Homeಮುಖಪುಟಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

ಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

- Advertisement -
- Advertisement -

ಕೊರೊನಾದಿಂದಾಗಿ ಬಂದ್‌ ಆಗಿದ್ದ ದೆಹಲಿಯ ಶಾಲೆಗಳು ಸುಮಾರು 1.5 ವರ್ಷಗಳ ನಂತರ ಕಟ್ಟುನಿಟ್ಟಾದ ಸುರಕ್ಷತಾ ಪ್ರೋಟೋಕಾಲ್ ನಡುವೆ ಬುಧವಾರ(ಇಂದು)ದಿಂದ ತೆರೆಯುತ್ತಿದೆ. ಆದರೆ 9-12 ತರಗತಿಳಿಗೆ ಮಾತ್ರ ದೆಹಲಿ ಸರ್ಕಾರ ಅನುಮತಿ ನೀಡಿದೆ. ಶಾಲೆಗಳನ್ನು ಮತ್ತೆ ತೆರೆಯುವ ನಿರ್ಧಾರವನ್ನು ಇನ್ನು ಮುಂದೆ ವಿಳಂಬ ಮಾಡಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

“ಒಂದು ವೇಳೆ ಇನ್ನೂ ವಿಳಂಬ ಮಾಡಿದರೆ ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ಪ್ರತಿಪಾದಿಸಿದ್ದಾರೆ. ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಕೋಚಿಂಗ್ ಸಂಸ್ಥೆಗಳು ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ಮತ್ತೆ ತೆರೆಯಲಾಗುತ್ತಿದೆ.

ಶಿಕ್ಷಕರಿಗೆ ವ್ಯಾಕ್ಸಿನೇಷನ್, ತರಗತಿಗಳಲ್ಲಿ 50% ರಷ್ಟು ಆಸನ ಸಾಮರ್ಥ್ಯ, ತೆರೆದ ಪ್ರದೇಶದಲ್ಲಿ ಊಟದ ವಿರಾಮಗಳು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ಹೇಳಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ಸುಪ್ರೀಂ

“ಕಳೆದ 1.5 ವರ್ಷಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸಿದ್ದಾರೆ. ನಾವೆಲ್ಲರೂ ಅವರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದೇವೆ … ಜೊತೆಗೆ ಅವರ ಅಧ್ಯಯನದ ಬಗ್ಗೆಯು. ಶಾಲೆ ತೆರೆಯುವ ಬಗ್ಗೆ ನಾವು ಸಲಹೆಗಳನ್ನು ಕೇಳಿದಾಗ, 70% ದಷ್ಟು ಪೋಷಕರು ಶಾಲೆಗಳನ್ನು ತೆರೆಯಲು ಬಯಸಿದ್ದಾರೆ. ಹೆಚ್ಚಿನ ಪೋಷಕರು ಪ್ರೋಟೋಕಾಲ್ ಅನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ” ಎಂದು ಹೇಳಿದ್ದಾರೆ.

“ಚಿಕ್ಕ ಮಕ್ಕಳಿಗೆ ಕಡಿಮೆ ಅಪಾಯವಿರುವುದರಿಂದ ತಜ್ಞರು ಕೂಡಾ ಪ್ರಾಥಮಿಕ ಶಾಲೆಗಳನ್ನು ಪುನಃ ತೆರೆಯಬಹುದು ಎಂದು ಹೇಳಿದ್ದಾರೆ. ಆದ್ದರಿಂದ ನಾವು 9 ರಿಂದ 12 ನೇ ತರಗತಿಯ ಶಾಲೆಗಳನ್ನು ಆರಂಭಿಸಲು ಯೋಚಿಸಿದ್ದೇವೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ನಿರ್ಣಾಯಕ ವರ್ಷವನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ, ದೆಹಲಿ ಸರ್ಕಾರವು ಸೇತು ಬಂಧ ಕೋರ್ಸ್‌ಗಳನ್ನು ನಡೆಸಲು ಯೋಜಿಸಿದೆ. “ಸಾಂಕ್ರಾಮಿಕ ರೋಗವು ನಮ್ಮ ದಾರಿಯಲ್ಲಿ ಸಾಕಷ್ಟು ಸವಾಲುಗಳನ್ನು ಒಡ್ಡಿದೆ. ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಇದನ್ನು ಅಪಾಯಕಾರಿ ನಿರ್ಧಾರ ಎಂದು ಕರೆಯಬಹುದು, ಆದರೆ ವಿದ್ಯಾರ್ಥಿಗಳು ಅವರಿಗೆ ಬೇಕಾಗದ ಸಾಕಷ್ಟು ಸಂಪನ್ಮೂಲಗಳನ್ನು ಪಡೆಯಲು ಸಾಧ್ಯವಾಗದೆ ಅಪಾಯದಲ್ಲಿದ್ದಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಸ್ತುತ, ದೆಹಲಿಯಲ್ಲಿ ಪ್ರತಿದಿನ 30-35 ಕೊರೊನಾ ಪ್ರಕರಣಗಳು ವರದಿಯಾಗುತ್ತಿದೆ. ನಾವೀಗ ಮುಂದುವರೆಯಬೇಕು, ಈ ನಿರ್ಧಾರವು ಇನ್ನಷ್ಟು ವಿಳಂಬವಾದರೆ, ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...