Homeಕರ್ನಾಟಕಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಕೊಳಚೆ ತೆಗೆಯುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ 14 ಯಂತ್ರೋಪಕರಣಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ.

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

2013ರ ಕಾನೂನಿನ ಅನ್ವಯ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಒದಗಿಸಿರುವ ಯಂತ್ರೋಪಕರಣಗಳ ವರದಿ ಸಲ್ಲಿಸಬೇಕು. ಕಾನೂನು ಪಾಲನೆ ಆಗಿಲ್ಲದಿದ್ದರೆ ಕಾರಣವನ್ನು ನೀಡಬೇಕು ಎಂದು ಜಸ್ಟೀಸ್‌ ಸತೀಶ್‌ ಚಂದ್ರ ಹಾಗೂ ಜಸ್ಟೀಸ್‌ ಸಚಿನ್‌ ಶಂಕರ್‌ ಮಗದುಮ್‌ ಇದ್ದ ವಿಭಾಗೀಯ ಪೀಠ ನಿರ್ದೇಶಿಸಿದೆ.

ರಾಜ್ಯದಲ್ಲಿ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ ಕಾನೂನು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಅಥಾರಿಟಿ ಹಾಗೂ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ (AICCTU) ಸಂಘಟನೆಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಅಕ್ಟೋಬರ್‌ 4ರಂದು ನಡೆಯುವ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಆದೇಶಿಸಿದೆ.

“ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಸಂಬಂಧ ಮೊದಲು ಕಾನೂನು ಬಂದಿದ್ದು 1993ರಲ್ಲಿ. ಹೊಸ ಕಾನೂನು 2013ರಲ್ಲಿ ಬಂದಿತು. ಇಷ್ಟಾದರೂ ಸಫಾಯಿಗಳ ಸರ್ವೇ ಕಾರ್ಯ ನಡೆದಿಲ್ಲ. ಸಫಾಯಿಗಳನ್ನು ಗುರುತಿಸದಿದ್ದಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದು. ಅವರು ಆರ್ಥಿಕ ದುಸ್ಥಿತಿಯಿಂದಾಗಿ ಒತ್ತಾಯಪೂರ್ವಕವಾಗಿ ಈ ಕೆಲಸವನ್ನು ಮಾಡುತ್ತಾರೆ. ಯಂತ್ರಗಳನ್ನು ಬಳಸುತ್ತಿದ್ದರೂ ಇವರನ್ನು ಕಟ್ಟಕಡೆಯ ಕಾರ್ಮಿಕರನ್ನಾಗಿ ನೋಡಲಾಗುತ್ತದೆ. ಅತ್ಯಂತ ಕೆಳವರ್ಗದವರು ಈ ಕೆಲಸದಲ್ಲಿ ತೊಡಗುವುದರಿಂದ ಅಧಿಕಾರ ವರ್ಗ ಎಷ್ಟರ ಮಟ್ಟಿಗೆ ಕಾನೂನು ಪಾಲನೆ ಮಾಡುತ್ತಿದೆ ಎಂಬ ಪ್ರಶ್ನೆಯೂ ಏಳುತ್ತದೆ” ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತೆ ಮತ್ತು AICCTU ಪದಾಧಿಕಾರಿ ಮೈತ್ರೇಯಿ ಕೃಷ್ಣನ್‌.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಎಫ್‌ಐಆರ್‌ ಆದರೂ ಮುಂದಿನ ಕ್ರಮಗಳು ಜರುಗುವುದಿಲ್ಲ. ಸಫಾಯಿ ಕಾರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ನಿರ್ದೇಶನಗಳನ್ನು ಹೈಕೋರ್ಟ್‌ ನೀಡಿದೆ. ಸಫಾಯಿಗಳ ಸಮೀಕ್ಷೆ ಹೇಗೆ ಮಾಡಬೇಕೆಂದೂ ತಿಳಿಸಲಾಗಿದೆ. ನಾವು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಹೊಸ ಹೊಸ ರೂಪದಲ್ಲಿ ಬರುತ್ತಿದೆ. ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಯಿತು. ಆದರೆ ಒಳಚರಂಡಿ ವ್ಯವಸ್ಥೆಯನ್ನು ನಿರ್ಲಕ್ಷಿಸಲಾಯಿತು. ಈ ಮೂಲಕ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಪ್ರೋತ್ಸಾಹಿಸಲಾಯಿತು. ಪೌರಕಾರ್ಮಿಕರನ್ನೂ ಸ್ಕ್ಯಾವೆಂಜಿಂಗ್‌ಗೆ ದೂಡಲಾಗುತ್ತಿದೆ. ಮಂಡ್ಯದಲ್ಲಿ ಒಬ್ಬರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಈಗ ಹೈಕೋರ್ಟ್ ಮ್ಯಾನುವಲ್ ಸ್ಕಾವೇಂಜಿಗ್ ನಿಷೇಧಿಸಿ, ಕಡ್ಡಾಯವಾಗಿ ಯಂತ್ರೋಪಕರಣಗಳನ್ನು ಬಳಸಬೇಕೆಂದು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯ ದಿನ ಕರ್ತವ್ಯಲೋಪ ಎಸಗಿರುವ ಜಿಲ್ಲಾಧಿಕಾರಿಗಳು ಖುದ್ದು ಹಾಜರಿರಬೇಕೆಂದು ಸೂಚಿಸಿದೆ. ಇನ್ನಾದರೂ ಸರ್ಕಾರಗಳು, ಸ್ಥಳೀಯ ಆಡಳಿತಗಳು ಈ ಕುರಿತು ಎಚ್ಚೆತ್ತುಕೊಳ್ಳಬೇಕಿದೆ. ಪ್ರತಿಯೊಬ್ಬ ಕಾರ್ಮಿಕನಿಗೂ ಘನತೆಯ ಜೀವನ ನಡೆಸಲು ಅವಕಾಶ ನೀಡಬೇಕು ಮತ್ತು ಅನ್ಯಾಯದ ಸಾವುಗಳನ್ನು ತಡೆಗಟ್ಟಬೇಕಿದೆ.


ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...