Homeರಾಷ್ಟ್ರೀಯ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

- Advertisement -
- Advertisement -

“ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಅಲಹಾಬಾದ್‌ ಹೈಕೋರ್ಟ್ ಅಭಿಪ್ರಾಯ ತಾಳಿರುವುದು ಚರ್ಚೆಗೆ ಗ್ರಾಸವಾಗಿದೆ. ನ್ಯಾಯಾಂಗ ಬಹುಸಂಖ್ಯಾತವಾದದತ್ತ ವಾಲುತ್ತಿದೆ ಎಂಬ ಟೀಕೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದಕ್ಕೆ ಅಲಹಾಬಾದ್‌ ಹೈಕೋರ್ಟ್ ನಿಲುವು ಇಂಬು ನೀಡಿದೆ.

ಧಾರ್ಮಿಕ ಮೂಲಭೂತವಾದ, ಕೋಮುವಾದ ರಾರಾಜಿಸುತ್ತಿರುವಾಗ, ಗೋವಿನ ಹೆಸರಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗ, ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ಸಮಾಜದಲ್ಲಿ ಕ್ಷೋಭೆ ಉಂಟು ಮಾಡುತ್ತವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಗೋಹತ್ಯೆ ಮಾಡಿದ ಆರೋಪಿಗೆ ಜಾಮೀನು ನಿರಾಕರಿಸಿರುವ ಹೈಕೋರ್ಟ್, “ದೇಶದ ಸಂಸ್ಕೃತಿ ಮತ್ತು ನಂಬಿಕೆಗಳಿಗೆ ದಕ್ಕೆಯಾದಾಗ ದೇಶ ದುರ್ಬಲವಾಗುತ್ತದೆ” ಎಂದೂ ಹೇಳಿದೆ.

ಅರ್ಜಿದಾರರು “ಮತ್ತೆ ಮತ್ತೆ ಗೋಹತ್ಯೆ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದು, ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತಿದೆ. ಆರೋಪಿಯು ಪರಿಸರವನ್ನು ಹಾಳುಗೆಡುವುತ್ತಿದ್ದಾನೆ. ಗೋವನ್ನು ಪೂಜಿಸಿದರೆ ಮಾತ್ರ ದೇಶ ಏಳಿಗೆ ಹೊಂದುತ್ತದೆ. ಮೂಲಭೂತ ಹಕ್ಕುಗಳು ಗೋವನ್ನು ಭಕ್ಷಿಸುವವರ ಪರಮಾಧಿಕಾರವಲ್ಲ. ಗೋವನ್ನು ಪೂಜಿಸುವವರಿಗೂ, ಅವುಗಳನ್ನು ಅವಲಂಬಿಸಿರುವವರಿಗೂ ಮೂಲಭೂತ ಹಕ್ಕುಗಳಿವೆ. ಗೋಮಾಂಸ ತಿನ್ನುವುದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲಾಗದು” ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿಯೂ ಜಸ್ಟೀಸ್‌ ಶೇಖರ್‌ ಕುಮಾರ್ ಯಾದವ್‌ ಅವರು ಇದ್ದ ಪೀಠ ಅಭಿಪ್ರಾಯಪಟ್ಟಿದೆ.

ಗೋವನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ. ಗೋವನ್ನು ಹಿಂದೂಗಳಷ್ಟೇ ಅಲ್ಲ, ಮುಸ್ಲಿಮರೂ ಪೂಜನೀಯ ಭಾವನೆಗಳನ್ನು ಹೊಂದಿದ್ದರು. ಬಾಬರ್‌, ಅಕ್ಬರ್‌, ಹುಮಾಯೂನ್‌ ಕಾಲದಲ್ಲಿ ಗೋವಿನ ಹತ್ಯೆಯನ್ನು ನಿಷೇಧಿಸಲಾಗಿತ್ತು ಎಂದೂ ಕೋರ್ಟ್ ಹೇಳಿದೆ.

ಗೋವುಗಳು ಹಾದಿ ಬೀದಿಯಲ್ಲಿ ಅನಾಥವಾಗುತ್ತಿವೆ. ಸರ್ಕಾರ ಅವುಗಳ ರಕ್ಷಣೆಗೆ ಧಾವಿಸಬೇಕು. ವಯಸ್ಸಾದ ಹಸುಗಳಲ್ಲಿ ಬೀದಿಯಲ್ಲಿ ಬಿಟ್ಟು, ಅವು ವಿಷಕಾರಿ ವಸ್ತುಗಳನ್ನು ಸೇವಿಸಿ ಸಾಯುವುದನ್ನೂ ತಪ್ಪಿಸಬೇಕು. ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ಗೋವಿನ ರಕ್ಷಣೆ ಮೂಲಭೂತ ಹಕ್ಕೆಂದು ಪರಿಗಣಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಗೋವು ಉಸಿರಾಡುವಾಗ ಆಮ್ಲಜನಕವನ್ನು ಹೊರಗೆ ಬಿಡುತ್ತದೆ ಎಂದು ಹೇಳಿರುವುದರಲ್ಲಿ ಯಾವುದೇ ಹುರಳಿಲ್ಲ. ಉತ್ತರಖಂಡ್‌ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್‌ ರಾವತ್‌ ಹಿಂದೊಮ್ಮೆ ಇದೇ ಅಭಿಪ್ರಾಯನ್ನು ತಾಳಿದಾಗ, ಪ್ರಾಣಿವಿಜ್ಞಾನ ತಜ್ಞರು ಅವರ ಹೇಳಿಕೆಯನ್ನು ಅಲ್ಲಗಳೆದಿದ್ದರು. ಮನುಷ್ಯನಂತೆಯೇ ಗೋವು ಕೂಡ ಉಚ್ಛಾಸ, ನಿಶ್ವಾಸವನ್ನು ಹೊಂದಿದ್ದು, ಇಂಗಾಲವನ್ನು ಒಳಗೆ ತೆಗೆದುಕೊಂಡು, ಆಮ್ಲಜನಕವನ್ನು ಹೊರಗೆ ಬಿಡುತ್ತವೆ’ ಎಂದಿದ್ದರು ತಜ್ಞರು.

ಭಾವನಾತ್ಮಕ ಸಂಗತಿಗಳನ್ನೇ ವೈಜ್ಞಾನಿಕ ವಿಚಾರಗಳಂತೆ ಬಿಂಬಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಅದನ್ನು ಹೈಕೋರ್ಟ್‌ ಕೂಡ ಪರಿಶೀಲಿಸಿಲ್ಲ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ. ಗೋವಿನ ಮೂತ್ರದಲ್ಲಿ ಔಷಧೀಯ ಗುಣಗಳಿವೆ ಎಂಬ ವಾದದಲ್ಲೂ ಯಾವುದೇ ಹುರುಳಿಲ್ಲ. ಗೋವಿನ ಮಾಂಸ ರಫ್ತಿನಲ್ಲಿರುವ ಭಾರತ ಮುಂಚೂಣಿಯಲ್ಲಿದೆ. ಹೀಗಿರುವಾಗ ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ರಾಜಕೀಯ ಹಿತಾಸಕ್ತಿಗಳಿಗೆ ಬಲ ನೀಡುತ್ತವೆ ಎಂಬ ಟೀಕೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಮೂಡಿಗೆರೆ: ದಲಿತ ಯುವಕ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...