Homeಮುಖಪುಟಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

ಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

- Advertisement -
- Advertisement -

ಈ ವರ್ಷ ಕೇರಳದಲ್ಲಿ ರಾಜ್ಯ ಟೆಲಿವಿಷನ್ ಪ್ರಶಸ್ತಿಗೆ ಯಾವುದೇ ಟಿವಿ ಸೀರಿಯಲ್ ಯೋಗ್ಯವಾಗಿಲ್ಲ ಎಂದು ಹೇಳಲಾಗಿದೆ. “ಕಲಾತ್ಮಕ ಮತ್ತು ತಾಂತ್ರಿಕ ಅರ್ಹತೆಯಿರುವ ಯಾವುದೇ ಧಾರವಾಹಿ ತೀರ್ಪುಗಾರರಿಗೆ ಕಂಡು ಬರದ ಕಾರಣ, ಈ ವಿಭಾಗದಲ್ಲಿ ಪ್ರಶಸ್ತಿಯನ್ನು ನೀಡದಿರಲು ನಿರ್ಧರಿಸಲಾಗಿದೆ” ಎಂದು ತೀರ್ಪುಗಾರರು ತಿಳಿಸಿದ್ದಾರೆ.

ಧಾರಾವಾಹಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ನೆಗೆಟಿವ್ ಆಗಿ ಚಿತ್ರಿಸುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕಾಗಿ, ‘ಎರಡನೇ ಅತ್ಯುತ್ತಮ ಟೆಲಿ ಸೀರಿಯಲ್’ ಪ್ರಶಸ್ತಿಯೂ ಈ ಬಾರಿ ಇಲ್ಲ. ಜೊತೆಗೆ ಅತ್ಯುತ್ತಮ ನಿರ್ದೇಶಕರ (ಟೆಲಿ ಸೀರಿಯಲ್ / ಟೆಲಿ ಫಿಲ್ಮ್) ಪ್ರಶಸ್ತಿಯನ್ನು ನೀಡದಿರಲು ತೀರ್ಪುಗಾರರು ನಿರ್ಧರಿಸಿದ್ದಾರೆ.

“ಯಾವುದೇ ಅದ್ಭುತ ಅಥವಾ ಜವಾಬ್ದಾರಿಯುತ ನಿರ್ದೇಶಕರು ಕಂಡುಬಂದಿಲ್ಲ” ಎಂದಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳು ಮತ್ತು ಹಾಸ್ಯ ಕಾರ್ಯಕ್ರಮಗಳನ್ನು ಕುಟುಂಬ ಸಮೇತರಾಗಿ ಜನ ವೀಕ್ಷಿಸುತ್ತಿರುವುದರಿಂದ, ಅವುಗಳ ವಿಷಯದಲ್ಲಿ ಹೆಚ್ಚು ಜವಾಬ್ದಾರಿಯುತವಾಗಿರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಮಲಯಾಳಂ ದೂರದರ್ಶನ ಧಾರಾವಾಹಿಗಳು ತಮ್ಮ ಕುಟುಂಬ ನಾಟಕಗಳ ಚಿತ್ರಣ, ಮನೆಗಳಲ್ಲಿ ಮಹಿಳೆಯರ ತ್ಯಾಗವನ್ನು ವೈಭವೀಕರಿಸುವ ಕಥೆಗಳು, ಕೌಟುಂಬಿಕ ದೌರ್ಜನ್ಯ ಮತ್ತು ಒಂದೇ ಮನೆಯಲ್ಲಿ ವಾಸಿಸುವ ಮಹಿಳೆಯರ ನಡುವಿನ ದ್ವೇಷದಂತಹ ವಿಷಯಗಳ ಕುರಿತು ಸಾಕಷ್ಟು ಟೀಕೆಗೆ ಒಳಗಾಗಿವೆ.

ಮೇ ಕೊನೆಯಲ್ಲಿ, ಹೊಸ ಸರ್ಕಾರವು ಅಧಿಕಾರ ವಹಿಸಿಕೊಂಡ ನಂತರ ಮತ್ತು ಸಜಿ ಚೆರಿಯನ್ ಸಂಸ್ಕೃತಿ ಸಚಿವರಾಗಿ ನೇಮಕಗೊಂಡ ನಂತರ, ಅವರು ದೂರದರ್ಶನ ಧಾರಾವಾಹಿಗಳ ಬಗ್ಗೆ ಕೆಲವು ಕಟುವಾದ ಟೀಕೆಗಳನ್ನು ಮಾಡಿದ್ದಾರೆ.

ಟಿವಿ ಕಾರ್ಯಕ್ರಮವೊಂದರ ಪ್ರಶ್ನೆಗೆ ಉತ್ತರಿಸಿದ ಸಚಿವ ಸಜಿ, ಸರ್ಕಾರವು “ಅವೈಜ್ಞಾನಿಕ ಮತ್ತು ಮೂಢನಂಬಿಕೆಯ ವಿಷಯವನ್ನು ಪ್ರಸಾರ ಮಾಡುವುದರಿಂದ” ಟೆಲಿವಿಷನ್ ಸೀರಿಯಲ್‌ಗಳ ಸೆನ್ಸಾರ್‌ಶಿಪ್ ಮತ್ತು ಸೆನ್ಸಾರ್ ಬೋರ್ಡ್ ರಚನೆ ಬಗ್ಗೆ ಯೋಚನೆ ಮಾಡುತ್ತಿದೆ ಎಂದು ಹೇಳಿದ್ದರು.

ಇದು ಕೇವಲ ಮಲಯಾಳಂ ಧಾರಾವಾಹಿಗಳ ಕಥೆಯಲ್ಲ ಹೆಚ್ಚಿನ ಭಾಷೆಗಳಲ್ಲಿ ಧಾರಾವಾಹಿಗಳು ಇಂತಹ ಕಥೆಯನ್ನೆ ಹೊಂದಿವೆ. ಮಹಿಳೆಯರು, ಅವರ ಸಂಬಂಧಗಳು, ಮಹಿಳೆಯರ ತ್ಯಾಗವನ್ನು ವೈಭವೀಕರಿಸುವುದು, ಅತ್ತೆ ಸೋಸೆ ಜಗಳ, ಅಕ್ಕ-ತಂಗಿ ಜಗಳ, ಒಬ್ಬ ಗಂಡಸಿಗಾಗಿ ಹೊಡೆದಾಡುವ ಮಹಿಳೆಯರು…..ಇಂತಹ ಕಥೆಗಳೇ ಧಾರವಾಹಿಗಳಾಗುತ್ತಿವೆ. ಧಾರವಾಹಿಗಳು ಬದಲಾಗಬೇಕಾದ ಅನಿರ್ವಾಯತೆ ಸೃಷ್ಠಿಯಾಗುವ ನಿಟ್ಟಿನಲ್ಲಿ ಕೇರಳ ಸರ್ಕಾರ ಮತ್ತು ತೀರ್ಪುಗಾರರ ಈ ನಿರ್ಧಾರವನ್ನು ಸ್ವಾಗತಿಸಬೇಕಾಗಿದೆ.


ಇದನ್ನೂ ಓದಿ: ‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...