Homeಮುಖಪುಟ‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ - BJP ಗೆ ತಿರುಗೇಟು ನೀಡಿದ...

‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ – BJP ಗೆ ತಿರುಗೇಟು ನೀಡಿದ ಉದ್ದವ್‌ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಮೂರನೆ ಅಲೆಯ ಆತಂಕದ ನಡುವೆ, ಬಿಜೆಪಿ ಮತ್ತು ರಾಜ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ, ‘‘ದೇವಸ್ಥಾನಗಳನ್ನು ಪುನಃ ತೆರೆಯುವಂತೆ ಮತ್ತು ‘ದಹಿ ಹಂಡಿ’ ಉತ್ಸವ”ಗಳಿಗೆ ಅನುಮತಿ ನೀಡುವಂತೆ ಅಭಿಯಾನ ನಡೆಸುತ್ತಿದೆ. ಇದರ ವಿರುದ್ದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದು, ‘‘ನಾವು ಹಿಂದೂ ವಿರೋಧಿಗಳಲ್ಲ, ಕೊರೊನಾ ವಿರೋಧಿಗಳು” ಎಂದು ಹೇಳಿದ್ದಾರೆ.

“ಇದು ಸ್ವಾತಂತ್ರ್ಯ ಹೋರಾಟವಲ್ಲ … ಕೆಲವರು ದಹಿ ಹಂಡಿ ಉತ್ಸವಗಳನ್ನು ಸಂಘಟಿಸಿ ಹೀರೋಗಳಾಗಲು ಪ್ರಯತ್ನಿಸುತ್ತಿದ್ದಾರೆ. ನೀವು ಹೋರಾಡಲು ಬಯಸಿದರೆ, ಕೊರೊನಾ ವಿರುದ್ಧ ಹೋರಾಡಿ” ಎಂದು ಉದ್ದವ್‌ ಠಾಕ್ರೆ ಮಂಗಳವಾರ ಥಾಣೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕದ ಆನ್‌ಲೈನ್‌ ಉದ್ಘಾಟನಾ ಸಮಾರಂಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

“ಅವರು ನಮ್ಮನ್ನು ‘ಹಿಂದೂ ವಿರೋಧಿ ಸರ್ಕಾರ’ ಎಂದು ಕರೆಯುತ್ತಾರೆ…ಇದು ಮುಂದುವರೆಯಬಾರದು. ನಾನು ಅವರಿಗೆ ಒಕ್ಕೂಟ ಸರ್ಕಾರದ ಪತ್ರವನ್ನು ತೋರಿಸಲು ಬಯಸುತ್ತೇನೆ. ಪತ್ರದಲ್ಲಿ ಅವರು ದಹಿ ಹಂಡಿ ಮತ್ತು ಗಣೇಶ ಉತ್ಸವದ ಸಮಯದಲ್ಲಿ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಹೇಳಿದ್ದಾರೆ… ಹಾಗಾದರೆ ಅವರು ಯಾರು” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರ ಕೊರೊನಾ ವಿರೋಧಿಯೆ ಹೊರತು, ಯಾವುದೇ ಧರ್ಮದ ವಿರೋಧಿಯಲ್ಲ. ಅದಕ್ಕಾಗಿಯೇ, ಹೋರಾಟ ಮಾಡಲು ಬಯಸುವವರು ವೈರಸ್ ವಿರುದ್ಧ ಹೋರಾಡಿ ನಾನು ಹೇಳಲು ಬಯಸುತ್ತೇವೆ… ಆಮ್ಲಜನಕ ಉತ್ಪಾದನಾ ಘಟಕ ಹೆಚ್ಚಿಸುವ ಬಗ್ಗೆ ಖಚಿತಪಡಿಸುತ್ತೇನೆ. ಆದರೆ ಬಿಜೆಪಿಗೆ ಇವುಗಳ ಬಗ್ಗೆ ಇಚ್ಛೆಯಾಗಲಿ ಅಥವಾ ಉದ್ದೇಶವಾಗಲಿ ಇಲ್ಲ, ಅವರು ಬೀದಿಗಿಳಿದು ಗೊಂದಲ ಸೃಷ್ಟಿಸಲು ಮಾತ್ರ ಬಯಸುತ್ತಾರೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

‘ಕನ್ನಡಿಗರು ನಿಮ್ಮ ಗುಲಾಮರಲ್ಲ, ಸ್ವಾಭಿಮಾನಿಗಳು’- ಹಿಂದಿ ಬ್ಯಾನರ್‌ಗೆ ಮಸಿ ಬಳಿದ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ 

ಒಂದು ದಿನದ ಹಿಂದಯಷ್ಟೇ, ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ತಮ್ಮ ಪಕ್ಷದ ಕಾರ್ಯಕರ್ತರಿಗೆ ಕೋವಿಡ್‌‌ ನಿರ್ಬಂಧಗಳನ್ನು ಧಿಕ್ಕರಿಸಿ ಉತ್ಸವಗಳನ್ನು ಆಚರಿಸಲು ನಿರ್ದೇಶನ ನೀಡಿದ್ದಾರೆ.

ಸೋಮವಾರದಂದು, ಬೀದಿಗಿಳಿದು ಹೋರಾಟ ಮಾಡಿದ್ದ ಬಿಜೆಪಿ ದೇವಸ್ಥಾನಗಳನ್ನು ಪುನಃ ತೆರೆಯಬೇಕು ಮತ್ತು ದಹಿ ಹಂಡಿ ಉತ್ಸವಗಳನ್ನು ಆಚರಿಸಲು ಅನುಮತಿಸಬೇಕು ಎಂದು ಒತ್ತಾಯಿಸಿದೆ. ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ದಹಿ ಹಂಡಿ ಆಯೋಜಿಸುವಲ್ಲಿ ನಿರತರಾಗಿದ್ದ ನವನಿರ್ಮಾಣ ಸೇನೆಯ ನಾಯಕ ಬಾಲ ನಂದಗಾಂವ್ಕರ್ ಅವರನ್ನು ಸೆಂಟ್ರಲ್ ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ನಿರ್ದಿಷ್ಟವಾಗಿ ಈ ಸಮಯದಲ್ಲಿ, ದಹಿ ಹಂಡಿ ಮತ್ತು ಗಣಪತಿ ಹಬ್ಬಗಳನ್ನು ಒಳಗೊಂಡಂತೆ ನಿರ್ಬಂಧಗಳನ್ನು ಜಾರಿಗೊಳಿಸಬೇಕು ಎಂದು ಸಲಹೆ ನೀಡಿದ್ದರು.

ಸಾಂಕ್ರಮಿಕವನ್ನು ಅನ್ನು ನಿಯಂತ್ರಣಕ್ಕೆ ತರುವವರೆಗೂ ಮಹಾರಾಷ್ಟ್ರ ಭಾರತದ ಕೊರೊನಾದ ಕೇಂದ್ರಬಿಂದುವಾಗಿತ್ತು. ರಾಜ್ಯದಲ್ಲಿ ಸುಮಾರು 55,000 ಸಕ್ರಿಯ ಕೊರೊನಾ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ಕೊರೊನಾ ಮೂರನೆಯ ಅಲೆ ಅಪ್ಪಳಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡುವುದರೊಂದಿಗೆ, ರಾಜ್ಯದಲ್ಲಿ ಮತ್ತೊಮ್ಮೆ ಆತಂಕ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಪತ್ರ ಬರೆದಿತ್ತು. ಪ್ರಸ್ತುತ ದೇಶದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣವಿರುವ ಕೇರಳದಲ್ಲಿ ಹಬ್ಬಗಳ ಆಚರಣೆಯ ನಂತರ ಏರಿಕೆ ಕಂಡಿತ್ತು.

ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿನ ‘ಅದಾನಿ ಏರ್‌ಪೋರ್ಟ್’ ಬೋರ್ಡ್‌ಗಳನ್ನು ಕಿತ್ತೆಸೆದ ಶಿವಸೇನೆ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...