Homeಕರ್ನಾಟಕಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

- Advertisement -
- Advertisement -

ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಬುಧವಾರ ರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ತನ್ನ ಗ್ರಾಮದ ಮಹಿಳೆ ಕಾಣೆಯಾಗಿದ್ದ ಪ್ರಕರಣದಲ್ಲಿ ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಲಾಗಿದೆ. ಅಮಾನವೀಯವಾಗಿ ನಡೆದುಕೊಂಡ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.

ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿತ್ತು.

ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ಬಳಿಕ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ವಿವಿಧ ಪ್ರಕರಣಗಳಲ್ಲಿ ಶಂಕಿತರನ್ನು ವಿಚಾರಣೆ ನೆಪದಲ್ಲಿ ಕರೆಸಿ ವಿಕೃತವಾಗಿ ನಡೆದುಕೊಂಡಿರುವ ಅರ್ಜುನ್ ವಿಕೃತ ಘಟನೆಗಳ ವಿವರ ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಅರ್ಜುನ್ ನನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು.

ಬಂಧನ ಸುಳಿವು ಸಿಕ್ಕ ನಂತರ ಪಿಎಸ್‌ಐ ಅರ್ಜುನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಸ್ಥಳೀಯ ನ್ಯಾಯಾಲಯ ಮತ್ತು ಹೈಕೋರ್ಟ್ ಏಕ ಸದಸ್ಯ ಪೀಠ ಕೂಡ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ ಅರ್ಜುನ್ ತಲೆ ಮರೆಸಿಕೊಂಡಿದ್ದರು. ಈಗ ಸಿಐಡಿ ಪೊಲೀಸರು ಆರೋಪಿ ಅರ್ಜುನ್‌ನನ್ನು ಬಂಧಿಸಿದ್ದಾರೆ.

ಮೇ 10 ರಂದು ಈ ಅಮಾನವೀಯ ಘಟನೆ ನಡೆದಿತ್ತು. ಅಂದೇ ಸಂತ್ರಸ್ತ ಯುವಕ ದೂರು ಸಲ್ಲಿಸಿದ್ದರು. ಆದರೆ, ಎಫ್‌ಐಆರ್‌ ದಾಖಲಾಗಿರಲಿಲ್ಲ. ಬಳಿಕ ದಲಿತ ಸಂಘರ್ಷ ಸಮಿತಿ, ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಸಾಮಾಜಿಕ ಕಾರ್ಯಕರ್ತರು, ಹಲವು ಪತ್ರಿಕೆಗಳಲ್ಲಿ ಇಂಗ್ಲಿಷ್ ಮಾಧ್ಯಮಗಳು ವರದಿ ಮಾಡಿ ಒತ್ತಡ ತಂದ ಬಳಿಕ ಮೇ 22 ರಂದು ದೂರು ದಾಖಲಾಗಿತ್ತು.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...