Homeಮುಖಪುಟಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

ಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

- Advertisement -
- Advertisement -

ಕೊರೊನಾದಿಂದಾಗಿ ಬಂದ್‌ ಆಗಿದ್ದ ದೆಹಲಿಯ ಶಾಲೆಗಳು ಸುಮಾರು 1.5 ವರ್ಷಗಳ ನಂತರ ಕಟ್ಟುನಿಟ್ಟಾದ ಸುರಕ್ಷತಾ ಪ್ರೋಟೋಕಾಲ್ ನಡುವೆ ಬುಧವಾರ(ಇಂದು)ದಿಂದ ತೆರೆಯುತ್ತಿದೆ. ಆದರೆ 9-12 ತರಗತಿಳಿಗೆ ಮಾತ್ರ ದೆಹಲಿ ಸರ್ಕಾರ ಅನುಮತಿ ನೀಡಿದೆ. ಶಾಲೆಗಳನ್ನು ಮತ್ತೆ ತೆರೆಯುವ ನಿರ್ಧಾರವನ್ನು ಇನ್ನು ಮುಂದೆ ವಿಳಂಬ ಮಾಡಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

“ಒಂದು ವೇಳೆ ಇನ್ನೂ ವಿಳಂಬ ಮಾಡಿದರೆ ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ಪ್ರತಿಪಾದಿಸಿದ್ದಾರೆ. ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಕೋಚಿಂಗ್ ಸಂಸ್ಥೆಗಳು ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ಮತ್ತೆ ತೆರೆಯಲಾಗುತ್ತಿದೆ.

ಶಿಕ್ಷಕರಿಗೆ ವ್ಯಾಕ್ಸಿನೇಷನ್, ತರಗತಿಗಳಲ್ಲಿ 50% ರಷ್ಟು ಆಸನ ಸಾಮರ್ಥ್ಯ, ತೆರೆದ ಪ್ರದೇಶದಲ್ಲಿ ಊಟದ ವಿರಾಮಗಳು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ಹೇಳಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ಸುಪ್ರೀಂ

“ಕಳೆದ 1.5 ವರ್ಷಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸಿದ್ದಾರೆ. ನಾವೆಲ್ಲರೂ ಅವರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದೇವೆ … ಜೊತೆಗೆ ಅವರ ಅಧ್ಯಯನದ ಬಗ್ಗೆಯು. ಶಾಲೆ ತೆರೆಯುವ ಬಗ್ಗೆ ನಾವು ಸಲಹೆಗಳನ್ನು ಕೇಳಿದಾಗ, 70% ದಷ್ಟು ಪೋಷಕರು ಶಾಲೆಗಳನ್ನು ತೆರೆಯಲು ಬಯಸಿದ್ದಾರೆ. ಹೆಚ್ಚಿನ ಪೋಷಕರು ಪ್ರೋಟೋಕಾಲ್ ಅನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ” ಎಂದು ಹೇಳಿದ್ದಾರೆ.

“ಚಿಕ್ಕ ಮಕ್ಕಳಿಗೆ ಕಡಿಮೆ ಅಪಾಯವಿರುವುದರಿಂದ ತಜ್ಞರು ಕೂಡಾ ಪ್ರಾಥಮಿಕ ಶಾಲೆಗಳನ್ನು ಪುನಃ ತೆರೆಯಬಹುದು ಎಂದು ಹೇಳಿದ್ದಾರೆ. ಆದ್ದರಿಂದ ನಾವು 9 ರಿಂದ 12 ನೇ ತರಗತಿಯ ಶಾಲೆಗಳನ್ನು ಆರಂಭಿಸಲು ಯೋಚಿಸಿದ್ದೇವೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ನಿರ್ಣಾಯಕ ವರ್ಷವನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ, ದೆಹಲಿ ಸರ್ಕಾರವು ಸೇತು ಬಂಧ ಕೋರ್ಸ್‌ಗಳನ್ನು ನಡೆಸಲು ಯೋಜಿಸಿದೆ. “ಸಾಂಕ್ರಾಮಿಕ ರೋಗವು ನಮ್ಮ ದಾರಿಯಲ್ಲಿ ಸಾಕಷ್ಟು ಸವಾಲುಗಳನ್ನು ಒಡ್ಡಿದೆ. ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಇದನ್ನು ಅಪಾಯಕಾರಿ ನಿರ್ಧಾರ ಎಂದು ಕರೆಯಬಹುದು, ಆದರೆ ವಿದ್ಯಾರ್ಥಿಗಳು ಅವರಿಗೆ ಬೇಕಾಗದ ಸಾಕಷ್ಟು ಸಂಪನ್ಮೂಲಗಳನ್ನು ಪಡೆಯಲು ಸಾಧ್ಯವಾಗದೆ ಅಪಾಯದಲ್ಲಿದ್ದಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಸ್ತುತ, ದೆಹಲಿಯಲ್ಲಿ ಪ್ರತಿದಿನ 30-35 ಕೊರೊನಾ ಪ್ರಕರಣಗಳು ವರದಿಯಾಗುತ್ತಿದೆ. ನಾವೀಗ ಮುಂದುವರೆಯಬೇಕು, ಈ ನಿರ್ಧಾರವು ಇನ್ನಷ್ಟು ವಿಳಂಬವಾದರೆ, ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...