Homeಕರ್ನಾಟಕಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

- Advertisement -
- Advertisement -

ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಬುಧವಾರ ರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ತನ್ನ ಗ್ರಾಮದ ಮಹಿಳೆ ಕಾಣೆಯಾಗಿದ್ದ ಪ್ರಕರಣದಲ್ಲಿ ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಲಾಗಿದೆ. ಅಮಾನವೀಯವಾಗಿ ನಡೆದುಕೊಂಡ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.

ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿತ್ತು.

ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ಬಳಿಕ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ವಿವಿಧ ಪ್ರಕರಣಗಳಲ್ಲಿ ಶಂಕಿತರನ್ನು ವಿಚಾರಣೆ ನೆಪದಲ್ಲಿ ಕರೆಸಿ ವಿಕೃತವಾಗಿ ನಡೆದುಕೊಂಡಿರುವ ಅರ್ಜುನ್ ವಿಕೃತ ಘಟನೆಗಳ ವಿವರ ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಅರ್ಜುನ್ ನನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು.

ಬಂಧನ ಸುಳಿವು ಸಿಕ್ಕ ನಂತರ ಪಿಎಸ್‌ಐ ಅರ್ಜುನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಸ್ಥಳೀಯ ನ್ಯಾಯಾಲಯ ಮತ್ತು ಹೈಕೋರ್ಟ್ ಏಕ ಸದಸ್ಯ ಪೀಠ ಕೂಡ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ ಅರ್ಜುನ್ ತಲೆ ಮರೆಸಿಕೊಂಡಿದ್ದರು. ಈಗ ಸಿಐಡಿ ಪೊಲೀಸರು ಆರೋಪಿ ಅರ್ಜುನ್‌ನನ್ನು ಬಂಧಿಸಿದ್ದಾರೆ.

ಮೇ 10 ರಂದು ಈ ಅಮಾನವೀಯ ಘಟನೆ ನಡೆದಿತ್ತು. ಅಂದೇ ಸಂತ್ರಸ್ತ ಯುವಕ ದೂರು ಸಲ್ಲಿಸಿದ್ದರು. ಆದರೆ, ಎಫ್‌ಐಆರ್‌ ದಾಖಲಾಗಿರಲಿಲ್ಲ. ಬಳಿಕ ದಲಿತ ಸಂಘರ್ಷ ಸಮಿತಿ, ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಸಾಮಾಜಿಕ ಕಾರ್ಯಕರ್ತರು, ಹಲವು ಪತ್ರಿಕೆಗಳಲ್ಲಿ ಇಂಗ್ಲಿಷ್ ಮಾಧ್ಯಮಗಳು ವರದಿ ಮಾಡಿ ಒತ್ತಡ ತಂದ ಬಳಿಕ ಮೇ 22 ರಂದು ದೂರು ದಾಖಲಾಗಿತ್ತು.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...