Homeಮುಖಪುಟಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

- Advertisement -
- Advertisement -

ಪಶ್ಚಿಮ ಉತ್ತರಪ್ರದೇಶದ ಕಸ್ಗಂಜ್ ಜಿಲ್ಲೆಯ ಪೊಲೀಸರು 2018 ರಲ್ಲಿ ಪತ್ನಿ ಮತ್ತು ಮಕ್ಕಳನ್ನು ಕೊಲೆಗೈದು, ಮನೆಯಲ್ಲಿ ಹೂತು ಹಾಕಿ, ಅಪರಾಧದಿಂದ ತಪ್ಪಿಸಿಕೊಳ್ಳಲು ತಾನು ಸಾವನ್ನಪ್ಪಿರುವ ಹಾಗೆ ಮತ್ತೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಪತ್ನಿ ಮತ್ತು ಮಕ್ಕಳನ್ನು ಕೊಲೆ ಮಾಡಿ ಅವರ ಶವಗಳನ್ನು ಮನೆಯಲ್ಲಿಯೇ ಹೂತು ಹಾಕಿದ್ದರು. ಮೂರು ವರ್ಷಗಳ ಹಿಂದಿನ ಘೋರ ಅಪರಾಧ ಪ್ರಕರಣವನ್ನು ಶೋಧಿಸುವಲ್ಲಿ ಸಫಲರಾಗಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಹೇಳುವಂತೆ, 34 ವರ್ಷದ ರಾಕೇಶ್, 2018 ರಲ್ಲಿ ಗ್ರೇಟರ್ ನೋಯ್ಡಾದಲ್ಲಿರುವ ಖಾಸಗಿ ಪ್ರಯೋಗಾಲಯದಲ್ಲಿ ರೋಗಶಾಸ್ತ್ರಜ್ಞನಾಗಿ ಕೆಲಸ ಮಾಡುತ್ತಿದ್ದು, ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧವಿದ್ದ ಕಾರಣ ತನ್ನ ಸಂಸಾರದ ಎಲ್ಲರನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಡಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ಆರೋಪಿ, ಆತನ ಕುಟುಂಬದ ಮೂವರು ಸದಸ್ಯರು ಹಾಗೂ ಮಹಿಳೆಯನ್ನು ಬಂಧಿಸಲಾಗಿದೆ. ಆರೋಪಿಯ ತಂದೆ ನಿವೃತ್ತ ಪೊಲೀಸ್ ಆಗಿದ್ದು, ಈ ಕೊಲೆಯ ವಿವಿಧ ಹಂತಗಳಲ್ಲಿ ಆರೋಪಿಯ ಕುಟುಂಬ ಆತನಿಗೆ ಸಹಾಯ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.

“ಆರೋಪಿ ರಾಕೇಶ್, ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು 2018 ರ ಫೆಬ್ರವರಿಯಲ್ಲಿ ಕೊಲೆ ಮಾಡಿದ್ದರು. ಮಕ್ಕಳಲ್ಲಿ ಒಂದು ಮಗುವಿಗೆ ಮೂರು ವರ್ಷ ಮತ್ತೊಂದು ಮಗುವಿಗೆ 18 ತಿಂಗಳು. ಕೊಲೆ ಮಾಡಿ ಶವಗಳನ್ನು ಮನೆಯಲ್ಲಿ ಹೂತು ಹಾಕಿ, ಅದರ ಮೇಲೆ ಸಿಮೆಂಟ್ ಕಾಂಕ್ರಿಟ್ ಹಾಕಿದ್ದರು. ಬಳಿಕ ಪೊಲೀಸ್ ಠಾಣೆಗೆ ತೆರಳಿ ಹೆಂಡತಿ, ತನ್ನ ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು” ಎಂದು ಕಸ್ಗಂಜ್ ಪೊಲೀಸ್ ಮುಖ್ಯಸ್ಥ ರೋಹನ್ ಪ್ರಮೋದ್ ಬೋತ್ರೆ ಹೇಳಿದ್ದಾರೆ.

“ಮಗಳು ನಾಪತ್ತೆಯಾದ ಕೆಲವು ತಿಂಗಳುಗಳ ನಂತರ, ರಾಕೇಶ್ ಅವರ ಮಾವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಪಹರಣ ಮತ್ತು ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ನೋಯ್ಡಾದಲ್ಲಿ ಪೋಲಿಸ್ ಕೇಸ್ ದಾಖಲಿಸಿದರು. ನೋಯ್ಡಾ ಪೊಲೀಸರು ಕಾಣೆಯಾದ ಪ್ರಕರಣ ಮತ್ತು ಮಾವ ದಾಖಲಿಸಿದ ಪ್ರಕರಣ ಎರಡನ್ನೂ ತನಿಖೆ ಮಾಡುತ್ತಿದ್ದರು, ಆದರೆ ಎರಡೂ ಪ್ರಕರಣಗಳಲ್ಲಿ ಯಾವುದೇ ಪ್ರಮುಖ ಸುಳಿವು ಸಿಕ್ಕಿರಲಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

“ಈ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಆರೋಪಿ ಮತ್ತು ಅವನ ಗೆಳತಿ ಸೇರಿಕೊಂಡು ಕಸ್ಗಂಜ್‌ನ ತನ್ನ ಹಳ್ಳಿಯಲ್ಲಿ ರಾಕೇಶ್‌ನನ್ನೇ ಹೋಲುತ್ತಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದ್ದರು. ಕೊಲೆ ಮಾಡಿ ಆತನ ತಲೆ ಮತ್ತು ಕೈಗಳನ್ನು ಕತ್ತರಿಸಿ ಬೇರೆಡೆ ಸುಟ್ಟುಹಾಕಿದರು. ನಂತರ ರಾಕೇಶ್ ಬಟ್ಟೆಗಳನ್ನು ಮೃತದೇಹಕ್ಕೆ ಹಾಕಿ, ತನ್ನ ಗುರುತಿನ ಚೀಟಿಯಲ್ಲಿ ಶವದ ಮೇಲೆ ಎಸೆದು ಹರಿಯಾಣಕ್ಕೆ ಪರಾರಿಯಾಗಿದ್ದರು” ಎಂದು ವಿವರಿಸಿದ್ದಾರೆ.

ಬಳಿಕ ಕಸ್ಗಂಜ್‌ನಲ್ಲಿ ಈ ಕೊಲೆಯ ಬಗ್ಗೆ ದೂರು ದಾಖಲಾಗಿ, ತಲೆಯಿಲ್ಲದ ಶವದ ಡಿಎನ್‌ಎ ಪರೀಕ್ಷೆ ನಡೆಸಿದ ಬಳಿಕ ಇದು ರಾಕೇಶ್ ಶವವಲ್ಲ ಎಂದು ತಿಳಿದು ಬಂದಿದೆ. ನಂತರ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಆತ ಹರಿಯಾಣದಲ್ಲಿ ದಿಲೀಪ್ ಶರ್ಮಾ ಎಂಬ ಹೆಸರಿನಲ್ಲಿ ವಾಸಿಸುತ್ತಿದ್ದು ಪತ್ತೆಯಾಗಿ ಪೊಲೀಸರು ಬಂಧಿಸಿದ್ದಾರೆ.

ಒಟ್ಟಾರೆ ಮೊದಲು ಮಾಡಿದ ಮೂರು ಕೊಲೆಗಳನ್ನು ಮುಚ್ಚಿಡಲು, ಮತ್ತೊಂದು ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ ಹಿಂದಿನ ಪ್ರಕರಣ ಬಹಿರಂಗವಾಗಿದೆ. ಆದರೆ, ಈ ಘಟನೆಯಿಂದ ಗ್ರೆಟರ್‌ ನೋಯ್ಡಾದ ಜನ ಬೆಚ್ಚಿಬಿದ್ದಿದ್ದಾರೆ.


ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...