Homeಮುಖಪುಟ‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ - BJP ಗೆ ತಿರುಗೇಟು ನೀಡಿದ...

‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ – BJP ಗೆ ತಿರುಗೇಟು ನೀಡಿದ ಉದ್ದವ್‌ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಮೂರನೆ ಅಲೆಯ ಆತಂಕದ ನಡುವೆ, ಬಿಜೆಪಿ ಮತ್ತು ರಾಜ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ, ‘‘ದೇವಸ್ಥಾನಗಳನ್ನು ಪುನಃ ತೆರೆಯುವಂತೆ ಮತ್ತು ‘ದಹಿ ಹಂಡಿ’ ಉತ್ಸವ”ಗಳಿಗೆ ಅನುಮತಿ ನೀಡುವಂತೆ ಅಭಿಯಾನ ನಡೆಸುತ್ತಿದೆ. ಇದರ ವಿರುದ್ದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದು, ‘‘ನಾವು ಹಿಂದೂ ವಿರೋಧಿಗಳಲ್ಲ, ಕೊರೊನಾ ವಿರೋಧಿಗಳು” ಎಂದು ಹೇಳಿದ್ದಾರೆ.

“ಇದು ಸ್ವಾತಂತ್ರ್ಯ ಹೋರಾಟವಲ್ಲ … ಕೆಲವರು ದಹಿ ಹಂಡಿ ಉತ್ಸವಗಳನ್ನು ಸಂಘಟಿಸಿ ಹೀರೋಗಳಾಗಲು ಪ್ರಯತ್ನಿಸುತ್ತಿದ್ದಾರೆ. ನೀವು ಹೋರಾಡಲು ಬಯಸಿದರೆ, ಕೊರೊನಾ ವಿರುದ್ಧ ಹೋರಾಡಿ” ಎಂದು ಉದ್ದವ್‌ ಠಾಕ್ರೆ ಮಂಗಳವಾರ ಥಾಣೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕದ ಆನ್‌ಲೈನ್‌ ಉದ್ಘಾಟನಾ ಸಮಾರಂಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

“ಅವರು ನಮ್ಮನ್ನು ‘ಹಿಂದೂ ವಿರೋಧಿ ಸರ್ಕಾರ’ ಎಂದು ಕರೆಯುತ್ತಾರೆ…ಇದು ಮುಂದುವರೆಯಬಾರದು. ನಾನು ಅವರಿಗೆ ಒಕ್ಕೂಟ ಸರ್ಕಾರದ ಪತ್ರವನ್ನು ತೋರಿಸಲು ಬಯಸುತ್ತೇನೆ. ಪತ್ರದಲ್ಲಿ ಅವರು ದಹಿ ಹಂಡಿ ಮತ್ತು ಗಣೇಶ ಉತ್ಸವದ ಸಮಯದಲ್ಲಿ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಹೇಳಿದ್ದಾರೆ… ಹಾಗಾದರೆ ಅವರು ಯಾರು” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರ ಕೊರೊನಾ ವಿರೋಧಿಯೆ ಹೊರತು, ಯಾವುದೇ ಧರ್ಮದ ವಿರೋಧಿಯಲ್ಲ. ಅದಕ್ಕಾಗಿಯೇ, ಹೋರಾಟ ಮಾಡಲು ಬಯಸುವವರು ವೈರಸ್ ವಿರುದ್ಧ ಹೋರಾಡಿ ನಾನು ಹೇಳಲು ಬಯಸುತ್ತೇವೆ… ಆಮ್ಲಜನಕ ಉತ್ಪಾದನಾ ಘಟಕ ಹೆಚ್ಚಿಸುವ ಬಗ್ಗೆ ಖಚಿತಪಡಿಸುತ್ತೇನೆ. ಆದರೆ ಬಿಜೆಪಿಗೆ ಇವುಗಳ ಬಗ್ಗೆ ಇಚ್ಛೆಯಾಗಲಿ ಅಥವಾ ಉದ್ದೇಶವಾಗಲಿ ಇಲ್ಲ, ಅವರು ಬೀದಿಗಿಳಿದು ಗೊಂದಲ ಸೃಷ್ಟಿಸಲು ಮಾತ್ರ ಬಯಸುತ್ತಾರೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

‘ಕನ್ನಡಿಗರು ನಿಮ್ಮ ಗುಲಾಮರಲ್ಲ, ಸ್ವಾಭಿಮಾನಿಗಳು’- ಹಿಂದಿ ಬ್ಯಾನರ್‌ಗೆ ಮಸಿ ಬಳಿದ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ 

ಒಂದು ದಿನದ ಹಿಂದಯಷ್ಟೇ, ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ತಮ್ಮ ಪಕ್ಷದ ಕಾರ್ಯಕರ್ತರಿಗೆ ಕೋವಿಡ್‌‌ ನಿರ್ಬಂಧಗಳನ್ನು ಧಿಕ್ಕರಿಸಿ ಉತ್ಸವಗಳನ್ನು ಆಚರಿಸಲು ನಿರ್ದೇಶನ ನೀಡಿದ್ದಾರೆ.

ಸೋಮವಾರದಂದು, ಬೀದಿಗಿಳಿದು ಹೋರಾಟ ಮಾಡಿದ್ದ ಬಿಜೆಪಿ ದೇವಸ್ಥಾನಗಳನ್ನು ಪುನಃ ತೆರೆಯಬೇಕು ಮತ್ತು ದಹಿ ಹಂಡಿ ಉತ್ಸವಗಳನ್ನು ಆಚರಿಸಲು ಅನುಮತಿಸಬೇಕು ಎಂದು ಒತ್ತಾಯಿಸಿದೆ. ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ದಹಿ ಹಂಡಿ ಆಯೋಜಿಸುವಲ್ಲಿ ನಿರತರಾಗಿದ್ದ ನವನಿರ್ಮಾಣ ಸೇನೆಯ ನಾಯಕ ಬಾಲ ನಂದಗಾಂವ್ಕರ್ ಅವರನ್ನು ಸೆಂಟ್ರಲ್ ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ನಿರ್ದಿಷ್ಟವಾಗಿ ಈ ಸಮಯದಲ್ಲಿ, ದಹಿ ಹಂಡಿ ಮತ್ತು ಗಣಪತಿ ಹಬ್ಬಗಳನ್ನು ಒಳಗೊಂಡಂತೆ ನಿರ್ಬಂಧಗಳನ್ನು ಜಾರಿಗೊಳಿಸಬೇಕು ಎಂದು ಸಲಹೆ ನೀಡಿದ್ದರು.

ಸಾಂಕ್ರಮಿಕವನ್ನು ಅನ್ನು ನಿಯಂತ್ರಣಕ್ಕೆ ತರುವವರೆಗೂ ಮಹಾರಾಷ್ಟ್ರ ಭಾರತದ ಕೊರೊನಾದ ಕೇಂದ್ರಬಿಂದುವಾಗಿತ್ತು. ರಾಜ್ಯದಲ್ಲಿ ಸುಮಾರು 55,000 ಸಕ್ರಿಯ ಕೊರೊನಾ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ಕೊರೊನಾ ಮೂರನೆಯ ಅಲೆ ಅಪ್ಪಳಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡುವುದರೊಂದಿಗೆ, ರಾಜ್ಯದಲ್ಲಿ ಮತ್ತೊಮ್ಮೆ ಆತಂಕ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಪತ್ರ ಬರೆದಿತ್ತು. ಪ್ರಸ್ತುತ ದೇಶದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣವಿರುವ ಕೇರಳದಲ್ಲಿ ಹಬ್ಬಗಳ ಆಚರಣೆಯ ನಂತರ ಏರಿಕೆ ಕಂಡಿತ್ತು.

ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿನ ‘ಅದಾನಿ ಏರ್‌ಪೋರ್ಟ್’ ಬೋರ್ಡ್‌ಗಳನ್ನು ಕಿತ್ತೆಸೆದ ಶಿವಸೇನೆ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...