Homeರಾಷ್ಟ್ರೀಯ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

- Advertisement -
- Advertisement -

“ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಅಲಹಾಬಾದ್‌ ಹೈಕೋರ್ಟ್ ಅಭಿಪ್ರಾಯ ತಾಳಿರುವುದು ಚರ್ಚೆಗೆ ಗ್ರಾಸವಾಗಿದೆ. ನ್ಯಾಯಾಂಗ ಬಹುಸಂಖ್ಯಾತವಾದದತ್ತ ವಾಲುತ್ತಿದೆ ಎಂಬ ಟೀಕೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದಕ್ಕೆ ಅಲಹಾಬಾದ್‌ ಹೈಕೋರ್ಟ್ ನಿಲುವು ಇಂಬು ನೀಡಿದೆ.

ಧಾರ್ಮಿಕ ಮೂಲಭೂತವಾದ, ಕೋಮುವಾದ ರಾರಾಜಿಸುತ್ತಿರುವಾಗ, ಗೋವಿನ ಹೆಸರಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗ, ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ಸಮಾಜದಲ್ಲಿ ಕ್ಷೋಭೆ ಉಂಟು ಮಾಡುತ್ತವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಗೋಹತ್ಯೆ ಮಾಡಿದ ಆರೋಪಿಗೆ ಜಾಮೀನು ನಿರಾಕರಿಸಿರುವ ಹೈಕೋರ್ಟ್, “ದೇಶದ ಸಂಸ್ಕೃತಿ ಮತ್ತು ನಂಬಿಕೆಗಳಿಗೆ ದಕ್ಕೆಯಾದಾಗ ದೇಶ ದುರ್ಬಲವಾಗುತ್ತದೆ” ಎಂದೂ ಹೇಳಿದೆ.

ಅರ್ಜಿದಾರರು “ಮತ್ತೆ ಮತ್ತೆ ಗೋಹತ್ಯೆ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದು, ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತಿದೆ. ಆರೋಪಿಯು ಪರಿಸರವನ್ನು ಹಾಳುಗೆಡುವುತ್ತಿದ್ದಾನೆ. ಗೋವನ್ನು ಪೂಜಿಸಿದರೆ ಮಾತ್ರ ದೇಶ ಏಳಿಗೆ ಹೊಂದುತ್ತದೆ. ಮೂಲಭೂತ ಹಕ್ಕುಗಳು ಗೋವನ್ನು ಭಕ್ಷಿಸುವವರ ಪರಮಾಧಿಕಾರವಲ್ಲ. ಗೋವನ್ನು ಪೂಜಿಸುವವರಿಗೂ, ಅವುಗಳನ್ನು ಅವಲಂಬಿಸಿರುವವರಿಗೂ ಮೂಲಭೂತ ಹಕ್ಕುಗಳಿವೆ. ಗೋಮಾಂಸ ತಿನ್ನುವುದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲಾಗದು” ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿಯೂ ಜಸ್ಟೀಸ್‌ ಶೇಖರ್‌ ಕುಮಾರ್ ಯಾದವ್‌ ಅವರು ಇದ್ದ ಪೀಠ ಅಭಿಪ್ರಾಯಪಟ್ಟಿದೆ.

ಗೋವನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ. ಗೋವನ್ನು ಹಿಂದೂಗಳಷ್ಟೇ ಅಲ್ಲ, ಮುಸ್ಲಿಮರೂ ಪೂಜನೀಯ ಭಾವನೆಗಳನ್ನು ಹೊಂದಿದ್ದರು. ಬಾಬರ್‌, ಅಕ್ಬರ್‌, ಹುಮಾಯೂನ್‌ ಕಾಲದಲ್ಲಿ ಗೋವಿನ ಹತ್ಯೆಯನ್ನು ನಿಷೇಧಿಸಲಾಗಿತ್ತು ಎಂದೂ ಕೋರ್ಟ್ ಹೇಳಿದೆ.

ಗೋವುಗಳು ಹಾದಿ ಬೀದಿಯಲ್ಲಿ ಅನಾಥವಾಗುತ್ತಿವೆ. ಸರ್ಕಾರ ಅವುಗಳ ರಕ್ಷಣೆಗೆ ಧಾವಿಸಬೇಕು. ವಯಸ್ಸಾದ ಹಸುಗಳಲ್ಲಿ ಬೀದಿಯಲ್ಲಿ ಬಿಟ್ಟು, ಅವು ವಿಷಕಾರಿ ವಸ್ತುಗಳನ್ನು ಸೇವಿಸಿ ಸಾಯುವುದನ್ನೂ ತಪ್ಪಿಸಬೇಕು. ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ಗೋವಿನ ರಕ್ಷಣೆ ಮೂಲಭೂತ ಹಕ್ಕೆಂದು ಪರಿಗಣಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಗೋವು ಉಸಿರಾಡುವಾಗ ಆಮ್ಲಜನಕವನ್ನು ಹೊರಗೆ ಬಿಡುತ್ತದೆ ಎಂದು ಹೇಳಿರುವುದರಲ್ಲಿ ಯಾವುದೇ ಹುರಳಿಲ್ಲ. ಉತ್ತರಖಂಡ್‌ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್‌ ರಾವತ್‌ ಹಿಂದೊಮ್ಮೆ ಇದೇ ಅಭಿಪ್ರಾಯನ್ನು ತಾಳಿದಾಗ, ಪ್ರಾಣಿವಿಜ್ಞಾನ ತಜ್ಞರು ಅವರ ಹೇಳಿಕೆಯನ್ನು ಅಲ್ಲಗಳೆದಿದ್ದರು. ಮನುಷ್ಯನಂತೆಯೇ ಗೋವು ಕೂಡ ಉಚ್ಛಾಸ, ನಿಶ್ವಾಸವನ್ನು ಹೊಂದಿದ್ದು, ಇಂಗಾಲವನ್ನು ಒಳಗೆ ತೆಗೆದುಕೊಂಡು, ಆಮ್ಲಜನಕವನ್ನು ಹೊರಗೆ ಬಿಡುತ್ತವೆ’ ಎಂದಿದ್ದರು ತಜ್ಞರು.

ಭಾವನಾತ್ಮಕ ಸಂಗತಿಗಳನ್ನೇ ವೈಜ್ಞಾನಿಕ ವಿಚಾರಗಳಂತೆ ಬಿಂಬಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಅದನ್ನು ಹೈಕೋರ್ಟ್‌ ಕೂಡ ಪರಿಶೀಲಿಸಿಲ್ಲ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ. ಗೋವಿನ ಮೂತ್ರದಲ್ಲಿ ಔಷಧೀಯ ಗುಣಗಳಿವೆ ಎಂಬ ವಾದದಲ್ಲೂ ಯಾವುದೇ ಹುರುಳಿಲ್ಲ. ಗೋವಿನ ಮಾಂಸ ರಫ್ತಿನಲ್ಲಿರುವ ಭಾರತ ಮುಂಚೂಣಿಯಲ್ಲಿದೆ. ಹೀಗಿರುವಾಗ ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ರಾಜಕೀಯ ಹಿತಾಸಕ್ತಿಗಳಿಗೆ ಬಲ ನೀಡುತ್ತವೆ ಎಂಬ ಟೀಕೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಮೂಡಿಗೆರೆ: ದಲಿತ ಯುವಕ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...