೂ ಇರುವುದಿಲ್ಲ.

ಮತ್ತೊಂದು ಜಾಹೀರಾತಿನಲ್ಲಿ ಬೆಲ್ ರಿಂಗಾದಾಗ ಬಾಗಿಲು ತೆಗೆದೆವರು ಕತ್ರಿನಾ ಕೈಫ್ ಆಗಿರುತ್ತಾರೆ. ನನ್ನ ಜನ್ಮದಿನದಂದು ನೀನು ಸರಿಯಾದ ಸಮಯಕ್ಕೆ ಬಂದಿದ್ದೀಯ ಥ್ಯಾಂಕ್ಯೂ. ನಿನಗೊಂದು ಕೇಕ್ ಕೊಡುತ್ತೇನೆ, ನಿಮಿಷ ತಾಳು ಎಂದು ಕತ್ರಿನಾ ಒಳಹೋಗುತ್ತಾರೆ. ಅಷ್ಟರಲ್ಲಿ ಡೆಲಿವರ್ ಪಾರ್ಟ್ನರ್‌ನ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಯಥಾ ಪ್ರಕಾರ ಗ್ರಾಹಕರು ಮುಖ್ಯ ಎಂದು ಕೇಕ್‌ಗೆ ಕಾಯದೆ ಆತ ಹೊರಡುತ್ತಾನೆ.

ಈ ಜಾಹೀರಾತು ಹೊರಬರುತ್ತಿದ್ದಂತೆ ಎರಡು ಆರ್ಡರ್‌ಗಳ ಮಧ್ಯೆ ಡೆಲಿವೆರಿ ಪಾರ್ಟ್ನರ್‌ಗಳಿಗೆ ಒಂದು ನಿಮಿಷದ ಬಿಡುವು ಸಹ ಇಲ್ಲವೇ? ಅಂದರೆ ಅವರನ್ನು ಕಂಪನಿ ಹೇಗೆ ನಡೆಸಿಕೊಳ್ಳುತ್ತಿದೆ? ಇಂತಹ ಜಾಹೀರಾತುಗಳಲ್ಲಿ ನಟಿಸಿರುವ ಹೃತಿಕ್, ಕತ್ರಿನಾರಂತಹ ನಟ-ನಟಿಯರಿಗೆ ಕೋಟ್ಯಾಂತರ ಸಂಭಾವನೆ ನೀಡುವುದನ್ನು ಬಿಟ್ಟು ಅದೇ ಹಣವನ್ನು ಡೆಲಿವೆರಿ ಪಾರ್ಟ್ನರ್‌ಗಳ ಕಲ್ಯಾಣಕ್ಕಾಗಿ ಬಳಸಿ ಎಂಬ ಟೀಕೆಗಳು ವ್ಯಕ್ತವಾಗಿವೆ.

ಟೀಕೆಗೆ ಪ್ರತಿಕ್ರಿಯಿಸಿದ ಜೊಮಾಟೊ, ಜಾಹೀರಾತುಗಳನ್ನು ಆರು ತಿಂಗಳ ಹಿಂದೆ ಪರಿಕಲ್ಪಿಸಲಾಗಿದೆ. ಈ ಜಾಹೀರಾತುಗಳ ಗುರಿಯು ಡೆಲಿವರಿ ಪಾರ್ಟ್ನರ್‌ಗಳನ್ನು ಜಾಹೀರಾತುಗಳ ನಾಯಕನನ್ನಾಗಿಸುವುದು, ನಾವು ಡೆಲಿವರಿ ಪಾಲುದಾರರೊಂದಿಗೆ ಗೌರವಯುತವಾಗಿ ಮಾತನಾಡಬೇಕು, ಡೆಲಿವರಿ ಪಾಲುದಾರನ ಕೆಲಸಕ್ಕೆ ಸಂಬಂಧಿಸಿದ ಘನತೆಯ ಮಟ್ಟವನ್ನು ಹೆಚ್ಚಿಸಬೇಕು ಮತ್ತು ಪ್ರತಿಯೊಬ್ಬ ಗ್ರಾಹಕರು ಸ್ಟಾರ್ ಎಂದು ಪುನರುಚ್ಚರಿಸಬೇಕು ಎಂದು ಕಂಪನಿ ಹೇಳಿದೆ.

“ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ವೇತನ ತಾರತಮ್ಯ, ಕೆಲಸದ ಅವಧಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ನಾವು ಕೆಲ ತಿಂಗಳ ಹಿಂದೆಯೇ ಈಡೇರಿಸಿದ್ದೇವೆ. ಅವರ ಕಲ್ಯಾಣಕ್ಕಾಗಿ ಕ್ರಮ ತೆಗೆದುಕೊಂಡಿದ್ದೇವೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.


ಇದನ್ನೂ ಓದಿ: ಕೊಡಗು: ಪಕ್ಕದ ಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...