Homeಮುಖಪುಟಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ...

ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.

- Advertisement -
- Advertisement -

ಆಹಾರ ಸರಬರಾಜು ಕಂಪನಿ ಜೊಮ್ಯಾಟೊದ ಹೃತಿಕ್ ರೋಷನ್ ಮತ್ತು ಕತ್ರಿನಾ ಕೈಫ್‌ರವರಿರುವ ಹೊಸ ಜಾಹೀರಾತಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಇದಕ್ಕೆ ಜೊಮ್ಯಾಟೊ ಪ್ರತಿಕ್ರಿಯಿಸಿದ್ದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಜೊಮ್ಯಾಟೊ ಇತ್ತೀಚೆಗೆ ಎರಡು ಜಾಹೀರಾತುಗಳನ್ನು ಯುಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿತ್ತು. ಒಂದರಲ್ಲಿ ಜೊಮ್ಯಾಟೋ ಡೆಲಿವೆರಿ ಪಾರ್ಟ್ನರ್ ಮನೆಯೊಂದರ ಕಾಲಿಂಗ್ ಬೆಲ್ ಒತ್ತಿದಾಗ ಆಶ್ಚರ್ಯ ಕಾದಿರುತ್ತೆ. ಏಕೆಂದರೆ ಬಾಗಿಲು ತೆಗೆದವರು ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಆಗಿರುತ್ತಾರೆ. ಡೆಲಿವೆರಿ ಪಾರ್ಟ್ನರ್ ಸರ್ ನೀವು ಎಂದರೆ, ಹೃತಿಕ್ ‘ಹಾಯ್ ಜಾದೂ’ ಎಂದು ಕರೆಯುತ್ತಾರೆ. ಎಂಥದ್ದೆ ಸಂದರ್ಭದಲ್ಲಿಯೂ ಸಮಯಕ್ಕೆ ಸರಿಯಾಗಿ ಊಟ ತಲುಪಿಸುವ ನೀವು ಯಾವ ಜಾದೂಗಿಂತ ಕಡಿಮೆ ಇಲ್ಲ. ನಿಮ್ಮೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು. ಒಂದು ಗಳಿಗೆ ಬಂದೆ ಇರಿ ಎಂದು ಫೋನ್ ತರಲು ಹೃತಿಕ್ ಮನೆಯೊಳಕ್ಕೆ ಹೋಗುತ್ತಾರೆ. ಇತ್ತ ಡೆಲಿವೆರಿ ಪಾರ್ಟ್ನರ್ ಬಹಳ ಖುಷಿಯಿಂದ ಹೆಲ್ಮೆಟ್ ತೆಗೆದು ತಲೆಗೂದಲೂ ಸರಿಮಾಡಿಕೊಳ್ಳುತ್ತಿರಬೇಕಾದರೆ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಸೆಲ್ಫಿಗಿಂತ ಆರ್ಡರ್ ಅನ್ನು ಸರಿಯಾದ ಸಮಯಕ್ಕೆ ತಲುಪಿಸುವುದೇ ಮುಖ್ಯ, ಎಲ್ಲಾ ಗ್ರಾಹಕರು ಸೂಪರ್ ಸ್ಟಾರ್ ಎಂದು ಸುರಿಯುತ್ತಿರುವ ಮಳೆಯಲ್ಲಿ ಹೆಲ್ಮೆಟ್ ಹಾಕಿಕೊಂಡು ಡೆಲಿವೆರಿ ಪಾರ್ಟ್ನರ್ ಹೊರಡುತ್ತಾರೆ. ಹೃತಿಕ್ ಮನೆ ಹೊರಗೆ ಬಂದು ಹುಡುಕಿದರೆ ಯಾರೂ ಇರುವುದಿಲ್ಲ.

ಮತ್ತೊಂದು ಜಾಹೀರಾತಿನಲ್ಲಿ ಬೆಲ್ ರಿಂಗಾದಾಗ ಬಾಗಿಲು ತೆಗೆದೆವರು ಕತ್ರಿನಾ ಕೈಫ್ ಆಗಿರುತ್ತಾರೆ. ನನ್ನ ಜನ್ಮದಿನದಂದು ನೀನು ಸರಿಯಾದ ಸಮಯಕ್ಕೆ ಬಂದಿದ್ದೀಯ ಥ್ಯಾಂಕ್ಯೂ. ನಿನಗೊಂದು ಕೇಕ್ ಕೊಡುತ್ತೇನೆ, ನಿಮಿಷ ತಾಳು ಎಂದು ಕತ್ರಿನಾ ಒಳಹೋಗುತ್ತಾರೆ. ಅಷ್ಟರಲ್ಲಿ ಡೆಲಿವರ್ ಪಾರ್ಟ್ನರ್‌ನ ಮತ್ತೊಂದು ಆರ್ಡರ್‌ನ ನೋಟಿಫಿಕೇಶನ್ ಸೌಂಡ್‌ ಕೇಳಿಸುತ್ತೆ.. ಯಥಾ ಪ್ರಕಾರ ಗ್ರಾಹಕರು ಮುಖ್ಯ ಎಂದು ಕೇಕ್‌ಗೆ ಕಾಯದೆ ಆತ ಹೊರಡುತ್ತಾನೆ.

ಈ ಜಾಹೀರಾತು ಹೊರಬರುತ್ತಿದ್ದಂತೆ ಎರಡು ಆರ್ಡರ್‌ಗಳ ಮಧ್ಯೆ ಡೆಲಿವೆರಿ ಪಾರ್ಟ್ನರ್‌ಗಳಿಗೆ ಒಂದು ನಿಮಿಷದ ಬಿಡುವು ಸಹ ಇಲ್ಲವೇ? ಅಂದರೆ ಅವರನ್ನು ಕಂಪನಿ ಹೇಗೆ ನಡೆಸಿಕೊಳ್ಳುತ್ತಿದೆ? ಇಂತಹ ಜಾಹೀರಾತುಗಳಲ್ಲಿ ನಟಿಸಿರುವ ಹೃತಿಕ್, ಕತ್ರಿನಾರಂತಹ ನಟ-ನಟಿಯರಿಗೆ ಕೋಟ್ಯಾಂತರ ಸಂಭಾವನೆ ನೀಡುವುದನ್ನು ಬಿಟ್ಟು ಅದೇ ಹಣವನ್ನು ಡೆಲಿವೆರಿ ಪಾರ್ಟ್ನರ್‌ಗಳ ಕಲ್ಯಾಣಕ್ಕಾಗಿ ಬಳಸಿ ಎಂಬ ಟೀಕೆಗಳು ವ್ಯಕ್ತವಾಗಿವೆ.

ಟೀಕೆಗೆ ಪ್ರತಿಕ್ರಿಯಿಸಿದ ಜೊಮಾಟೊ, ಜಾಹೀರಾತುಗಳನ್ನು ಆರು ತಿಂಗಳ ಹಿಂದೆ ಪರಿಕಲ್ಪಿಸಲಾಗಿದೆ. ಈ ಜಾಹೀರಾತುಗಳ ಗುರಿಯು ಡೆಲಿವರಿ ಪಾರ್ಟ್ನರ್‌ಗಳನ್ನು ಜಾಹೀರಾತುಗಳ ನಾಯಕನನ್ನಾಗಿಸುವುದು, ನಾವು ಡೆಲಿವರಿ ಪಾಲುದಾರರೊಂದಿಗೆ ಗೌರವಯುತವಾಗಿ ಮಾತನಾಡಬೇಕು, ಡೆಲಿವರಿ ಪಾಲುದಾರನ ಕೆಲಸಕ್ಕೆ ಸಂಬಂಧಿಸಿದ ಘನತೆಯ ಮಟ್ಟವನ್ನು ಹೆಚ್ಚಿಸಬೇಕು ಮತ್ತು ಪ್ರತಿಯೊಬ್ಬ ಗ್ರಾಹಕರು ಸ್ಟಾರ್ ಎಂದು ಪುನರುಚ್ಚರಿಸಬೇಕು ಎಂದು ಕಂಪನಿ ಹೇಳಿದೆ.

“ನಮ್ಮ ಜಾಹೀರಾತುಗಳು ಒಳ್ಳೆಯ ಉದ್ದೇಶವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ, ಆದರೆ ದುರದೃಷ್ಟವಶಾತ್ ಕೆಲವು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ವೇತನ ತಾರತಮ್ಯ, ಕೆಲಸದ ಅವಧಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ನಾವು ಕೆಲ ತಿಂಗಳ ಹಿಂದೆಯೇ ಈಡೇರಿಸಿದ್ದೇವೆ. ಅವರ ಕಲ್ಯಾಣಕ್ಕಾಗಿ ಕ್ರಮ ತೆಗೆದುಕೊಂಡಿದ್ದೇವೆ ಎಂದು ಜೊಮ್ಯಾಟೊ ಪ್ರತಿಕ್ರಿಯಿಸಿದೆ.


ಇದನ್ನೂ ಓದಿ: ಕೊಡಗು: ಪಕ್ಕದ ಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...