Homeಮುಖಪುಟಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

- Advertisement -
- Advertisement -

ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವ ಜನರಿಗೆ ರಾಜ್ಯ ಸರ್ಕಾರವು ಸಾಂಸ್ಥಿಕ ಕ್ವಾರಂಟೈನ್‌ ಅನ್ನು ಕಡ್ಡಾಯಗೊಳಿಸಿದೆ. ಕೇರಳದ ಪ್ರಯಾಣಿಕರು ಅಲ್ಲಿ ಒಂದು ವಾರದವರೆಗೆ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಮಂಗಳವಾರ ಹೇಳಿದ್ದಾರೆ.

ಲಸಿಕೆ ಹಾಕಿದ ಮತ್ತು ಆರ್‌ಟಿ-ಪಿಸಿಆರ್ ನಗೆಟಿವ್‌‌ ಪರೀಕ್ಷಾ ವರದಿಯನ್ನು ಹೊಂದಿರುವವರಿಗೂ ಈ ನಿಯಮ ಅನ್ವಯವಾಗುತ್ತದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಬೃಹತ್ ಪಾದಯಾತ್ರೆ ಆರಂಭಿಸಿದ ಬಿಜೆಪಿ: ಕೋವಿಡ್ ಉಲ್ಬಣದ ಆತಂಕ!

ಕೇರಳದಿಂದ ವಿಮಾನದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ. ಸಾಂಸ್ಥಿಕ ಕ್ವಾರಂಟೈನ್‌‌ಗೆ ಗೊತ್ತುಪಡಿಸಲಾಗಿರುವ ತಮ್ಮ ಆಯ್ಕೆಯ ಹೋಟೆಲ್ ಅನ್ನು ಈ ಪ್ರಯಾಣಿಕರು ಆಯ್ಕೆ ಮಾಡಿಕೊಳ್ಳಬಹುದು ಎಂದು ಸುಧಾಕರ್ ಹೇಳಿದ್ದಾರೆ.

ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡುವ ಇಂತಹ ಪ್ರಯಾಣಿಕರನ್ನು ಆರನೇ ದಿನದಂದು ಪರೀಕ್ಷಿಸಲಾಗುತ್ತದೆ ಮತ್ತು ಏಳನೇ ದಿನದಲ್ಲಿ ಕೊರೊನಾ ವರದಿ ನಗೆಟಿವ್‌‌ ಬಂದರೆ, ಅವರನ್ನು ಹೋಗಲು ಅನುಮತಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾ ಪ್ರಕರಣಗಳ ಏರಿಕೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಕೇರಳದಲ್ಲಿ 19,622 ಹೊಸ ಪ್ರಕರಣಗಳು ಮತ್ತು 132 ಕೊರೊನಾ ಸಾವುಗಳು ದಾಖಲಾಗಿವೆ. ಭಾನುವಾರದಂದು ಅಲ್ಲಿ 29,836 ಹೊಸ ಪ್ರಕರಣಗಳು ಮತ್ತು 75 ಸಂಬಂಧಿತ ಸಾವುಗಳು ದಾಖಲಾಗಿದ್ದವು.

ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

ರಾಜ್ಯ ಸರ್ಕಾರವು ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರದಂತಹ ಕೇರಳದ ಗಡಿ ಜಿಲ್ಲೆಗಳಲ್ಲಿ ಕೊರೊನಾ ತಡೆಗಟ್ಟುವಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ತಜ್ಞರೊಂದಿಗೆ ಸಮಾಲೋಚಿಸಿ ಕಾರ್ಯತಂತ್ರ ರೂಪಿಸುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕೊರೊನಾ ಹರಡುವುದನ್ನು ನಿಯಂತ್ರಿಸಲು ಗಡಿ ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಮುಂಬರುವ ಗಣೇಶ ಹಬ್ಬದ ಸಮಯದಲ್ಲಿ ಕೊರೊನಾ ಸಂಬಂಧಿತ ನಿರ್ಬಂಧಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, “ಆ ಸಮಯದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಹೆಚ್ಚಾಗಿದೆ. ಯಾವುದೇ ಸಾರ್ವಜನಿಕ ಸಮಾರಂಭಗಳು ನಡೆಯದಂತೆ ಆರೋಗ್ಯ ಇಲಾಖೆಯು ಒತ್ತಾಯಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...