Homeಚಳವಳಿಬಂಡೀಪುರ ಅರಣ್ಯ ದಿನಗೂಲಿ ನೌಕರರ ಸ್ಥಳಾಂತರ ಆದೇಶ ವಾಪಸ್‌: ಎಸಿಎಫ್‌ ಹೇಳಿಕೆ

ಬಂಡೀಪುರ ಅರಣ್ಯ ದಿನಗೂಲಿ ನೌಕರರ ಸ್ಥಳಾಂತರ ಆದೇಶ ವಾಪಸ್‌: ಎಸಿಎಫ್‌ ಹೇಳಿಕೆ

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆಯ 205 ತಾತ್ಕಾಲಿಕ ದಿನಗೂಲಿ ನೌಕರರ ಸ್ಥಳಾಂತರ ವಿಚಾರ ಗಂಭೀರತೆ ಪಡೆದುಕೊಂಡಿದೆ. ಅರಣ್ಯ ಸಂರಕ್ಷಣಾಧಿಕಾರಿ ನಟೇಶ್ ನಿರ್ಧಾರಕ್ಕೆ ದಿನಗೂಲಿ ನೌಕರರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಹಾದಿ ಹಿಡಿದಾಗ ಸ್ಥಳಕ್ಕೆ ಆಗಮಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್‌, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಸ್ಥಳಾಂತರ ಆದೇಶವನ್ನು ವಾಪಸ್‌ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಇಎಸ್‌ಐ, ಪಿಎಫ್‌ ಸೌಲಭ್ಯ ಸೇರಿದಂತೆ ಕೆಲಸದ ಭದ್ರತೆ ವಿಚಾರವಾಗಿ ಮುಖಂಡರಾದ ನಾಗರಾಜ್‌ ನೇತೃತ್ವದಲ್ಲಿ ನೌಕರರು ಹಕ್ಕೊತ್ತಾಯ ಸಲ್ಲಿಸಿದ್ದರು. ಹಲವು ವರ್ಷ ದುಡಿದರೂ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ, ಬದಲಿಗೆ ಸ್ಥಳಾಂತರ ಮಾಡಿ ಕಿರುಕುಳ ನೀಡಲಾಗುತ್ತಿದೆ ಎಂಬುದು ಅಲ್ಲಿನ ನೌಕರರ ದೂರಾಗಿದೆ.

ಬೇಟೆ ನಿಗ್ರಹ ಶಿಬಿರ ವ್ಯಾಪ್ತಿಯಲ್ಲಿದ್ದವರನ್ನು ತೆಗೆದು ಬೇರೆಡೆಗೆ ಹಾಕಲಾಗಿತ್ತು. ಹತ್ತಿರವಾಗಿ ಸ್ಥಳಾಂತರ ಮಾಡಿದ್ದರೆ ಯೋಚಿಸಬೇಕಿರಲಿಲ್ಲ. ಇಡಿಯಾಲದಿಂದ ಬಂಡೀಪುರಕ್ಕೆ ಹಾಕುವುದು, ಬಂಡೀಪುರದಿಂದ ಗುಂಡ್ರೆಗೆ ಸ್ಥಳಾಂತರ ಮಾಡುವುದು ನಡೆದಿತ್ತು. ಅಂದರೆ 30ರಿಂದ 40ಕಿ.ಮೀ. ದೂರಕ್ಕೆ ಸ್ಥಳಾಂತರ ಮಾಡಲಾಗಿತ್ತು. ಅರಣ್ಯ ಸಂರಕ್ಷಣಾಧಿಕಾರಿ ನಟೇಶ್‌ ಅವರ ಈ ಕ್ರಮವನ್ನು ಖಂಡಿಸಿ ದಿನಗೂಲಿ ನೌಕರರು ಒಂದೆಡೆ ಸೇರಿ ಪ್ರತಿಭಟಿಸುತ್ತಿದ್ದರು.

ದಿನಗೂಲಿ ನೌಕರರು ಕೆಲಸಕ್ಕೆ ಹೋಗದಿದ್ದರೆ ಕಾಡು ಉಳಿಯುವುದಿಲ್ಲ. ಹೀಗಾಗಲೇ ವನ್ಯಜೀವಿಗಳನ್ನು ಬೇಟೆಯಾಡುತ್ತಿರುವ ಪ್ರಕರಣಗಳು ಬಂಡೀಪುರ ಅರಣ್ಯದಲ್ಲಿ ಹೆಚ್ಚಿವೆ. ಸರ್ಕಾರ ತುರ್ತಾಗಿ ಮಧ್ಯ ಪ್ರವೇಶಿಸಿ, ಪರಿಹಾರ ನೀಡಬೇಕು. ಅರಣ್ಯ ಸಂರಕ್ಷಣಾಧಿಕಾರಿ ನಟೇಶ್‌ ಅವರ ಮನವೊಲಿಸುವಿಕೆಯೂ ಒಪ್ಪಿತ ರೀತಿಯಲ್ಲಿ ನಡೆದಿಲ್ಲ ಎಂದು ವನ್ಯಜೀವಿ ತಜ್ಞ ಜೋಸೆಫ್ ಹೂವರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಅಕ್ಕದ ಪಕ್ಕದ ವಲಯಕ್ಕೆ ಹಾಕಿದರೆ ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಮೂವತ್ತು, ನಲವತ್ತು ಕಿ.ಮೀ. ದೂರಕ್ಕೆ ಸ್ಥಳಾಂತರಿಸಿದರೆ ಯಾರೂ ಒಪ್ಪಿಕೊಳ್ಳುವುದಿಲ್ಲ. ಇಂತಹ ಅಧಿಕಾರಿಗಳ ಧೋರಣೆಯಿಂದ ನಾವು ಒದ್ದಾಡಬೇಕಾಗುತ್ತದೆ. ಈಗಾಗಲೇ ಬಂಡೀಪುರದಲ್ಲಿ ಎರಡು ಮೂರು ಸಲ ಬೆಂಕಿ ಬಿದ್ದಿದೆ. ಇದು ಮುಂದುವರಿದರೆ ಅರಣ್ಯ ಇನ್ನಷ್ಟು ನಾಶವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದರು.

ಸದ್ಯಕ್ಕೆ ಸ್ಥಳಾಂತರ ನಿಲ್ಲಿಸಲಾಗುವುದು ಮತ್ತು ದಿನಗೂಲಿ ಕಾರ್ಮಿಕರಿಗೆ ಕೆಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್‌ ನಿರ್ಧಿರಿಸಿರುವುದು ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದಂತಾಗಿವೆ.


ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...