Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

- Advertisement -
- Advertisement -

‘ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರನ್ನು ಸೆರೆಹಿಡಿಯುತ್ತಿರುವ ಪೊಲೀಸ್ ಸಿಬ್ಬಂದಿಯ ಲೈವ್ ದೃಶ್ಯಾವಳಿ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ಕೆಲವು ಕಡೆಯಲ್ಲಿ ಇದೇ ವಿಡಿಯೋವನ್ನು, ‘ಉತ್ತರ ಪ್ರದೇಶ ಪೊಲೀಸರು ಗಾಜಿಯಾಬಾದ್‌ನಲ್ಲಿ ಕಳ್ಳನನ್ನು ಹಿಡಿಯುವ ದೃಶ್ಯಗಳು’ ಎಂದು ಹೇಳಿ ಶೇರ್‌ ಮಾಡಲಾಗುತ್ತಿದೆ.

ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿತ್ತು. ಈ ವರದಿಗಳ ನಡುವೆ, ಈ ವೈರಲ್‌ ವಿಡಿಯೊ ಮತ್ತು ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋ, ಬ್ರೆಜಿಲ್ ಪೊಲೀಸ್ ಸಿಬ್ಬಂದಿ 17 ವರ್ಷದ ಯುವ ಬೈಕ್ ಸವಾರನನ್ನು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಿರುವ ವಿಡಿಯೊವಾಗಿದೆ. ಈ ಘಟನೆ 2021 ಆಗಸ್ಟ್ 01 ರಂದು ಬ್ರೆಜಿಲ್‌ನ ಪೆರೋಲಾ ನಗರದಲ್ಲಿ ನಡೆದಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್‌ನಲ್ಲಿ ಹುಡುಕಾಡಿದಾಗ, ಇದೇ ರೀತಿಯ ದೃಶ್ಯಾವಳಿಗಳು ‘ಪರಾನಾ ನೋ ಅರ್’ ಸುದ್ದಿ ಚಾನೆಲ್, 03 ಆಗಸ್ಟ್ 2021 ರಂದು ಪ್ರಕಟಿಸಿದ ವೀಡಿಯೊದಲ್ಲಿ ಕಂಡುಬಂದಿವೆ. ‘ಪರಾನಾ ನೋ ಆರ್’ ಒಂದು ಸುದ್ದಿ ಕಾರ್ಯಕ್ರಮವಾಗಿದ್ದು, ಬ್ರೆಜಿಲ್‌ ಮೂಲದ ‘ರಿಮೈಸ್‌’ ಸುದ್ದಿ ಮಾಧ್ಯಮದಲ್ಲಿ ನಿಯಮಿತವಾಗಿ ಪ್ರಸಾರವಾಗುತ್ತದೆ.

ಬ್ರೆಜಿಲ್‌ನ ಪೆರೋಲಾದಲ್ಲಿ ಬ್ರೆಜಿಲ್ ಪೊಲೀಸರು ಯುವ ಬೈಕ್ ಸವಾರನನ್ನು ಹಿಡಿಯುವ ದೃಶ್ಯಾವಳಿಗಳು ಎಂದು ಈ ವೀಡಿಯೊ ವರದಿ ಹೇಳಿದೆ. ಈ ಘಟನೆ 01 ಆಗಸ್ಟ್ 2021 ರಂದು ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆಯ ಸಂಪೂರ್ಣ ವಿವರಗಳನ್ನು ‘ರಿಕ್ಮೈಸ್’ ಸುದ್ದಿ ವೆಬ್‌ಸೈಟ್ 2021 ರ ಆಗಸ್ಟ್ 02 ರಂದು ಒಂದು ಲೇಖನವನ್ನು ಪ್ರಕಟಿಸಿತ್ತು. ಈ ಲೇಖನದಲ್ಲಿ 17 ವರ್ಷದ ಯುವ ಬೈಕ್‌‌ ಸವಾರನನ್ನು ಪೆರೋಲಾ ಮಿಲಿಟರಿ ಪೋಲಿಸ್‌ನಿಂದ ತಪ್ಪಿಸಿಕೊಂಡಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿ ಮಾಡಿದೆ. ಲೇಖನದ ಪ್ರಕಾರ, ಪೆರೋಲಾ ಮಿಲಿಟರಿ ಪೋಲಿಸ್ ಗಸ್ತು ನಡೆಸುತ್ತಿದ್ದಾಗ ಯುವ ಬೈಕ್‌‌ ಸವಾರನು ಅನುಮಾನಾಸ್ಪದ ರೀತಿಯಲ್ಲಿ ಪೊಲೀಸ್ ಕಾರನ್ನು ಹಿಂದಿಕ್ಕಿ ಮತ್ತು ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು

ಪೆರೋಲಾ ಪೊಲೀಸ್ ಸಿಬ್ಬಂದಿ ಪರ್ಲ್ ಅವೆನ್ಯೂ ಬೈಂಗ್ಟನ್‌ನಲ್ಲಿ ಈ ಬೈಕ್ ಸವಾರನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಯುವಕನು ಬೈಕ್‌ನಿಂದ  ಬಿದ್ದ ನಂತರ ಮತ್ತೆ ಎದ್ದು ಓಡಲು ಪ್ರಯತ್ನಿಸಿದಾಗ ಪೋಲಿಸ್ ಅಧಿಕಾರಿಯು ಹಾರಿ ಬಂದು ಕಾಲಲ್ಲಿ ಒದ್ದು ಮತ್ತೆ ಕೆಡವುತ್ತಾರೆ.

ಪರವಾನಗಿ ಇಲ್ಲದೆ ಚಾಲನೆ, ನಿಲ್ಲಿಸುವಂತೆ ಕೇಳಿಕೊಂಡ ಆದೇಶಗಳನ್ನು ಪಾಲಿಸದಿರುವುದು, ಅಪಾಯಕಾರಿ ಚಾಲನೆ, ತಪ್ಪಾದ ದಾರಿಯಲ್ಲಿ ಓಡಿಸಿದ ಆರೋಪಗಳೊಂದಿಗೆ ಯುವಕನನ್ನು ಬಂಧಿಸಲಾಗಿದೆ. ಈ ಘಟನೆಯ ವಿವರಗಳನ್ನು ಹಲವಾರು ಸುದ್ದಿ ವೆಬ್‌ಸೈಟ್‌ಗಳು ವರದಿ ಮಾಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ಈ ಎಲ್ಲ ಸಾಕ್ಷ್ಯಾಧಾರಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಭಾರತದ  ಶ್ರೀನಗರದ ವಿಡಿಯೊ ಅಲ್ಲ, ಬ್ರೆಜಿಲ್‌ನದ್ದು ಎಂದು ತೀರ್ಮಾನಿಸಬಹುದು. ಒಟ್ಟಾರೆಯಾಗಿ ಹೇಳುವುದಾದರೆ, ಶ್ರೀನಗರದಲ್ಲಿ ಭಯೋತ್ಪಾದಕರನ್ನು ಬಂಧಿಸುವ ದೃಶ್ಯಗಳು ಎಂದು ಬ್ರೆಜಿಲ್‌ನಲ್ಲಿ ನಡೆದ ಘಟನೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...