HomeಮುಖಪುಟLPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

- Advertisement -
- Advertisement -

ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್‌ಗೆ 25 ರೂಪಾಯಿಯಂತೆ ಹೆಚ್ಚಳ ಮಾಡಲಾಗಿದೆ. ಅಡುಗೆ ಅನಿಲದ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಅನ್ಯಾಯದ ವಿರುದ್ಧ ದೇಶವು ಒಗ್ಗೂಡುತ್ತಿದೆ ಎಂದು ಹೇಳಿದ್ದಾರೆ.

ಆಗಸ್ಟ್‌ 1 ರಂದು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಆಗಸ್ಟ್‌ 17ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 25ರೂ ಏರಿಕೆ ಮಾಡಲಾಗಿತ್ತು. ಅದಾದ ನಂತರ ಮತ್ತೆ ಸೆಪ್ಟೆಂಬರ್‌ 1ರಿಂದ ಜಾರಿಗೆ ಬರುವಂತೆ ಮತ್ತೆ 25 ರೂ ಹೆಚ್ಚಿಸಲಾಗಿದೆ.

ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು LPG ಬೆಲೆಗಳ ಏರಿಕೆಯ ವಿರುದ್ದ ಒಕ್ಕೂಟ ಸರ್ಕಾರದ ದಾಳಿ ಮಾಡುತ್ತಿದೆ. ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದುಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಪಕ್ಷವು ಒತ್ತಾಯಿಸುತ್ತಿದೆ.

ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಏರಿಕೆ!

“ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗುವಂತೆ ಒತ್ತಾಯಿಸುವವನು, ತಾನು ಸ್ನೇಹಿತರ ನೆರಳಿನ ಅಡಿಯಲ್ಲಿ ಮಲಗುತ್ತಿದ್ದಾನೆ. ಆದರೆ ದೇಶವು ಅನ್ಯಾಯದ ವಿರುದ್ಧ ಒಂದಾಗುತ್ತಿದೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್ ಬೆದರಿಕೆ

ಅಷ್ಟೆ ಅಲ್ಲದೆ, ‘ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಹ್ಯಾಶ್ ಟ್ಯಾಗ್‌‌ನೊಂದಿಗೆ ಈ ವರ್ಷದ ಜನವರಿಯಿಂದ ದೇಶದ ನಾಲ್ಕು ಮಹಾನಗರಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯ ಹೆಚ್ಚಳದ ಚಾರ್ಟ್ ಅನ್ನು ರಾಹುಲ್ ಗಾಂಧಿ ತನ್ನ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಇಂದಿನ ಬೆಲೆ ಏರಿಕೆಗೂ ಮೊದಲು, ಬೆಂಗಳೂರಿನಲ್ಲಿ 14.2 ಕೆ.ಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗೆ 862 ರೂ ನೀಡಲಾಗುತ್ತಿತ್ತು. ಇನ್ನು ಮುಂದೆ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 887ರೂ ಬೆಲೆ ತೆರಬೇಕಾಗಿದೆ. ಹದಿನೈದು ದಿನಗಳ ಅಂತದಲ್ಲಿ 50 ರೂ ಏರಿಕೆಯಾಗಿರುವುದು ಜನಸಾಮಾನ್ಯರ ಹೊರೆ ಹೆಚ್ಚಿಸಿದೆ. 2021ರ ಜನವರಿಯಿಂದ ಸೆಪ್ಟೆಂಬರ್‌ 1ರವರೆಗೆ ಅಡುಗೆ ಸಿಲಿಂಡರ್‌ ಬೆಲೆ ಒಟ್ಟು 190 ರೂ ಹೆಚ್ಚಳವಾಗಿದೆ.

ಕೇಂದ್ರ ಸರ್ಕಾರದ ಈ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಮಹಿಳಾ ಕಾಂಗ್ರೆಸ್ ಬೆಂಗಳೂರಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದೆ.

ಸಿಲಿಂಡರ್‌, ಅಡುಗೆ ಎಣ್ಣೆ, ದಿನಸಿ, ಪೆಟ್ರೋಲ್‌, ವಿದ್ಯುತ್‌… ಹೀಗೆ ದಿನನಿತ್ಯದ ಬದುಕಿನ ಅಗತ್ಯಗಳ ಬೆಲೆ ಏರಿಕೆಯಿಂದಾಗಿ ಜನರು ಹೈರಾಣರಾಗಿದ್ದಾರೆ. ಒಂದು ಕಡೆ ಕೋವಿಡ್‌ನಿಂದಾಗಿ ಸರಿಯಾಗಿ ಸಂಬಳ, ದಿನಗೂಲಿ ಇಲ್ಲದೇ ಮನೆಯಲ್ಲಿ ಇದ್ದದ್ದರಲ್ಲೇ ಒಂದೊತ್ತಿನ ಹೊಟ್ಟೆ ತುಂಬಿಸಿಕೊಂಡಿದ್ದ ಜನರ ಬದುಕಲ್ಲಂತೂ ಈ ಬೆಲೆ ಏರಿಕೆ ಸಾವು ನೋವಿನ ಪ್ರಶ್ನೆಯಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಹುಲ್ ಅವರ ಪ್ರತಿಭಟನಾ ಶೈಲಿ ಅತ್ಯದ್ಭುತ ವಾಗಿದೆ
    ಪ್ರತಿ ದಿವಸ twitter ನಲ್ಲಿ ಅವರು ಪಡುತ್ತಿರುವ ಕಷ್ಟ ಮನ ಕಲಕುವಂತಿದೆ.
    ಪಾಪ, ರಾಹುಲ್ ಅವರಿಗೆ ಕೆಲವು ವರ್ಷಗಳ ವಿಶ್ರಾಂತಿ ಕೊಡುವುದರ ಬಗ್ಗೆ ಸೋನಿಯಾ ಅವರು ಗಂಭೀರವಾಗಿ ಯೋಚಿಸಬೇಕು.

    ????????

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...