Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ಫ್ಯಾಕ್ಟ್‌‌ಚೆಕ್‌: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

- Advertisement -
- Advertisement -

‘ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರನ್ನು ಸೆರೆಹಿಡಿಯುತ್ತಿರುವ ಪೊಲೀಸ್ ಸಿಬ್ಬಂದಿಯ ಲೈವ್ ದೃಶ್ಯಾವಳಿ’ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ಕೆಲವು ಕಡೆಯಲ್ಲಿ ಇದೇ ವಿಡಿಯೋವನ್ನು, ‘ಉತ್ತರ ಪ್ರದೇಶ ಪೊಲೀಸರು ಗಾಜಿಯಾಬಾದ್‌ನಲ್ಲಿ ಕಳ್ಳನನ್ನು ಹಿಡಿಯುವ ದೃಶ್ಯಗಳು’ ಎಂದು ಹೇಳಿ ಶೇರ್‌ ಮಾಡಲಾಗುತ್ತಿದೆ.

ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿತ್ತು. ಈ ವರದಿಗಳ ನಡುವೆ, ಈ ವೈರಲ್‌ ವಿಡಿಯೊ ಮತ್ತು ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋ, ಬ್ರೆಜಿಲ್ ಪೊಲೀಸ್ ಸಿಬ್ಬಂದಿ 17 ವರ್ಷದ ಯುವ ಬೈಕ್ ಸವಾರನನ್ನು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಿರುವ ವಿಡಿಯೊವಾಗಿದೆ. ಈ ಘಟನೆ 2021 ಆಗಸ್ಟ್ 01 ರಂದು ಬ್ರೆಜಿಲ್‌ನ ಪೆರೋಲಾ ನಗರದಲ್ಲಿ ನಡೆದಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್‌ನಲ್ಲಿ ಹುಡುಕಾಡಿದಾಗ, ಇದೇ ರೀತಿಯ ದೃಶ್ಯಾವಳಿಗಳು ‘ಪರಾನಾ ನೋ ಅರ್’ ಸುದ್ದಿ ಚಾನೆಲ್, 03 ಆಗಸ್ಟ್ 2021 ರಂದು ಪ್ರಕಟಿಸಿದ ವೀಡಿಯೊದಲ್ಲಿ ಕಂಡುಬಂದಿವೆ. ‘ಪರಾನಾ ನೋ ಆರ್’ ಒಂದು ಸುದ್ದಿ ಕಾರ್ಯಕ್ರಮವಾಗಿದ್ದು, ಬ್ರೆಜಿಲ್‌ ಮೂಲದ ‘ರಿಮೈಸ್‌’ ಸುದ್ದಿ ಮಾಧ್ಯಮದಲ್ಲಿ ನಿಯಮಿತವಾಗಿ ಪ್ರಸಾರವಾಗುತ್ತದೆ.

ಬ್ರೆಜಿಲ್‌ನ ಪೆರೋಲಾದಲ್ಲಿ ಬ್ರೆಜಿಲ್ ಪೊಲೀಸರು ಯುವ ಬೈಕ್ ಸವಾರನನ್ನು ಹಿಡಿಯುವ ದೃಶ್ಯಾವಳಿಗಳು ಎಂದು ಈ ವೀಡಿಯೊ ವರದಿ ಹೇಳಿದೆ. ಈ ಘಟನೆ 01 ಆಗಸ್ಟ್ 2021 ರಂದು ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆಯ ಸಂಪೂರ್ಣ ವಿವರಗಳನ್ನು ‘ರಿಕ್ಮೈಸ್’ ಸುದ್ದಿ ವೆಬ್‌ಸೈಟ್ 2021 ರ ಆಗಸ್ಟ್ 02 ರಂದು ಒಂದು ಲೇಖನವನ್ನು ಪ್ರಕಟಿಸಿತ್ತು. ಈ ಲೇಖನದಲ್ಲಿ 17 ವರ್ಷದ ಯುವ ಬೈಕ್‌‌ ಸವಾರನನ್ನು ಪೆರೋಲಾ ಮಿಲಿಟರಿ ಪೋಲಿಸ್‌ನಿಂದ ತಪ್ಪಿಸಿಕೊಂಡಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿ ಮಾಡಿದೆ. ಲೇಖನದ ಪ್ರಕಾರ, ಪೆರೋಲಾ ಮಿಲಿಟರಿ ಪೋಲಿಸ್ ಗಸ್ತು ನಡೆಸುತ್ತಿದ್ದಾಗ ಯುವ ಬೈಕ್‌‌ ಸವಾರನು ಅನುಮಾನಾಸ್ಪದ ರೀತಿಯಲ್ಲಿ ಪೊಲೀಸ್ ಕಾರನ್ನು ಹಿಂದಿಕ್ಕಿ ಮತ್ತು ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು

ಪೆರೋಲಾ ಪೊಲೀಸ್ ಸಿಬ್ಬಂದಿ ಪರ್ಲ್ ಅವೆನ್ಯೂ ಬೈಂಗ್ಟನ್‌ನಲ್ಲಿ ಈ ಬೈಕ್ ಸವಾರನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಯುವಕನು ಬೈಕ್‌ನಿಂದ  ಬಿದ್ದ ನಂತರ ಮತ್ತೆ ಎದ್ದು ಓಡಲು ಪ್ರಯತ್ನಿಸಿದಾಗ ಪೋಲಿಸ್ ಅಧಿಕಾರಿಯು ಹಾರಿ ಬಂದು ಕಾಲಲ್ಲಿ ಒದ್ದು ಮತ್ತೆ ಕೆಡವುತ್ತಾರೆ.

ಪರವಾನಗಿ ಇಲ್ಲದೆ ಚಾಲನೆ, ನಿಲ್ಲಿಸುವಂತೆ ಕೇಳಿಕೊಂಡ ಆದೇಶಗಳನ್ನು ಪಾಲಿಸದಿರುವುದು, ಅಪಾಯಕಾರಿ ಚಾಲನೆ, ತಪ್ಪಾದ ದಾರಿಯಲ್ಲಿ ಓಡಿಸಿದ ಆರೋಪಗಳೊಂದಿಗೆ ಯುವಕನನ್ನು ಬಂಧಿಸಲಾಗಿದೆ. ಈ ಘಟನೆಯ ವಿವರಗಳನ್ನು ಹಲವಾರು ಸುದ್ದಿ ವೆಬ್‌ಸೈಟ್‌ಗಳು ವರದಿ ಮಾಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ಈ ಎಲ್ಲ ಸಾಕ್ಷ್ಯಾಧಾರಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಭಾರತದ  ಶ್ರೀನಗರದ ವಿಡಿಯೊ ಅಲ್ಲ, ಬ್ರೆಜಿಲ್‌ನದ್ದು ಎಂದು ತೀರ್ಮಾನಿಸಬಹುದು. ಒಟ್ಟಾರೆಯಾಗಿ ಹೇಳುವುದಾದರೆ, ಶ್ರೀನಗರದಲ್ಲಿ ಭಯೋತ್ಪಾದಕರನ್ನು ಬಂಧಿಸುವ ದೃಶ್ಯಗಳು ಎಂದು ಬ್ರೆಜಿಲ್‌ನಲ್ಲಿ ನಡೆದ ಘಟನೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...