Homeಕರ್ನಾಟಕಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

- Advertisement -
- Advertisement -

ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಬುಧವಾರ ರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ತನ್ನ ಗ್ರಾಮದ ಮಹಿಳೆ ಕಾಣೆಯಾಗಿದ್ದ ಪ್ರಕರಣದಲ್ಲಿ ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಲಾಗಿದೆ. ಅಮಾನವೀಯವಾಗಿ ನಡೆದುಕೊಂಡ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.

ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿತ್ತು.

ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ಬಳಿಕ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ವಿವಿಧ ಪ್ರಕರಣಗಳಲ್ಲಿ ಶಂಕಿತರನ್ನು ವಿಚಾರಣೆ ನೆಪದಲ್ಲಿ ಕರೆಸಿ ವಿಕೃತವಾಗಿ ನಡೆದುಕೊಂಡಿರುವ ಅರ್ಜುನ್ ವಿಕೃತ ಘಟನೆಗಳ ವಿವರ ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಅರ್ಜುನ್ ನನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು.

ಬಂಧನ ಸುಳಿವು ಸಿಕ್ಕ ನಂತರ ಪಿಎಸ್‌ಐ ಅರ್ಜುನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಸ್ಥಳೀಯ ನ್ಯಾಯಾಲಯ ಮತ್ತು ಹೈಕೋರ್ಟ್ ಏಕ ಸದಸ್ಯ ಪೀಠ ಕೂಡ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ ಅರ್ಜುನ್ ತಲೆ ಮರೆಸಿಕೊಂಡಿದ್ದರು. ಈಗ ಸಿಐಡಿ ಪೊಲೀಸರು ಆರೋಪಿ ಅರ್ಜುನ್‌ನನ್ನು ಬಂಧಿಸಿದ್ದಾರೆ.

ಮೇ 10 ರಂದು ಈ ಅಮಾನವೀಯ ಘಟನೆ ನಡೆದಿತ್ತು. ಅಂದೇ ಸಂತ್ರಸ್ತ ಯುವಕ ದೂರು ಸಲ್ಲಿಸಿದ್ದರು. ಆದರೆ, ಎಫ್‌ಐಆರ್‌ ದಾಖಲಾಗಿರಲಿಲ್ಲ. ಬಳಿಕ ದಲಿತ ಸಂಘರ್ಷ ಸಮಿತಿ, ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಸಾಮಾಜಿಕ ಕಾರ್ಯಕರ್ತರು, ಹಲವು ಪತ್ರಿಕೆಗಳಲ್ಲಿ ಇಂಗ್ಲಿಷ್ ಮಾಧ್ಯಮಗಳು ವರದಿ ಮಾಡಿ ಒತ್ತಡ ತಂದ ಬಳಿಕ ಮೇ 22 ರಂದು ದೂರು ದಾಖಲಾಗಿತ್ತು.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...