Homeಮುಖಪುಟಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

’ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ’

- Advertisement -
- Advertisement -

“ನರೇಂದ್ರ ಮೋದಿ ಸರ್ಕಾರ ಬಿಎಸ್ಎನ್ಎಲ್, ರೈಲ್ವೆ, ವಿಮಾನ ನಿಲ್ದಾಣಗಳಂತಹ ದೇಶದ ಸಾರ್ವಜನಿಕ ಸ್ವಾಮ್ಯದ ಆಸ್ತಿಗಳಲ್ಲಿನ ಸರ್ಕಾರದ ಶೇರುಗಳನ್ನು ಹಿಂಪಡೆದು, ಖಾಸಗಿ ಹೂಡಿಕೆಗೆ ಅವಕಾಶ ನೀಡುತ್ತಿದೆ. ಈ ಮೂಲಕ ಮೋದಿಯವರು ದೇಶದ ಸಂಪತ್ತನ್ನು ಅಂಬಾನಿ, ಅದಾನಿಯಂತ ಕಾರ್ಪೊರೇಟ್ ವಲಯದ ಜನರಿಗೆ ಮಾರಾಟ ಮಾಡುತ್ತಿದ್ದಾರೆ”- ಶಂಕರಗೌಡ ಚನ್ನಬಸವನಗೌಡ ಪಾಟೀಲ್, ಬ್ಯಾಡಗಿ.

“ಅಚ್ಚೇ ದಿನ ತರುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದೆ. ಅಚ್ಚೇ ದಿನ ನಮ್ಮ ಬದುಕಿನಲ್ಲಿ ಬರಲೇ ಇಲ್ಲ”- ಮಲ್ಲೇಶಪ್ಪ, ಕೋಲಾರ

“ಈ ಹಿಂದೆ ಗಾರೆ ಕೆಲಸ ಮಾಡುತ್ತಿದ್ದವಳು ಈಗ ಕಸ-ಮುಸುರೆ ಕೆಲಸಕ್ಕೆ ಹೋಗುತ್ತಿದ್ದೇನೆ. ಬಿಜೆಪಿ ಸರ್ಕಾರ ನಮಗೆ ಸರಿಯಾಗಿ ವೃದ್ಧಾಪ್ಯ ವೇತನವನ್ನೂ ಕೊಡುತ್ತಿಲ್ಲ. ನನಗೆ ಜೀವನದಲ್ಲಿ ಯಾರೂ ಆಸರೆ ಇಲ್ಲ. ನಮ್ಮಂತ ನಿರ್ಗತಿಕರು ಜೀವನ ಮಾಡುವುದು ತುಂಬಾ ಕಷ್ಟವಾಗಿದೆ”- 75 ವರ್ಷದ ಅಜ್ಜಿ.

ಈ ಎಲ್ಲಾ ಹೇಳಿಕೆಗಳು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ನಡೆಸುತ್ತಿರುವ ಬಿಜೆಪಿಯ ಲೂಟಿಯ ವಿರುದ್ದ ಭಾರತ (#IndiaAgainstBJPLoot) ಎಂಬ ಅಭಿಯಾನದಲ್ಲಿ ಬಂದಿರುವುವು.

ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು LPG ಬೆಲೆಗಳ ಏರಿಕೆ, ಆಸ್ತಿ ಮಾರಾಟ ಮಾಡುವ ವಿರುದ್ದ ಒಕ್ಕೂಟ ಸರ್ಕಾರದ ದಾಳಿ ಮಾಡುತ್ತಿದೆ. ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದುಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಪಕ್ಷವು ಒತ್ತಾಯಿಸುತ್ತಿದೆ.

ಇದನ್ನೂ ಓದಿ: LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಅಭಿಯಾನ ನಡೆಸುತ್ತಿದ್ದು, ನಾಡಿನ ಹಲವು ಮಂದಿ ವಿಡಿಯೊ ಮೂಲಕ ಬೆಲೆ ಏರಿಕೆಯಿಂದಾಗಿರುವ ಸಂಕಷ್ಟಗಳ ಕುರಿತು ಮಾತನಾಡಿದ್ದಾರೆ. ಜನರ ಮೂಲಕವೇ ಸಮಸ್ಯೆಗಳನ್ನು ಹೊರಗೆಳೆಯುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾವೆಲ್ಲ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೆವು. ಆದರೆ ಈಗ ಮೋದಿ ಸರ್ಕಾರ ಬಂದ ಮೇಲೆ ನಾವು, ಮಕ್ಕಳೆಲ್ಲ ಅರೆ ಹೊಟ್ಟೆ ಊಟ ಮಾಡುತ್ತಿದ್ದೇವೆ. ಬಿಜೆಪಿ ಸರ್ಕಾರ ಬಡವರ ಬದುಕನ್ನು ಮತ್ತಷ್ಟು ಹೀನಾಯವಾಗಿಸಿದೆ” ಎಂದು ಮಹಿಳೆಯೊಬ್ಬರು ಮಾತನಾಡಿದ್ದಾರೆ.

“ಈ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಈಗ 2 ಕೆ.ಜಿ ಕೊಡುತ್ತಿದ್ದಾರೆ. ನಾವು ಗಾರ್ಮೆಂಟ್ಸ್ ಗೆ ಹೋಗಿ ಕೂಲಿ ಮಾಡಿಕೊಂಡು ತಿನ್ನುವ ಜನ. ಇಷ್ಟು ಅಕ್ಕಿಯಲ್ಲಿ ನಾವು ಹೇಗೆ ಜೀವನ ಮಾಡುವುದು?” ಎಂದು ಮತ್ತೊಬ್ಬ ಮಹಿಳೆ ಪ್ರಶ್ನಿಸಿದ್ದಾರೆ.

ಜನರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಮಾತನಾಡಿದ್ದಾರೆ. “ದೇಶದಲ್ಲಿ, ಜನರ ತೆರಿಗೆ ಹಣದಿಂದ ಹಲವು ಸಂಸ್ಥೆಗಳು, ಮೂಲ ಸೌಕರ್ಯ, ವಿಮಾನ ನಿಲ್ದಾಣ, ಕ್ರೀಡಾಂಗಣಗಳನ್ನು ನಿರ್ಮಿಸಲಾಗಿದೆ. ಕಾಂಗ್ರೆಸ್ ದೇಶಕ್ಕೆ ಇಂತಹ ಹಲವಾರು ಕೊಡುಗೆಗಳನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರ ದೇಶದ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿಯನ್ನು ಪರಭಾರೆ (ಮಾರಾಟ) ಮಾಡುತ್ತಿರುವುದು ದುರಂತ” ಎಂದಿದ್ದಾರೆ.

ಬಿಜೆಪಿ ಸರ್ಕಾರ ದೇಶದ ಎಲ್ಲ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮೋದಿಯವರು ನಮ್ಮನ್ನು ಮಾರುವುದರಲ್ಲಿ ಯಾವುದೇ ಅನುಮಾನವಿಲ್ಲ. ನಾವೆಲ್ಲ ಒಂದಾಗಿ ಇದರ ವಿರುದ್ಧ ಹೋರಾಟ ಮಾಡೋಣ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.


ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...